ಪ್ರಾರಂಭವಾಗದ ಇಂದಿರಾ ಕ್ಯಾಂಟೀನ್
Team Udayavani, Feb 8, 2020, 4:01 PM IST
ರೋಣ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರು ಹಾಗೂ ಹಿಂದಳಿದ ಜನರಿಗೆ ರಿಯಾಯ್ತಿ ದರದಲ್ಲಿ ಊಟೋಪಹಾರ ನೀಡುವ ಉದ್ದೇಶದಿಂದ 2016 ರಲ್ಲಿ ಜಾರಿಗೆ ತಂದ ಇಂದಿರಾ ಕ್ಯಾಂಟೀನ್ಗೆ ಸೂಕ್ತ ಜಾಗವಿಲ್ಲವೆಂಬ ಕುಂಟು ನೆಪ ಮುಂದಿಟ್ಟುಕೊಂಡು ಅಧಿಕಾರಿಗಳು ಯೋಜನೆ ಪ್ರಾರಂಭಿಸದೇ ಮಹತ್ವದ ಯೋಜನೆಯೊಂದನ್ನು ಕಾಗದಲ್ಲಿಯೇ ಮುಚ್ಚಿಟ್ಟಿದ್ದಾರೆ.
ಪಟ್ಟಣದ ಪುರಸಭೆಗೆ ಸಂಬಂಧಿಸಿದ ಜಾಗಗಳು ಜನವಸತಿ ಇರುವ ಪ್ರದೇಶದಲ್ಲಿಲ್ಲ. ಕಟ್ಟಡ ನಿರ್ಮಾಣ ಮಾಡಿದರೂ ಜನರಿಗೆ ಉಪಯೋಗ ಆಗುವುದಿಲ್ಲವೆಂದು ಯೋಜನೆ ಪ್ರಾರಂಭ ಮಾಡಿಲ್ಲ. ಇದರಿಂದ ಸುಮಾರು ನಾಲ್ಕು ವರ್ಷಗಳ ಹಿಂದೆ ಜಾರಿಗೆ ಬಂದ ಈ ಯೋಜನೆ ರೋಣ ತಾಲೂಕಿನ ಜನತೆಗೆ ಇನ್ನೂ ದೊರೆಯುತ್ತಿಲ್ಲ.
12 ಲಕ್ಷ ಅನುದಾನ: ಈ ಯೋಜನೆ ಸಫಲತೆಗೆ ರಾಜ್ಯ ಸರ್ಕಾರ ಮಳಿಗೆ ನಿರ್ಮಾಣ ಮಾಡಲು ಈಗಾಗಲೇ 12 ಲಕ್ಷ ಅನುದಾನ ಬಿಡಗಡೆ ಮಾಡಿದೆ. ಕಟ್ಟಡ ನಿರ್ಮಾಣ ಮಾಡಲು ಸೂಕ್ತ ಸ್ಥಳವಿರದೇ ಕಾರಣ ಇಲಾಖೆಯ ಹೆಡ್ಡಿನಲ್ಲಿ ಅನುದಾನ ಕೊಳೆಯುತ್ತಿದೆ ಎನ್ನುವುದು ಸಾರ್ವಜನಿಕರ ಆರೋಪ.
ಮೂರು ಬಾರಿ ಪತ್ರ: ರೋಣ ಪುರಸಭೆ ಮುಖ್ಯಾಧಿಕಾರಿ ಸೂಕ್ತ ಜಾಗ ನೀಡುವಂತೆ ಕೋರಿ ರೋಣ ತಹಶೀಲ್ದಾರ್ಗೆ ಮೂರ್ನಾಲ್ಕು ಬಾರಿ ಪತ್ರ ಬರೆದಿದ್ದಾರೆ. ಆದರೆ ಕಂದಾಯ ಇಲಾಖೆಯಿಂದ ಜಾಗ ನೀಡಲು ಸಾಧ್ಯವಿಲ್ಲ ಎಂದು ಉತ್ತರ ನೀಡಿದ್ದಾರೆ. ಇದರಿಂದ ನೀ ಕೊಡೆ..ನಾ ಬಿಡೆ.. ಎಂಬಂತೆ ಪುರಸಭೆ ಹಾಗೂ ಕಂದಾಯ ಇಲಾಖೆ ಜಗಳದ ನಡುವೆ ಇಂದಿರಾ ಕ್ಯಾಂಟೀನ್ನಿಂದ ವಂಚಿತರಾಗಿದ್ದಾರೆ. ಇಂದಿರಾ ಕ್ಯಾಂಟೀನ್ ಕಟ್ಟಡಕ್ಕಾಗಿ ಅನುದಾನ ಬಂದು ಖಜಾನೆಯಲ್ಲಿ ಕೊಳೆಯುತ್ತಿದೆ. ಆದರೆ ಬಡವರಿಗೆ ರಿಯಾಯ್ತಿ ದರದಲ್ಲಿ ಊಟ- ತಿಂಡಿ ವ್ಯವಸ್ಥೆ ಇನ್ನೂ ಮರೀಚಿಕೆಯಾಗಿದೆ. ಇಂದಿರಾ ಕ್ಯಾಂಟೀನ್ ಎಲ್ಲ ಕಡೆ ಪ್ರಾರಂಭವಾಗಿ ಆ ಭಾಗದ ಸಾರ್ವಜನಿಕರು ಅದರ ಉಪಯೋಗ ಪಡೆಯುತ್ತಿದ್ದಾರೆ. ಆದರೆ ರೋಣ ತಾಲೂಕಿನ ಜನರಿಗೆ ಕ್ಯಾಂಟೀನ್ ಇನ್ನೂ ಲಭಿಸದಿರುವುದು ದೌರ್ಭಾಗ್ಯವೇ ಸರಿ.
ಈಗಾಗಲೇ ನರಗುಂದ ಶಿರಹಟ್ಟಿಯಲ್ಲಿ ಸ್ಥಳದ ಸಮಸ್ಯೆಯಿಂದ ಇಂದಿರಾ ಕ್ಯಾಂಟಿನ್ ವಿಳಂಬವಾಗಿತ್ತು. ಅದನ್ನು ಬಗೆಹರಿಸಿ ಪ್ರಾರಂಭ ಮಾಡಿದ್ದೇವೆ. ಅದೇ ರೀತಿ ರೋಣ ಪುರಸಭೆ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರ್ ಇಬ್ಬರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಜಾಗದ ಸಮಸ್ಯೆ ಬಗೆಹರಿಸಲಾಗುವುದು. – ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ
-ಯಚ್ಚರಗೌಡ ಗೋವಿಂದಗೌಡ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…