ಅರ್ಹ ಯುವಕರನ್ನು ಮತದಾರರ ಪಟ್ಟಿಗೆ ಸೇರಿಸಿ

ಜಿಲ್ಲಾ ಮಟ್ಟದ ಸ್ವೀಪ್‌ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ| ಸುಶೀಲಾ ಬಿ. ಸೂಚನೆ

Team Udayavani, Dec 4, 2022, 11:45 AM IST

6

ಗದಗ: ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಯೇ ಪ್ರಭು. ಪ್ರತಿ ಪ್ರಜೆ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಯುವ ಸಮುದಾಯದ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ ಪ್ರಜಾತಂತ್ರ ವ್ಯವಸ್ಥೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಲು ಪ್ರೇರೇಪಿಸಬೇಕೆಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರೂ ಆದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಸುಶೀಲಾ ಬಿ. ಹೇಳಿದರು.

ನಗರದ ಜಿಪಂ ವಿಡಿಯೋ ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾಮಟ್ಟದ ಸ್ವೀಪ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವ ಸಮೂಹವನ್ನು ಮತದಾರರ ಪಟ್ಟಿಗೆ ಸೇರಿಸುವ ನೋಂದಣಿಗಾಗಿ ಅಭಿಯಾನ ಹಾಗೂ ಮಿಂಚಿನ ನೋಂದಣಿ ಕಾರ್ಯ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಅರ್ಹ ಯುವಕ, ಯುವತಿಯರು ತಪ್ಪದೇ ನೋಂದಣಿ ಮಾಡಿಕೊಳ್ಳಬೇಕೆಂದು ಹೇಳಿದರು.

ಸರ್ಕಾರಿ ಕಚೇರಿ, ಅನುದಾನಿತ ಸಂಘ, ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಹಾಗೂ ಇಲಾಖೆ, ಸಂಘ, ಸಂಸ್ಥೆಗಳಲ್ಲಿ ವ್ಯವಹರಿಸುವ ಪ್ರತಿ ಅರ್ಹ ಮತದಾರರು ಸಹ ತಮ್ಮ ಮತದಾರರ ಚೀಟಿಗೆ ಆಧಾರ್‌ ಜೋಡಣೆ ಕಾರ್ಯವನ್ನು ಪೂರ್ಣಗೊಳಿಸಬೇಕು. ಈ ಕಾರ್ಯವನ್ನು ತ್ವರಿತವಾಗಿ ಇಲಾಖಾ ಹಂತದ ಅಧಿಕಾರಿಗಳು ನಿರ್ವಹಿಸಲು ಸೂಚಿಸಿದರು.

ಇಲಾಖಾವಾರು ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಕ್ತ ಕ್ರಿಯಾ ಯೋಜನೆಗಳನ್ನು ಹಮ್ಮಿಕೊಂಡು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಜರುಗಿಸಬೇಕು. ಒಟ್ಟಾರೆ ಚುನಾವಣೆ ಪ್ರಕ್ರಿಯೆಯ ಪ್ರತಿಯೊಂದು ಹಂತಗಳನ್ನು ಮತದಾರರಿಗೆ ತಿಳಿಸಿಕೊಡುವ ಮೂಲಕ ಮತದಾನ ಪ್ರಕ್ರಿಯೆಯಲ್ಲಿ ಅರ್ಹ ಪ್ರತಿ ಮತದಾರರೂ ತಮ್ಮ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಬೇಕೆಂದರು.

ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕರಡು ಮತದಾರರ ಯಾದಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರ್‌ ಕಚೇರಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳ ಕಾರ್ಯಾಲಯ ಹಾಗೂ ಸಂಬಂಧಪಟ್ಟ ತಹಶೀಲ್ದಾರ್‌ ಕಾರ್ಯಾಲಯಗಳಲ್ಲಿ ಸ್ವೀಕರಿಸಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಸವರಾಜ ಅಡವಿಮಠ ಮಾತನಾಡಿ, 2023ರ ಜ.1ಕ್ಕೆ 18 ವರ್ಷ ಪೂರ್ಣಗೊಳ್ಳುವವರು, ಮತದಾರರ ಯಾದಿಗಳಲ್ಲಿ ಹೆಸರು ಇಲ್ಲದವರು ಈ ಅವಧಿಯಲ್ಲಿ ತಮ್ಮ ಹೆಸರುಗಳನ್ನು ನಮೂನೆ ನಂ.6 ರಲ್ಲಿ ಸಲ್ಲಿಸಬಹುದು. ಈ ಕುರಿತು ಇಲಾಖಾ ಅಧಿಕಾರಿಗಳು ಅರ್ಹರೆಲ್ಲರನ್ನು ನೋಂದಣಿ ಮಾಡಿಸಬೇಕೆಂದರು.

ಜಿಲ್ಲಾಡಳಿತದಿಂದ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಅರ್ಹ ನಾಗರಿಕರು ಹಾಗೂ 18 ವರ್ಷ ವಯೋಮಾನದ ಯುವ ಮತದಾರರು ತಮ್ಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ನಮೂನೆ 6 ರಲ್ಲಿ ಸಂಬಂಧಿಸಿದ ಬಿಎಲ್‌ಒಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶವನ್ನು ಜಿಲ್ಲೆಯ ಅರ್ಹ ಯುವಕರು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಬಹುದು ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್‌, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ ಜೆ.ಸಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಐ.ಆರ್‌. ಅಕ್ಕಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಮುಖ್ಯ ಚುನಾವಣಾ ತರಬೇತುದಾರ ಬಸವರಾಜ ಗಿರಿತಿಮ್ಮಣ್ಣವರ, ಸರ್ಕಾರಿ ಪಾಲಿಟೆಕ್ನಿಕ್‌ ಪ್ರಾಚಾರ್ಯರು, ಚುನಾವಣಾ ಶಾಖೆ ತಹಶೀಲ್ದಾರ್‌, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠಲ ಜಾಬಗೌಡ್ರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕೌಶಲ್ಯಾಭಿವೃದ್ಧಿ ಅಧಿಕಾರಿ ಮಲ್ಲೂರ ಬಸವರಾಜ ಸೇರಿದಂತೆ ಸ್ವೀಪ್‌ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಕ್ಷ್ಮೇಶ್ವರ: ಗಾಡಾ ಓಡಿಸೋ ಹಬ್ಬಕ್ಕಿದೆ ಕೃಷಿ ಸಂಸ್ಕೃತಿ ಸ್ಪರ್ಶ

ಲಕ್ಷ್ಮೇಶ್ವರ: ಗಾಡಾ ಓಡಿಸೋ ಹಬ್ಬಕ್ಕಿದೆ ಕೃಷಿ ಸಂಸ್ಕೃತಿ ಸ್ಪರ್ಶ

ಗದಗ: ದಾಖಲೆ ಇಲ್ಲದ 2.5 ಲಕ್ಷ ರೂ. ನಗದು ವಶ

ಗದಗ: ದಾಖಲೆ ಇಲ್ಲದ 2.5 ಲಕ್ಷ ರೂ. ನಗದು ವಶ

ಇಳಕಲ್ ಚೆಕ್ ಪೋಸ್ಟ್; 6.40 ಲಕ್ಷ ನಗದು ಹಾಗೂ 5 ಲಕ್ಷ ರೂ. ಮೌಲ್ಯದ ಬಟ್ಟೆಗಳು ಸೀಜ್

ಇಳಕಲ್ ಚೆಕ್ ಪೋಸ್ಟ್; 6.40 ಲಕ್ಷ ನಗದು ಹಾಗೂ 5 ಲಕ್ಷ ರೂ. ಮೌಲ್ಯದ ಬಟ್ಟೆಗಳು ಸೀಜ್

ಗದಗ: ಮಾದರಿಯಾಗಲಿ ಸೈನಿಕ ಸಮುದಾಯ ಭವನ

ಗದಗ: ಮಾದರಿಯಾಗಲಿ ಸೈನಿಕ ಸಮುದಾಯ ಭವನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.