ಸಂಚಾರಿ ನಿಯಮ ಪಾಲಿಸದಿದ್ದರೆ ದಂಡ ಖಚಿತ
ವಿಮೆ ಮಾಡಿಸದೇ ಪೊಲೀಸರ ಕೈಗೆ ಸಿಕ್ಕಿ ಬಿದ್ದರೆ ಕನಿಷ್ಟ 1000 ರೂ. ದಂಡ
Team Udayavani, Jul 12, 2019, 2:36 PM IST
ಗದಗ: ನಗರದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ನಿಲ್ಲಿಸಿದ್ದ ಬೈಕ್ಗಳನ್ನು ಸಂಚಾರಿ ಪೊಲೀಸರು ಠಾಣೆಗೆ ಸಾಗಿಸಿದರು.
ಗದಗ: ಸಂಚಾರಿ ನಿಯಮಗಳನ್ನು ಪಾಲಿಸಿ, ಇಲ್ಲವೇ ನೋ ಪಾರ್ಕಿಂಗ್ನಲ್ಲಿ ವಾಹನ ನಿಲ್ಲಿಸಿದರೆ, ವಾಹನದ ವಿಮೆ ಮಾಡಿಸದೇ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡರೆ ಕನಿಷ್ಠ 1000 ರೂ. ದಂಡ ತೆರಬೇಕಾದೀತು ಜೋಕೆ!
ಇದು ಗದಗ- ಬೆಟಗೇರಿ ಅವಳಿ ನಗರದಲ್ಲಿ ಸಂಚಾರಿ ಪೊಲೀಸರು ಧ್ವನಿವರ್ದಕದ ಮೂಲಕ ಪರಿಷ್ಕೃತ ದಂಡದ ಮೊತ್ತವನ್ನು ಪ್ರಚಾರ ಪಡಿಸಿದ ಪರಿ ಇದು. ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶದನ್ವಯ ಸಂಚಾರಿ ನಿಯಮಗಳ ಉಲ್ಲಂಘನೆಗೆ ದುಪ್ಪಟ್ಟು ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ಗುರುವಾರ ಮೈಕ್ ಮೂಲಕ ಡಂಗೂರ ಸಾರಲಾಯಿತು.
ಇದೇ ವೇಳ ಅವಳಿ ನಗರದ ಪ್ರಮುಖ ವೃತ್ತಗಳ ನೋ ಪಾರ್ಕಿಂಗ್ ಪ್ರದೇಶದಲ್ಲಿ ಬೇಕಾಬಿಟ್ಟಿಯಾಗಿ ನಿಲ್ಲಿಸಲಾಗಿದ್ದ ಬೈಕ್ಗಳನ್ನು ಪೊಲೀಸ್ ಠಾಣೆಗೆ ಸಾಗಿಸುವ ಮೂಲಕ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿ, ಬಿಸಿ ಮುಟ್ಟಿಸಲಾಯಿತು.
ಪ್ರೊಬೇಷನರಿ ಡಿವೈಎಸ್ಪಿ ನವೀನ ಕುಮಾರ ನೇತೃತ್ವದಲ್ಲಿ ಸಂಚಾರಿ ಠಾಣೆ ಪಿಎಸ್ಐ ಕಮಲಾ ದೊಡ್ಡಮನಿ ಹಾಗೂ ಸಿಬ್ಬಂದಿ ನಗರದ ಮಹಾತ್ಮಗಾಂಧಿ ವೃತ್ತ, ರೋಟರಿ ಸರ್ಕಲ್, ಹಳೇ ಡಿಸಿ ಕಚೇರಿ ವೃತ್ತ, ಬೆಟಗೇರಿಯ ತೆಂಗಿನಕಾಯಿ ಬಜಾರ್ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುಂತೆ ಹಾಗೂ ಬೇಕಾಬಿಟ್ಟಿಯಾಗಿ ನಿಲ್ಲಿಸಿದ್ದ ಚಕ್ರ ವಾಹನಗಳನ್ನು ಟೈಗರ್ ಲಾರಿಯಲ್ಲಿ ಠಾಣೆಗೆ ಸಾಗಿಸಲಾಯಿತು.
ಇದೇ ವೇಳೆ ತಮ್ಮ ವಾಹನಗಳನ್ನು ವಶಕ್ಕೆ ಪಡೆಯುತ್ತಿರುವುದನ್ನು ಗಮನಿಸಿದ ಕೆಲವರು ತಮ್ಮ ಬೈಕ್ಗಳನ್ನು ಬಿಡುವಂತೆ ಕೋರಿದರು. ಮತ್ತೂಮ್ಮೆ ಈ ರೀತಿಯಾಗಿ ಬೇಕಾಬಿಟ್ಟಿಯಾಗಿ ಬೈಕ್ ನಿಲ್ಲಿಸಿದರೆ, 1 ಸಾವಿರ ರೂ. ದಂಡ ತೆರಬೇಕಾಗುತ್ತದೆ ಎಂದು ಪೊಲೀಸರು ಖಡಕ್ಕಾಗಿ ಎಚ್ಚರಿಸಿದರು.
ಧ್ವನಿ ವರ್ಧಕ ಮೂಲಕ ಪ್ರಚಾರ: ಅವಳಿ ನಗರದ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣ, ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುವು ಮಾಡುವ ನಿಟ್ಟಿನಲ್ಲಿ ಖಾಸಗಿ ವಾಹನಗಳಿಗೆ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಪ್ರಚಾರ ಮಾಡಿದರು. ಬೈಕ್ ಸವಾರರ ಹಿತದೃಷ್ಟಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಬೈಕ್ಗಳಿಗೆ ವಿಮಾ ಮಾಡಿಸಬೇಕು. ಬೈಕ್ ಪರವಾನಗಿ ಪಡೆದುಕೊಂಡು ಬೈಕ್ ಓಡಿಸಬೇಕು. ಸಂಚಾರ ನಿಮಯ ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಕುರಿತು ಪ್ರಕ್ರಿಯಿಸಿರುವ ಟ್ರಾಫಿಕ್ಸ್ ಪಿಎಸ್ಐ ಕಮಲಾ ದೊಡ್ಡಮನಿ, ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಸಂಚಾರಿ ನಿಯಗಳ ಉಲ್ಲಂಘನೆಗೆ ದುಪ್ಪಟ್ಟು ದಂಡ ವಿಧಿಸಲಾಗುತ್ತದೆ ಎಂದು ಮೈಕ್ ಮೂಲಕ ಜನಜಾಗೃತಿ ನಡೆಸಲಾಗಿದೆ. ಇದೇ ವೇಳೆ ಸಂಚಾರಿ ನಿಯಮ ಉಲ್ಲಂಘಿಸಿ, ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ನಿಲ್ಲಿಸಲಾದ 25ಕ್ಕೂ ಹೆಚ್ಚು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!
Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ