ಸಮರ್ಪಕವಾಗಿ ಪೂರೈಕೆಯಾಗದ ಶುದ್ಧ ನೀರು


Team Udayavani, Mar 7, 2020, 2:54 PM IST

ಸಮರ್ಪಕವಾಗಿ ಪೂರೈಕೆಯಾಗದ ಶುದ ನೀರು

ಸಾಂದರ್ಭಿಕ ಚಿತ್ರ

ಮುಂಡರಗಿ: ತಾಲೂಕಿನಲ್ಲಿ ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಯೋಜನೆಯು ಅನುಷ್ಠಾನಗೊಂಡಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಸಾಕಾರಗೊಂಡಿಲ್ಲ. ಪ್ರತಿದಿನವು ಶುದ್ಧ ನೀರು ಕುಡಿಯಬೇಕಾಗಿದ್ದ ಜನರಿಗೆ ನೀರು ದೊರಕದೇ ಇರುವುದು ತುಂಬಾ ಸಂಕಷ್ಟಕರ ಸ್ಥಿತಿಯನ್ನು ತಂದೊಡ್ಡಿದೆ. ಜೊತೆಗೆ ಸ್ಥಳೀಯ ಜಲಾಗಾರದಲ್ಲಿ ಸಂಗ್ರಹವಾದ ನದಿ ನೀರಿನೊಂದಿಗೆ ಕೊಳವೆಬಾವಿಯ ನೀರನ್ನೂ ನಲ್ಲಿಗಳಿಗೆ ಬೀಡುವುದರಿಂದ ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸುತ್ತಿದೆ.

ತುಂಗಭದ್ರಾ ನದಿಯ ನೀರು ಪೈಪ್‌ಲೈನಿನ ಮೂಲಕ ತಾಲೂಕಿನ ಜಾಲವಾಡಗಿ ಗ್ರಾಮದಲ್ಲಿರುವ ಶುದ್ಧೀಕರಣ ಘಟಕಕ್ಕೆ ತಲುಪಿ ಶುದ್ಧೀಕರಿಸಿ, ನಂತರ ಪ್ರತಿ ಗ್ರಾಮಗಳಿಗೂ ಸರಬರಾಜು ಮಾಡಲಾಗುತ್ತದೆ. ಈ ಶುದ್ಧೀಕರಣ ಘಟಕವು ಖಾಸಗಿ ಕಂಪನಿಯ ಉಸ್ತುವಾರಿಯಲ್ಲಿ ಇದ್ದು ನದಿ ನೀರು ಶುದ್ಧೀಕರಿಸಿ, ಶುದ್ಧ ನೀರನ್ನು ಸರಬರಾಜು ಮಾಡುವುದು ಕೂಡಾ ಈ ಕಂಪನಿಯ ಕೆಲಸವಾಗಿದೆ. ಆದರೇ ಹಲವಾರು ತಾಂತ್ರಿಕ ತೊಂದರೆಗಳಿಂದ ಪ್ರತಿ ಗ್ರಾಮಕ್ಕೂ ಶುದ್ಧ ನೀರು ತಲುಪಲು ವಿಳಂಬವಾಗುತ್ತಿದೆ. ನೀರು ಸರಬರಾಜಿನ ಪೈಪ್‌ಲೈನ್‌ನ ಸೋರುವಿಕೆ, ಪೈಪ್‌ನಲ್ಲಿ ತಡೆಯುಂಟಾಗುವುದರಿಂದ ಶುದ್ಧ ನೀರು ಹಳ್ಳಿಗಳಿಗೆ ಸರಿಯಾಗಿ ಪೂರೈಕೆಯಾಗುತ್ತಿಲ್ಲ.

ಜಾಲವಾಡಗಿಯಲ್ಲಿರುವ ನೀರು ಶುದ್ಧೀಕರಣದ ಘಟಕವು ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನ 212 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತದೆ. ಮುಂಡರಗಿ ಪಟ್ಟಣಕ್ಕೆ 6 ಎಂಎಲ್‌ಡಿ ಹಾಗೂ 56 ಹಳ್ಳಿಗಳಿಗೆ ಪ್ರತಿದಿನ 49 ಎಂಎಲ್‌ಡಿಯಷ್ಟು ತುಂಗಭದ್ರಾ ನದಿ ನೀರು ಸರಬರಾಜು ಮಾಡಲಾಗುತ್ತಿದೆ.

ನನಸಾಗುವುದೇ ಕನಸು?: ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸುವಾಗ ಪ್ರತಿ ಗ್ರಾಮದ ಪ್ರತಿಯೊಬ್ಬ ವ್ಯಕ್ತಿಗೂ ಶುದ್ದ ನೀರು ಸಿಗಬೇಕು ಎನ್ನುವ ಉದ್ದೇಶ ಹೊಂದಲಾಗಿತ್ತು. ಆದರೆ, ಶುದ್ಧೀಕರಿಸಿದ ನದಿ ನೀರು ಪ್ರತಿ ಗ್ರಾಮಕ್ಕೂ ಸರಬರಾಜು ಆಗುತ್ತಿದ್ದರೂ, ಸ್ಥಳೀಯ ಮಟ್ಟದ ಸಂಗ್ರಹಗಾರದಲ್ಲಿ ನದಿ ನೀರಿಗೆ ಕೊಳವೆಯ ಬಾವಿ ನೀರನ್ನೂ ಹರಿಸುತ್ತಿದ್ದಾರೆ.

ಹೀಗಾಗಿ ಹಲವು ಗ್ರಾಮಗಳಲ್ಲಿ ಅಶುದ್ಧವಾದ ಕುಡಿಯುವ ನೀರನ್ನು ಸೇವನೆ ಮಾಡುವಂತಾಗಿದೆ. ಈ ಬಗ್ಗೆ ಆಯಾ ಗ್ರಾ.ಪಂ. ಸಿಬ್ಬಂದಿಗಳನ್ನು ವಿಚಾರಿಸಿದರೆ, ಗ್ರಾಮಕ್ಕೆ ಅಗತ್ಯವಿದ್ದಷ್ಟು ಪ್ರಮಾಣದಲ್ಲಿ ನದಿ ನೀರು ಪೂರೈಕೆಯಾಗುತ್ತಿಲ್ಲ. ಹೀಗಾಗಿ ಎಲ್ಲ ಜನರಿಗೆ ನೀರೊದಗಿಸಲು ಈ ಕ್ರಮ ಅನಿವಾರ್ಯ ಎಂದು ಅಸಹಾಯಕತೆ ತೋಡಿಕೊಳ್ಳುತ್ತಾರೆ. ಯೋಜನೆಯ ಆರಂಭಿಕ ವರ್ಷದಲ್ಲೇ ಈ ರೀತಿಯ ಸಮಸ್ಯೆ ಎದುರಾದರೆ, ಮುಂದೇನು ಎಂಬುದು ಸಾರ್ವಜನಿಕರ ಪ್ರಶ್ನೆ. ಇನ್ನು, ತಾಲೂಕಿನ ಬಹುತೇಕ ಗ್ರಾಮಗಳ ಕೊಳವೆ ಬಾವಿಗಳಲ್ಲಿ ಫ್ಲೋರೋಸೀಸ್‌ ಅಂಶ ಹೆಚ್ಚಿನ ಪ್ರಮಾಣದಲ್ಲಿದೆ. ಅದೇ ನೀರನ್ನು ನದಿ ನೀರಿನೊಂದಿಗೆ ಬೆರೆಸಿ ಕೊಡುವುದರಲ್ಲಿ ಅರ್ಥವೇನಿದೆ. ಇದು ಯೋಜನೆಯ ಆಶಯಕ್ಕೆ ವಿರುದ್ಧ ವಾಗಿದೆ ಎಂಬುದು ಆಯಾ ಗ್ರಾಮಸ್ಥರಆಕ್ರೋಶದ ನುಡಿಗಳು. ಒಟ್ಟಾರೆ, ಬಹು ನಿರಿಕ್ಷೀತವಾದ ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು 1045 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಪ್ರತಿ ಗ್ರಾಮಕ್ಕೂ ಶುದ್ಧ ನೀರು ತಲುಪಿ, ಜನರು ಶುದ್ಧ ನೀರು ಕುಡಿಯುವದರಿಂದ ಆರೋಗ್ಯ ವಂತರಾಗಿ ಬಾಳಲು ಅನುಕೂಲವಾಗಲಿದೆ ಎನ್ನುವ ಸದುದ್ದೇಶದ ಕನಸು ಯೋಜನಾ ಕರ್ತರು ಇಟ್ಟುಕೊಂಡಿದ್ದರು.

ನೀರು ಸರಬರಾಜಿಗೆ ಪೈಪ್‌ಲೈನ್‌ ಕೊರತೆ : ಮುಂಡರಗಿ ಪಟ್ಟಣದಲ್ಲಿ ಶುದ್ಧ ನೀರನ್ನು ಪ್ರತ್ಯೇಕವಾಗಿ ಸರಬರಾಜು ಮಾಡುವ ಪೈಪ್‌ಲೈನ್‌ನ ಕೊರತೆಯಿದೆ. ಬಹುತೇಕ ಜನರಿಗೆ ಶುದ್ಧ ನೀರು ಬರುತ್ತಿರುವ ಬಗ್ಗೆ ಸಮಗ್ರವಾದ ಮಾಹಿತಿಯು ಇಲ್ಲದೇ ಇರುವುದರಿಂದ ಬಹಳಷ್ಟು ಜನರು ಪಟ್ಟಣದಲ್ಲಿರುವ ಶುದ್ಧ ನೀರಿನ ಘಟಕಗಳನ್ನು ಆಶ್ರಯಿಸಿ, ಶುದ್ಧ ನೀರು ಕುಡಿಯಲು ಬಳಕೆ ಮಾಡುತ್ತಿದ್ದಾರೆ.

ತಾಲೂಕಿನ ಪ್ರತಿ ಗ್ರಾಮಕ್ಕೂ ಶುದ್ಧ ಕುಡಿಯುವ ನೀರನ್ನು ಜಾಲವಾಡಗಿಯ ನೀರು ಶುದ್ಧೀಕರಣ ಘಟಕದಿಂದ ಪ್ರತಿದಿನವೂ ಸರಬರಾಜು ಮಾಡಲಾಗುತ್ತಿದೆ. ಸ್ಥಳೀಯವಾಗಿ ಗ್ರಾಮ ಪಂಚಾಯಿತಿಯವರು ಶುದ್ಧ ನೀರನ್ನು ಸಮರ್ಪಕವಾಗಿ ಪೂರೈಕೆ ಮಾಡಬೇಕಿದೆ. ಕೆಲವೆಡೆ ಶುದ್ಧ ನೀರಿನ ಜೊತೆಗೆ ಕೊಳವೆಬಾವಿಯ ನೀರನ್ನು ಸೇರಿಸಿ ಬೀಡುತ್ತಿರುವುದು ಗಮನಕ್ಕೆ ಬಂದಿದ್ದು, ಅಂತಹ ಗ್ರಾಮ ಪಂಚಾಯಿತಿಗಳಿಗೆ ನೋಟಿಸ್‌ ಕೂಡಾ ನೀಡಲಾಗಿದೆ.  –ವೈ.ಬಿ. ಕುದರಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಅಭಿಯಂತರ

 

-ಹು.ಬಾ. ವಡ್ಡಟ್ಟಿ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.