ನಿರ್ವಹಣೆ ಇಲ್ಲದೇ ಪಾಳು ಬಿದ್ದಿದೆ ಶಾಸನ


Team Udayavani, Oct 15, 2019, 12:39 PM IST

gadaga-tdy-1

ನರೇಗಲ್ಲ: ಸಮೀಪದ ಅಬ್ಬಿಗೇರಿ ಗ್ರಾಮದಲ್ಲಿ ಗತಕಾಲದ ಕಲೆ, ಸಂಸ್ಕೃತಿ, ವಾಸ್ತುಶಿಲ್ಪ ಸಾರುವ ಪ್ರಾಚೀನ ದೇವಾಲಯಗಳು, ಶಾಸನಗಳು, ವೀರಗಲ್ಲುಗಳು, ಮೂರ್ತಿಗಳು ಶಿಥಿಲಗೊಂಡು ಸೂಕ್ತ ನಿರ್ವಹಣೆ ಇಲ್ಲದೆ ಪಾಳು ಬಿದ್ದು ಅನಾಥವಾಗಿವೆ.

ಮೌಡ್ಯತೆಯಿಂದ ಶಾಸನಗಳ-ವೀರಗಲ್ಲುಗಳ ಮೇಲೆ ಜನರು ಇಂದಿಗೂ ಸುಣ್ಣ-ಬಣ್ಣ ಬಳಿಯುತ್ತಿದ್ದು, ದೇವರೆಂಬ ಕಾರಣಕ್ಕೆ ಎಣ್ಣೆ ಸುರಿದು ಮೂಲ ಸ್ವರೂಪಕ್ಕೆ ಧಕ್ಕೆ ತರಲಾಗುತ್ತಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿರುವ ಶಾಸನ, ಅಪರೂಪದ ಕಲ್ಲುಗಳು ತಿಪ್ಪೆಗುಂಡೆ, ರಸ್ತೆಯ ಬದಿ, ಅಗಸಿ ಬಾಗಿಲು, ದೇವಸ್ಥಾನಗಳ ಮುಂಭಾಗದಲ್ಲಿ ಅನಾಥವಾಗಿ ಬಿದ್ದಿವೆ.

ಅವ್ವಗೆರೆ (ಅಬ್ಬಿಗೇರಿ)ಯಲ್ಲಿ ಈವರೆಗೆ 11 ಮಹತ್ವದ ಶಾಸನಗಳು ಪತ್ತೆಯಾಗಿದ್ದು, ಅವುಗಳಲ್ಲಿ 1113ರ ಶಾಸನ ಅತ್ಯಂತ ಹಳೆಯದಾಗಿದೆ. ಮಹಾಮಂಡಳೇಶ್ವರ ಸಿಂಧ ಅರಸರು ಅಬ್ಬಿಗೆರೆಯ ದೇವೆಂಗೆರೆ 24 ಮತ್ತರು ಭೂ ದಾನವನ್ನು, ಅವನ ರಾಣಿ ದೇವುಲದೇವಿ ಚನ್ನಕೇಶವ ದೇವರಿಗೆ ಬಿಟ್ಟ ಹೂದೋಟ ಗಾಣದ ಮನೆಯನ್ನು ತಿಳಿಸುತ್ತದೆ.

ಇಲ್ಲಿಯವರೆಗೂ ದೊರೆತ ಶಾಸನಗಳು: ಗ್ರಾಮದ ಸುಟ್ಟ ಬಸಪ್ಪನ ದೇವಸ್ಥಾನ ಮುಂದಿರುವ 1125ರ ಶಾಸನ ಸೋಮೇಶ್ವರ ದೇವರಿಗೆ ಅಬ್ಬಿಗೇರಿಯ ಅರವಲ್ಕಾಕು ದಾನ ಮಾಡಿದ್ದನ್ನು ದಾಖಲಿಸಿದೆ. 1174ರ ಶಾಸನ ಮಾಣಿಕೇಶ್ವರ, ಕಪ್ಪತ್ತೇಶ್ವರ, ದೇವರಿಗೆ ಆರನೇ ವಿಕ್ರಮಾ ದಿತ್ಯ ದಾನ ಮಾಡಿರುವುದು, ಕಲಚೂರಿ ಬಿಜ್ಜಳನ ಕಾಲದ ಶಾಸನ ಇಲ್ಲಿನ ಮೂಲಸ್ಥಾನ ದೇವರಿಗೆ ದಾನ ಮಾಡಿರುವುದು, ಕ್ರಿ.ಶ. 1541ರ ಶಾಸನ ಹೊನ್ನಾಪೂರದ ಯುದ್ಧದ ಸ್ಮಾರಕವಾಗಿದೆ. ಕ್ರಿ.ಶ.17ರ ಶತಮಾನದ ಶಾಸನ ಧರ್ಮ ಏತಕ್ಕೆಂದು ಬರಗೆಯರ ಮಹಾದೇವ ನಾಯಕರು ದಾನ ಬಿಟ್ಟ ಅಂಶವನ್ನು ತಿಳಿಸುತ್ತದೆ.

ಐತಿಹಾಸಿಕ ಜ್ಯೋತಿರ್ಲಿಂಗ ದೇವಸ್ಥಾನವು ಕಲ್ಯಾಣ ಚಾಲುಕ್ಯರ ಕಾಲಕ್ಕೆ ರಚನೆಯಾಗಿದೆ. ಪ್ರಸ್ತುತ ಇದಕ್ಕೆ ಸುಣ್ಣ ಬಳಿದು ಹಿಂದಿನ ವೈಭವ ವನ್ನು ವಿರೂಪಗೊಳಿಸಲಾಗಿದೆ. ಉಡಚವ್ವನ ಗುಡಿಯ ಬಳಿ 10ನೇ ಶತಮಾನದ ಮುಕ್ಕಾದ ಚಾಮುಂಡಿ ಶಿಲ್ಪವಿದೆ. ಶಾಸನದ ಮೇಲೆ ಲಲಿತಾಸನದಲ್ಲಿ ಕುಳಿತಿರುವ ದೇವಿಯ ಕೆತ್ತನೆ ಆಕರ್ಷಕವಾಗಿದೆ. ಗ್ರಾಮದ ಉದ್ದಗಲಕ್ಕೋ ವೀರಗಲ್ಲುಗಳು ಭಗ್ನಾವಶೇಷಗಳು ಹರಡಿಕೊಂಡಿವೆ.

ಮುಂದಿನ ದಿನಗಳಲ್ಲಿ ಸಂರಕ್ಷಣೆ:  ಸಂಬಂಧಿಸಿದ ಪುರಾತತ್ವ ಮತ್ತು ಪ್ರಾಚ್ಯವಸ್ತು ಹಾಗೂ ಪ್ರವಾಸೋಧ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಗ್ರಾಮದಲ್ಲಿ ಸಭೆ ನಡೆಸಿ, ಶಾಸನ, ಮೂರ್ತಿ, ವೀರಗಲ್ಲುಗಳ ಬಗ್ಗೆ ಚರ್ಚಿಸಲಾಗುವುದು. ಮುಂದಿನ ದಿನಗಳಲ್ಲಿ ಅವುಗಳ ಸಂರಕ್ಷಣೆ ಮಾಡಲಾಗುವುದು ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಿವನಗೌಡ ಮೆಣಸಗಿ ಹೇಳಿದರು.

ಸಂಗ್ರಹಿಸಿ-ಸಂರಕ್ಷಿಸಿ: ಅಮೂಲ್ಯ ಐತಿಹಾಸಿಕ ಶಿಲ್ಪಕಲಾ ವೈಭವ ಹೊಂದಿರುವ ಗ್ರಾಮದ ಈಶ್ವರ ದೇವಸ್ಥಾನ, ಶಾಸನ, ಮೂರ್ತಿಗಳು, ವೀರಗಲ್ಲುಗಳಿವೆ. ಇವು ಕೂಡ ಕಾಲಗರ್ಭದಲ್ಲಿ ಲೀನವಾಗುವ ಹಂತ ತಲುಪುತ್ತಿವೆ. ಗ್ರಾಮದ ರೋಣದ ರಸ್ತೆಯಲ್ಲಿರುವ ವಿರುಪಾಕ್ಷ ದೇವಸ್ಥಾನ ಹತ್ತಿರ ಇವುಗಳನ್ನು ಸಂಗ್ರಹಿಸಿ ಒಂದು ಉದ್ಯಾನ ನಿರ್ಮಿಸಬೇಕೆಂದು ಉಪನ್ಯಾಸಕ ಬಸವರಾಜ ಪಲ್ಲೇದ ಆಗ್ರಹಿಸಿದ್ದಾರೆ.

 

-ಸಿಕಂದರ ಎಂ. ಆರಿ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.