ಕೋವಿಡ್ ಲಸಿಕೆಗೆ ಹೆಚ್ಚಿದ ಬೇಡಿಕೆ
ಲಸಿಕೆ ಪಡೆದವರಿಂದ ಸೋಂಕು ದೂರಮೊದಲು ಬೇಡ ಎಂದವರಿಂದಲೇ ಸಾಲು
Team Udayavani, Jun 7, 2021, 8:19 PM IST
ವರದಿ: ವೀರೇಂದ್ರ ನಾಗಲದಿನ್ನಿ
ಗದಗ: ಕೊರೊನಾ ಸೋಂಕು ತಡೆಯುವಲ್ಲಿ ರಾಮಬಾಣವಾಗಿರುವ ಕೋವಿಡ್ ಲಸಿಕೆಗೆ ಜಿಲ್ಲೆಯಲ್ಲಿ ಬೇಡಿಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಈವರೆಗೆ ಲಸಿಕೆ ಪಡೆದ ಲಕ್ಷಾಂತರ ಜನರಲ್ಲಿ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಸೋಂಕು ಕಂಡು ಬಂದಿದೆ.
ಈ ಮೂಲಕ ಕೋವಿಡ್ ಲಸಿಕೆಗಳು ಜನರಿಗೆ ರಕ್ಷಾ ಕವಚ ಎಂಬ ಸಂದೇಶ ಸಾರಿದೆ. ಕೋವಿಡ್-19 ನಿಯಂತ್ರಣಕ್ಕಾಗಿ ಜನರಲ್ಲಿ ರೋಗ ನಿರೋಧ ಶಕ್ತಿ ವೃದ್ಧಿಸುವ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ಗಳ ಬಗ್ಗೆ ಹಲವು ಬಗೆಯ ಚರ್ಚೆಗಳ ಬಳಿಕ ಜಿಲ್ಲೆಯಲ್ಲಿ ಬೇಡಿಕೆ ಹೆಚ್ಚುತ್ತಿದೆ.
ಜನವರಿ 16ರಿಂದ ಜಿಲ್ಲೆಯಲ್ಲಿ ವಿವಿಧ ಹಂತದಲ್ಲಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಜೂ.2ರವರೆಗೆ 1.31 ಮೊದಲ ಡೋಸ್ ಮತ್ತು 42,128 ಎರಡನೇ ಡೋಸ್ ಸೇರಿದಂತೆ ಒಟ್ಟು 2.14 ಲಕ್ಷ ಜನರು ಲಸಿಕೆ ಪಡೆದಿದ್ದಾರೆ.
ಬೇಡ ಎಂದವರಿಂದಲೇ ಸಾಲು: ಕೋವಿಡ್ 2ನೇ ಅಲೆ ತೀವ್ರವಾಗುತ್ತಿದ್ದಂತೆ ಲಸಿಕೆಗೆ ಬೇಡಿಕೆ ಹೆಚ್ಚಿದೆ. ಈ ನಡುವೆ ಲಸಿಕೆ ಬಗೆಗಿನ ಅಪನಂಬಿಕೆಗಳು ದೂರವಾಗಿದ್ದರಿಂದ ಜನರು ಮುಗಿ ಬೀಳುತ್ತಿದ್ದಾರೆ. ಕಳೆದ ಮೇ-ಜೂನ್ ತಿಂಗಳಲ್ಲಿ ಲಸಿಕಾಕರಣ ಗಣನೀಯ ಪ್ರಮಾಣದಲ್ಲಿ ಹೆಚ್ಚಿದೆ.
ಇತ್ತೀಚೆಗೆ ದಿನಕ್ಕೆ 5-6 ಸಾವಿರ ಡೋಸ್ ಲಸಿಕೆ ಪೂರೈಕೆಯಾದರೂ ಒಂದೆರಡು ದಿನಕ್ಕೆ ಖಾಲಿಯಾಗುತ್ತಿದೆ. ಈ ಹಿಂದೆ ಬೇಡವೆಂದಿದ್ದ ಜನರೂ ಲಸಿಕಾ ಕೇಂದ್ರಗಳ ಎದುರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ ಎಂಬುದು ವಿಶೇಷ.
ಮೂರೇ ದಿನದಲ್ಲಿ 2 ಸಾವಿರ ಜನರಿಗೆ ಲಸಿಕೆ: ಈ ನಡುವೆ ರಾಜ್ಯ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಘೋಷಿಸಿ, ಆ ನಂತರ ಲಸಿಕೆ ಅಭಾವದಿಂದ ಮುಂದೂಡಿತು. ಈ ನಡುವೆ ಚಾಲ್ತಿಯಲ್ಲಿದ್ದ ಮೂರೇ ದಿನಗಳಲ್ಲಿ ಜಿಲ್ಲೆಯ 2,100 ಜನರು ಲಸಿಕೆ ಪಡೆದಿದ್ದಾರೆ. ಇನ್ನೂ ಅನೇಕರು ಆನ್ಲೈನ್ನಲ್ಲಿ ನೋಂದಾಯಿಸಿಕೊಂಡು ತಮ್ಮ ಸರದಿಗಾಗಿ ಕಾಯುತ್ತಿದ್ದಾರೆ.
ಯಾರ್ಯಾರಿಗೆ ಎಷ್ಟು ಸಲ್ಲಿಕೆ?: ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತರು 9122, ಮುಂಚೂಣಿ ಕಾರ್ಯಕರ್ತರು 4856 ಜನರು ಲಸಿಕೆ ಪಡೆದು ಶೇ.100 ಗುರಿ ಸಾ ಧಿಸಿದ್ದಾರೆ. 60 ವರ್ಷ ಮೇಲ್ಪಟ್ಟವರಿಗೆ ನಿಗಿದಪಡಿಸಿದ್ದ 89975ರಲ್ಲಿ 65456 ಜನ ಮೊದಲ ಡೋಸ್, 22752 ಎರಡನೇ ಡೋಸ್, 45 ವರ್ಷ ಮೇಲ್ಪಟ್ಟವರಿಗೆ ನಿಗದಿಪಡಿಸಿದ್ದ 177129 ಜನರಲ್ಲಿ 66088 ಜನರು ಮೊದಲ ಡೋಸ್ ಮತ್ತು 19376 ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಅಲ್ಲದೇ ವಿವಿಧ ಆದ್ಯತೆ ಗುಂಪಿನಲ್ಲಿ ಗುರುತಿಸಿಕೊಂಡ 18 ವರ್ಷ ಮೇಲ್ಪಟ್ಟವರಲ್ಲಿ 11282 ಜನರು ಲಸಿಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!