ಪಡಿತರ ಅಕ್ಕಿ ಕಾಳಸಂತೆಗೆ: ಅಧಿಕಾರಿಗಳ ದಾಳಿ ಪಡಿತರ ಅಕ್ಕಿ ವಶ
ಹೊರ ರಾಜ್ಯಕ್ಕೆ ಸಾಗಿಸಲಾಗುತ್ತಿತ್ತು ಅಕ್ಕಿ
Team Udayavani, May 14, 2020, 2:09 PM IST
ಸಾಂದರ್ಭಿಕ ಚಿತ್ರ
ಗದಗ: ನಗರದ ಎರಡು ಕಡೆ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಹಾಗೂ ಹೊರ ರಾಜ್ಯಕ್ಕೆ ಸಾಗಿಸಲು ಲಾರಿಗೆ ತುಂಬುತ್ತಿರುವಾಗ ಅಧಿಕಾರಿಗಳು ಪ್ರತ್ಯೇಕ ದಾಳಿ ನಡೆಸಿದ್ದು, ಸುಮಾರು ಐದಾರು ಟನ್ನಷ್ಟು ಅಕ್ಕಿ ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಅನ್ನಭಾಗ್ಯದ ಅಕ್ಕಿ ಕಾಳಸಂತೆಗೆ ಸಾಗಾಟವಾಗುತ್ತಿದೆ ಎಂಬ ಸಾರ್ವಜನಿಕರ ಆರೋಪಕ್ಕೆ ಪುಷ್ಟಿ ನೀಡಿದೆ.
ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಇಲ್ಲಿನ ಅಬ್ಬಿಗೇರಿ ಕಾಂಪೌಂಡ್ ಭಾಗದಲ್ಲಿ ಮೂರು ಟಂಟಂ ವಾಹನಗಳಲ್ಲಿ ಅಕ್ಕಿಯನ್ನು ತರಲಾಗಿತ್ತು. ಈ ಕುರಿತು ಅನುಮಾನಗೊಂಡ
ಸ್ಥಳೀಯರೊಬ್ಬರು ಗದಗ ತಾಪಂ ಇಒ ಡಾ| ಎಚ್.ಎಸ್. ಜಿನಗಾ ಅವರಿಗೆ ಮಾಹಿತಿ ನೀಡಿದ್ದು, ಅವರು ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆ ಅ ಧಿಕಾರಿಗಳ
ಗಮನ ಸೆಳೆದರು. ಬಳಿಕ ಆಹಾರ ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ ಹಾಗೂ ಇತರೆ ಸಿಬ್ಬಂದಿ ದಾಳಿ ನಡೆಸಿ, ಅಕ್ಕಿ ಮೂಟೆ ತುಂಬಿದ್ದ ಎರಡು ಟಂಟಂ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಅಕ್ಕಿ ತುಂಬುತ್ತಿದ್ದವರ ವಿಚಾರಣೆ ಆರಂಭಿಸುತ್ತಿದ್ದಂತೆ ಕಾರ್ಮಿಕರು ಹಾಗೂ ಇಬ್ಬರು ಟಂಟಂ ಚಾಲಕರು ಕಾಲ್ಕಿತ್ತಿದ್ದಾರೆ. ಅಲ್ಲದೇ ನಗರದಿಂದ ಸಂಗ್ರಹಿಸಿದ ಅಕ್ಕಿಯನ್ನು
ಗೋವಾ ರಾಜ್ಯಕ್ಕೆ ಸಾಗಿಸಲಾಗುತ್ತಿದೆ ಎಂದು ಹೇಳಲಾಗಿದೆ.
ನೂರಾರು ಮೂಟೆ ದಾಸ್ತಾನು: ಇದೇ ವೇಳೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಎಪಿಎಂಸಿ ಹಿಂಭಾಗದ ಗೋದಾಮಿನಲ್ಲಿ ನೂರಾರು ಮೂಟೆ ಅನ್ನಭಾಗ್ಯ ಅಕ್ಕಿ ದಾಸ್ತಾನು ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸುದ್ದಿ ತಿಳಿಯುತ್ತಿದ್ದಂತೆ ಗೋದಾಮಿನ ಮೇಲೆ ದಾಳಿ ನಡೆಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ 50 ಕೆ.ಜಿ. ತೂಕದ 200ಕ್ಕಿಂತ ಹೆಚ್ಚು ಅಕ್ಕಿ ಚೀಲ ವಶಪಡಿಸಿಕೊಳ್ಳಲಾಯಿತು. ಬಳಿಕ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್ಪಿ ಯತೀಶ್ ಎನ್. ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ