ರಾಜ್ಯ ಸರ್ಕಾರದಿಂದ ರೈತರಿಗೆ ಅನ್ಯಾಯ: ಪಾಟೀಲ
Team Udayavani, Jun 17, 2020, 3:43 PM IST
ಮುಳಗುಂದ: ಭೂ ಸುಧಾರಣಾ ಕಾನೂನು, ಎಪಿಎಂಸಿ ಕಾಯ್ದೆ ತಿದ್ದುಪಡಿಯಂಥ ನಿರ್ಧಾರಗಳಿಂದ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಶಾಸಕ ಎಚ್.ಕೆ. ಪಾಟೀಲ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಯಲಿಶಿರೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂ ಸುಧಾರಣಾ ಕಾನೂನು ತರುವ ಮೂಲಕ ಗೇಣಿದಾರರನ್ನು ಭೂ ಒಡೆಯರನ್ನಾಗಿ ಮಾಡಿದ್ದೆವು ನಾವು. ಒಕ್ಕಲಿಗರ ಭೂಮಿಯನ್ನು ಶ್ರೀಮಂತರು ಕಸಿಯಬಾರದು ಎನ್ನುವ ಉದ್ದೇಶದ, ರೈತರನ್ನು ರಕ್ಷಣೆ ಮಾಡುವ ಕಾನೂನು ತಿದ್ದುಪಡಿ ಮಾಡುವುದರಿಂದ ರೈತರ ಭೂಮಿಗೆ ಉಳಿಗಾಲವಿಲ್ಲದಂತಾಗುತ್ತದೆ ಎಂದರು.
ಈಗಗಾಲೇ ರೈತರು ನಾನಾ ಕಾರಣಗಳಿಂದ ಅಡಚಣೆಗೆ ಸಿಲುಕಿದ್ದಾರೆ. ಇಂಥ ಸಂದರ್ಭದಲ್ಲಿ ಬಂಡವಾಳ ಶಾಹಿಗಳು, ಕಪ್ಪುಹಣ ಮಾಡಿರುವವರು ಇಡೀ ಊರನ್ನೇ ಕೊಳ್ಳುವ ಮಟ್ಟದಲ್ಲಿದ್ದಾರೆ. ಇಂಥದರಲ್ಲಿ ಉಳುವವನ ಊರುಗೋಲಾಗಿರುವ ನಮ್ಮ ಭೂಮಿಯನ್ನು ಕಿತ್ತುಉಳ್ಳವವರಿಗೆ ಕೊಡುವ ಕೃತ್ಯ ಇದಾಗಿದೆ. ಈ ಕಾನೂನಿನ ವಿರುದ್ಧ ರಾಜಕೀಯವಾಗಿ ನಾವು ಹೋರಾಟ ಮಾಡುತ್ತೇವೆ. ಸಾರ್ವಜನಿಕರು, ರೈತರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುತ್ತೇವೆ. ಸರ್ಕಾರ ಕೂಡಲೇ ಈ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ