ಅಕ್ರಮ ಮರಳು ಅಡ್ಡೆಗೆ ತಹಶೀಲ್ದಾರ್‌ ಭೇಟಿ-ಪರಿಶೀಲನೆ 

ಸ್ಮಶಾನ ಭೂಮಿಯಲ್ಲಿ ಕಂದಾಯ-ಪೊಲೀಸ್‌ ಇಲಾಖೆ ಕಣ್ತಪ್ಪಿಸಿ ಮರಳು ಲೂಟಿ

Team Udayavani, Jun 23, 2021, 9:35 PM IST

22 lxr1

ಲಕ್ಷ್ಮೇಶ್ವರ: ತಾಲೂಕಿನ ಪುಟಗಾಂವ್‌ ಬಡ್ನಿ ಗ್ರಾಪಂ ವ್ಯಾಪ್ತಿಯ ಸ್ಮಶಾನ ಭೂಮಿಯಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿರುವ ಸ್ಥಳಕ್ಕೆ ಸೋಮವಾರ ತಹಶೀಲ್ದಾರ್‌ ಭ್ರಮರಾಂಬ ಗುಬ್ಬಿಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಇಲ್ಲಿನ ದೊಡ್ಡ ಹಳ್ಳಕ್ಕೆ ಹೊಂದಿಕೊಂಡಿರುವ ಸರ್ವೇ ನಂ.71ರ 6.02ಎಕರೆ ಸ್ಮಶಾನ ಭೂಮಿಯಲ್ಲಿ ಕಂದಾಯ ಮತ್ತು ಪೊಲೀಸ್‌ ಇಲಾಖೆಯ ಕಣ³ತ್ತಪ್ಪಿಸಿ ಹಗಲು, ರಾತ್ರಿ ಮರಳನ್ನು ಲೂಟಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿತು. ಸ್ಮಶಾನ ಭೂಮಿಯಲ್ಲಿ ಗುಹೆಯಾಕಾರದ ಹತ್ತಾರು ಅಡಿ ಆಳ ತೋಡಿ ಮರಳನ್ನು ತೆಗೆದು ಸಾಗಾಣಿಕೆ ಮಾಡಲಾಗಿದೆ. ಅಲ್ಲದೇ, ಮರಳು ತೆಗೆದ ಮೇಲೆ ಉಂಟಾಗಿರುವ ಗುಂಡಿಗಳನ್ನು ಜೆಸಿಬಿ ಬಳಸಿ ಮುಚ್ಚಲಾಗಿದೆ.

ಕಳೆದ ಅನೇಕ ವರ್ಷಗಳಿಂದ ಟ್ರ್ಯಾಕ್ಟರ್‌ ಮೂಲಕ ಅಕ್ರಮವಾಗಿ ಸಾಗಿಸುವ ಕಾರ್ಯ ಅವ್ಯಾಹತವಾಗಿ ನಡೆಯುತ್ತಾ ಬಂದಿದೆ ಎಂಬ ಮಾಹಿತಿಯನ್ನು ಸ್ಥಳೀಯರಿಂದ ಪಡೆದುಕೊಂಡರು. ಬಳಿಕ ಗ್ರಾಮ ಲೆಕ್ಕಾಧಿಕಾರಿ ಆರ್‌.ಟಿ. ನೆಗಳೂರ ಮತ್ತು ಪಿಡಿಒ ಎಂ.ಆರ್‌. ಮಾದರ ಅವರಿಗೆ ಸ್ಮಶಾನ ಭೂಮಿಯ ಸುತ್ತಲೂ ಆಳವಾದ ತಗ್ಗು(ಟ್ರೆಂಚ್‌)ತೋಡಿಸುವಂತೆ ಮತ್ತು ಸ್ಮಶಾನ ಭೂಮಿ ಸುತ್ತಲಿನ ರೈತರು ಮರಳು ದಂಧೆಕೋರರಿಗೆ ರಸ್ತೆ ಅವಕಾಶ ಕಲ್ಪಿಸಕೂಡದು. ಹಾಗೂ ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಈ ವೇಳೆ ಗ್ರಾಮದ ಕೆಲವರು ಮಾತನಾಡಿ, ಇಲ್ಲಿ ಕಳೆದ ಏಳೆಂಟು ವರ್ಷದಿಂದ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ. ಗ್ರಾಮದಿಂದ ದೂರವಿರುವ ಈ ಸ್ಮಶಾನಭೂಮಿ ಹೆಸರಿಗೆ ಮಾತ್ರ ಆದಂತಾಗಿದೆ. ಅಧಿಕಾರಿಗಳು ಏನೆಲ್ಲ ಸರ್ಕಸ್‌ ಮಾಡಿದರೂ ಈ ಅಕ್ರಮ ದಂಧೆ ತಡೆಯಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಸ್ಮಶಾನ ಭೂಮಿಯನ್ನು ಸರ್ಕಾರ ವಶಪಡಿಸಿಕೊಂಡು ಗ್ರಾಮದ ಹತ್ತಿರ ಬೇರೆ ಸ್ಮಶಾನ ಭೂಮಿ ವ್ಯವಸ್ಥೆ ಮಾಡಬೇಕು. ಇಲ್ಲಿ ಮರಳು ತೆಗೆಯಲು ಅ ಧಿಕೃತ ಪರವಾನಗಿ ನೀಡಿದರೆ ಸರ್ಕಾರಕ್ಕೆ ರಾಜಸ್ವವಾದರೂ ಸಂಗ್ರಹವಾಗುತ್ತದೆ ಮತ್ತು ಗ್ರಾಮದ ಜನರ ಸ್ಮಶಾನಭೂಮಿ ಸಮಸ್ಯೆಗೂ ಪರಿಹಾರ ಸಿಕ್ಕಂತಾಗುತ್ತದೆ ಎಂದರು.

ಎಲ್ಲವನ್ನೂ ಆಲಿಸಿದ ತಹಶೀಲ್ದಾರ್‌ರು, ಈ ಬಗ್ಗೆ ಸಮಗ್ರ ವರದಿಯನ್ನು ಜಿಲ್ಲಾ ಧಿಕಾರಿಗಳಿಗೆ ಸಲ್ಲಿಸಲಾಗುವುದು ಮತ್ತು ಇಲ್ಲಿನ ಅಕ್ರಮ ತಡೆಯಲು ಪೊಲೀಸರು, ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಪಂ ಆಡಳಿತ ಮಂಡಳಿಗೆ ಸೂಚಿಸಲಾಗುವುದು ಎಂದರು. ಈ ವೇಳೆ ಸಿಪಿಐ ವಿಕಾಸ ಲಮಾಣಿ, ಪಿಎಸ್‌ಐ ಪಿ.ಎಂ.ಬಡಿಗೇರ, ಗ್ರಾಪಂ ಸಿಬ್ಬಂದಿ, ಗ್ರಾಪಂ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.