ಅನ್ಯ ಜಿಲ್ಲೆ-ರಾಜ್ಯದಿಂದ ಬಂದ ಇಬ್ಬರಿಗೆ ಸೋಂಕು
Team Udayavani, Jul 3, 2020, 4:49 PM IST
ಗದಗ: ಜಿಲ್ಲೆಯಲ್ಲಿ ಗುರುವಾರ ಇಬ್ಬರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಒಟ್ಟು 180ಕ್ಕೆ ಏರಿದೆ. ಅವುಗಳಲ್ಲಿ 4 ನಾಲ್ವರು ಮೃತಪಟ್ಟಿದ್ದು, 69 ಜನ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 107 ಸಕ್ರಿಯ ಪ್ರಕರಣಗಳಿವೆ.
ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಜೂ. 27ರಂದು ಪ್ರಯಾಣಿಸಿ ಜಿಲ್ಲೆಗೆ ಆಗಮಿಸಿದ್ದ ನಗರದ ವೀರನಾರಾಯಣ ದೇವಸ್ಥಾನ ಹತ್ತಿರದ ನಿವಾಸಿ 33 ವರ್ಷದ ವ್ಯಕ್ತಿ (ಪಿ.16612) ಹಾಗೂ ಮಧ್ಯಪ್ರದೇಶ ರಾಜ್ಯದಿಂದ ಜೂ. 25ರಂದು ಜಿಲ್ಲೆಗೆ ಆಗಮಿಸಿರುವ ತಾಲೂಕಿನ ಹೊಂಬಳ ಗ್ರಾಮದ ಕಲ್ಮೇಶ್ವರ ನಗರದ ನಿವಾಸಿ 28 ವರ್ಷದ ವ್ಯಕ್ತಿ (ಪಿ.16613)ಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕಿತರಿಗಾಗಿ ಶೋಧ ನಡೆಯುತ್ತಿದೆ. ಇನ್ನುಳಿದಂತೆ ಜಿಲ್ಲೆಯಲ್ಲಿ ಈ ವರೆಗೆ 9907 ಜನರನ್ನು ನಿಗಾಕ್ಕೆ ಒಳಪಡಿಸಲಾಗಿದೆ. ಅವರಲ್ಲಿ 85 ಜನರು ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ.
ಕೋವಿಡ್ ಸೋಂಕಿನ ಪರೀಕ್ಷೆಗಾಗಿ 10,492 ಜನರಿಂದ ಗಂಟಲಿನ ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಸಲ್ಲಿಸಿದ್ದು, 10064 ಜನರಿಗೆ ನೆಗೆಟಿವ್ ಬಂದಿದೆ. 180 ಜನರಿಗೆ ಸೋಂಕು ಖಚಿತವಾಗಿದ್ದು, ಇನ್ನೂ 248 ಜನರ ವರದಿ ಬರಬೇಕಿದೆ. ಜೊತೆಗೆ ಜು. 2ರ ವರೆಗೆ ಮುಂಬೈ-ಗದಗ ರೈಲು ಮೂಲಕ 1,177 ಪ್ರಯಾಣಿಕರು ಆಗಮಿಸಿದ್ದು, 425 ಜನ ಗದಗ ಜಿಲ್ಲೆಗೆ ಸಂಬಂಧಿಸಿದ್ದು ಅವರಲ್ಲಿ 374 ಜನರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಹಾಗೂ 51 ಜನರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗಿದೆ. 374 ಜನರ ಪೈಕಿ 21 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿರುತ್ತದೆ. ಇನ್ನುಳಿದ 752 ಜನರು ಬೇರೆ ಜಿಲ್ಲೆಯವರಾಗಿದ್ದು, ಅವರನ್ನು ಸಂಬಂಧಿಸಿದ ಜಿಲ್ಲೆಗಳಿಗೆ ಕಳುಹಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…