ಪ್ರಕೃತಿ ವಿಕೋಪ ನಿರ್ವಹಣೆಗೆ ಮಾಹಿತಿ


Team Udayavani, Nov 28, 2019, 3:10 PM IST

gadaga-tdy-2

ಶಿರಹಟ್ಟಿ: ದೇಶದಲ್ಲಿ ಉಂಟಾಗಬಹುದಾದ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸುವುದರ ಜೊತೆಗೆ ಮುಂಜಾಗೃತಾ ಕ್ರಮಗಳ ಕುರಿತು ಅಧಿಕಾರಿಗಳಿಗೆ ತರಬೇತಿ ನೀಡುವುದು ಅವಶ್ಯಕವಾಗಿದೆ. ಕೇಂದ್ರ, ರಾಜ್ಯ ಸರಕಾರ, ಜಿಲ್ಲಾಡಳಿತ ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ಜಾಗೃತಿಯನ್ನುಂಟು ಮಾಡುವ ತರಬೇತಿ ಲಾಭ ಪಡೆಯಬೇಕು. ಇದರಿಂದ ಪ್ರಕೃತಿ ವಿಕೋಪದಿಂದಾಗುವ ಪರಿಣಾಮ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಜರುಗಿದ ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಮಟ್ಟದ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರದಿಂದ ತಾಲೂಕು ಮಟ್ಟದ ಅಧಿಕಾರಿಗಳಿಗೆ ವಿಕೋಪ ನಿರ್ವಹಣಾ ಕೇಂದ್ರ ಆಡಳಿತ ತರಬೇತಿ ಸಂಸ್ಥೆ ಮೈಸೂರಿನ ಸಂಸ್ಥೆ ವತಿಯಿಂದ ಜರುಗಿದ ತರಬೇತಿ ಶಿಬಿರದ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅತೀವೃಷ್ಟಿ ಮತ್ತು ಅನಾವೃಷ್ಟಿ ಮತ್ತು ಇನ್ನಿತರ ಪ್ರಕೃತಿ ವಿಕೋಪಗಳನ್ನು ಎದುರಿಸುವ ಸಂದರ್ಭ ಬಂದರೆ ಯಾವ ರೀತಿಯಲ್ಲಿ ಸನ್ನದ್ಧರಾಗಿರಬೇಕು, ಸಾರ್ವಜನಿಕರ ರಕ್ಷಣೆ ಮತ್ತು ಅವರ ಆಸ್ತಿ ಪಾಸ್ತಿಗಳ ರಕ್ಷಣೆಗೆ ತೆಗೆದುಕೊಳ್ಳಬಹುದಾದ ಪರಿಹಾರೋಪಾಯಗಳನ್ನು ನಾವೆಲ್ಲ ತಿಳಿದುಕೊಳ್ಳವುದು ಅವಶ್ಯಕವಾಗಿದೆ. ತರಬೇತಿಯಲ್ಲಿ ಪಡೆದ ಜ್ಞಾನ ಸಾರ್ವಜನಿಕರಿಗೆ ಸಂದರ್ಭನುಸಾರವಾಗಿ ಮನವರಿಕೆ ಮಾಡಿಕೊಡುವುದು ಅವಶ್ಯಕವಾಗಿದೆ. ಜಿಲ್ಲೆಯ ರೋಣ ಮತ್ತು ನಗರಗುಂದ ತಾಲೂಕಿನಲ್ಲಿ 40 ಹಳ್ಳಿಗಳು ನೆರೆ ಹಾವಳಿಗೆ ಒಳಗಾಗಿದ್ದವು. 45 ಗಂಜಿ ಕೇಂದ್ರ ತೆರೆಯಲಾಗಿತ್ತು.

40 ಸಾವಿರ ಜನರಿಗೆ ಊಟ, ನೀರು ಆರೋಗ್ಯ, ವಸತಿ ಒದಗಿಸುವುದರ ಜೊತೆಗೆ ವಿಪತ್ತಿನಲ್ಲಿ ಒಳಗಾದವರ ರಕ್ಷಣೆಗಾಗಿ ಎನ್‌ಡಿಎಫ್‌ಆರ್‌, ಹೆಲಿಪ್ಯಾಡ್‌ ಮತ್ತು ರೈಲಿನ ಬಳಕೆ ಮಾಡಿಕೊಂಡು ಜನರನ್ನು ರಕ್ಷಣೆ ಮಾಡಲಾಗಿದೆ. ಇಂತಹ ಹತ್ತು ಹಲವು ಸುರಕ್ಷತಾ ಕ್ರಮಗಳ ಬಗ್ಗೆ ನಮಗೆಲ್ಲ ಜ್ಞಾನವಿದ್ದರೆ ವಿಪತ್ತಿನಿಂದ ಪಾರಾಗಬಹುದಾಗಿದೆ ಎಂದು ಹೇಳಿದರು.

ವಿಕೋಪ ನಿರ್ವಹಣಾ ಕೇಂದ್ರ ಆಡಳಿತ ತರಬೇತಿ ಸಂಸ್ಥೆ ಮೈಸೂರಿನ ನಿರ್ದೇಶಕ ಡಾ| ಪರಮೇಶ್ವರ ಜಿ.ಆರ್‌., ರಾಷ್ಟ್ರೀಯ ವಿಕೋಪ ನಿರ್ವಹಣಾ ಪ್ರಾಧಿಕಾರವನ್ನು ನಾಲ್ಕು ಹಂತದಲ್ಲಿ ರಚಿಸಲಾಗಿದ್ದು, ಒಂದು ರಾಷ್ಟ್ರೀಯ, ರಾಜ್ಯ, ಜಿಲ್ಲಾ ಮತ್ತು ಸ್ಥಳೀಯ ಮಟ್ಟದಲ್ಲಿ ಪ್ರಾಧಿಕಾರವನ್ನು ನಿರ್ಮಿಸಲಾಗಿದೆ. ರಾಷ್ಟ್ರೀಯ ವಿಕೋಪ ನಿರ್ವಹಣೆ ಅಧ್ಯಕ್ಷರು ಪ್ರಧಾನ ಮಂತ್ರಿಗಳಿರುತ್ತಾರೆ. ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಮಟ್ಟದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಸೇರಿದಂತೆ ಕಾರ್ಯನಿರ್ವಹಿಸುತ್ತಾರೆ ಎಂದರು.

ಜಿಲ್ಲಾ ತರಬೇತಿ ಸಂಸ್ಥೆ ಉಪಪ್ರಾಚಾರ್ಯ ಎನ್‌. ಎಸ್‌. ಸೋನೆ, ತಹಶೀಲ್ದಾರ್‌ ಯಲ್ಲಪ್ಪ ಗೋಣೆಣ್ಣವರ, ತಾಪಂ ಇಒ ಡಾ| ನಿಂಗಪ್ಪ ಓಲೇಕಾರ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಮತ್ತು ಕಾಲೇಜುಗಳ ಪ್ರಾಚಾರ್ಯರು ಇದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.