ಖಾತ್ರಿ ಕೆಲಸದ ಕೂಲಿ ನೀಡುವಂತೆ ಒತ್ತಾಯ


Team Udayavani, Jun 25, 2019, 8:15 AM IST

gadaga-tdy-2..

ರೋಣ: ಉದ್ಯೋಗ ಖಾತ್ರಿ ಕೂಲಿ ನೀಡುವಂತೆ ಆಗ್ರಹಿಸಿ ತಾಲೂಕಿನ ಅಸೂಟಿ ಹಾಗೂ ಕರಮುಡಿ ಗ್ರಾಮಸ್ಥರು ತಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ರೋಣ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾಡಿದ ಕೆಲಸಕ್ಕೆ 15 ದಿನ ಕಳೆದರೂ ಇಲ್ಲಿಯವರೆಗೆ ಕೂಲಿ ನೀಡಿಲ್ಲ ಎಂದು ಆರೋಪಿಸಿ ತಾಲೂಕಿನ ಅಸೂಟಿ ಹಾಗೂ ಕರಮುಡಿ ಗ್ರಾಮಸ್ಥರು ಸೋಮವಾರ ತಾಪಾಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ರತ್ನವ್ವ ತಳವಾರ ಮಾತನಾಡಿ, ಕಳೆದ ಮೂರು ವರ್ಷದಿಂದ ಗ್ರಾಮದಲ್ಲಿ ಸಕಾಲಕ್ಕೆ ಮಳೆ ಬಾರದ ಹಿನ್ನೆಲ್ಲೆಯಲ್ಲಿ ಬೆಳೆ ಇಲ್ಲದೆ ತುತ್ತು ಕೂಳಿಗಾಗಿ ಪರಿತಪಿಸುವಂತಾಗಿದೆ. ಸರ್ಕಾರದಿಂದ ನೀಡುವ ಉದ್ಯೋಗ ಖಾತ್ರಿ ಯೋಜನೆಯಲ್ಲಾದರೂ ಕೆಲಸ ಮಾಡಿ ಜೀವನ ಸಾಗಿಸೋಣ ಎಂದರೆ ಮಾಡಿದ ಕೂಲಿಗೆ ಹಣ ಸಂದಾಯ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಎರಡು ತಿಂಗಳು ದುಡಿದರೆ ಕೇವಲ ಒಂದು ವಾರ ಎರಡು ವಾರಗಳ ಕೂಲಿ ಹಣವನ್ನು ಮಾತ್ರ ನೀಡುತ್ತಾರೆ. ಉಳಿದ ಕೂಲಿ ಹಣ ಸಂದಾಯ ಮಾಡುವಂತೆ ಕೇಳಿದರೆ ಎನ್‌ಎಂಆರ್‌ ಹಾಕಬೇಕು, ಎಂಐಎಸ್‌ ಮಾಡಬೇಕು ಎಂದು ನಾನಾ ಕಾರಣಗಳನ್ನು ಹೇಳಿ ಸತಾಯಿಸುತ್ತಿದ್ದಾರೆ. ನಮ್ಮ ಜೀವನ ನಿರ್ವಹಣೆಗೆ ಏನು ಮಾಡಬೇಕು ಎಂದು ತಮ್ಮ ಅಸಾಯಕತೆ ತೋಡಿಕೊಂಡರು.

ಬಸಪ್ಪ ಚಲವಾದಿ ಮಾತನಾಡಿ, ಕರಮುಡಿ ಗ್ರಾಮದ ಜಲಾಯನ ಆಧಾರದ ಮೇಲೆ ಬದುವು ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡಿದ್ದೇವೆ. 14 ದಿನಗಳು ದುಡಿದರೂ ಕೇವಲ ಮೂರು ದಿನ ಕೆಲಸ ಮಾಡಿದ್ದಿರಿ ಎಂದು ಹೇಳುತ್ತಾರೆ. ಉಳಿದ ದಿನಗಳಿಗೆ ಎನ್‌ಎಂಆರ್‌ ಹಾಕಬೇಕು, ಹಾಕುತ್ತೇವೆ, ಮೇಲಾಧಿಕಾರಿಗಳು ಹೆಬ್ಬೆಟ್ಟು ಗುರುತು ನೀಡಿಲ್ಲ ಎಂಬ ಕಾರಣ ಹೇಳಿ ನಮ್ಮನ್ನು ಸತಾಯಿಸುತ್ತಿದ್ದಾರೆ. ಬರಗಾಲ ಇರುವುದರಿಂದ ನಮಗೆ ಉದ್ಯೋಗ ಖಾತ್ರಿ ಯೋಜನೆಯ ಕೆಲಸವೇ ಜೀವನಕ್ಕೆ ಆಧಾರವಾಗಿದೆ. ಆದರೆ ಅಧಿಕಾರಿಗಳು ಮಾಡಿದ ಕೆಲಸಕ್ಕೆ ಸಮರ್ಪಕ ಕೂಲಿ ನೀಡಲು ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೃಷಿ ಅಧಿಕಾರಿ ಭರವಸೆ ನಂತರ ರೈತರು ಪ್ರತಿಭಟನೆ ಹಿಂಪಡೆದರು.

ಶಿವಪ್ಪ ಚಲುವಾದಿ, ಯಲ್ಲಮ್ಮ ತಳವಾರ, ಶಂಕ್ರಪ್ಪ ತಳವಾರ, ಮೈಲಾರ ಚಲುವಾದಿ, ಶಿವನಗೌಡ ಕೆಂಚಪ್ಪಗೌಡ್ರ, ಸಂಗಪ್ಪ ಚಲುವಾದಿ, ವೀರಸಂಗಯ್ಯ ಹಿರೇಮಠ, ಅಶೋಕ ಚಲುವಾದಿ, ಹನುಮಪ್ಪ ನಿಂಬಣ್ಣವರ, ಯಲ್ಲಪ್ಪ ಜಾಲಿಹಾಳ, ಹನುಮಂತಪ್ಪ ಮೊರಬದ, ಶರಣಪ್ಪಗೌಡ ತಿಮ್ಮಪ್ಪಗೌಡ್ರ, ಶಿವನಪ್ಪ ಕೊಳ್ಳೂರ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.