ಬಾಕಿ ವೇತನ ಪಾವತಿಗೆ ಒತ್ತಾಯ


Team Udayavani, Sep 22, 2020, 5:09 PM IST

ಬಾಕಿ ವೇತನ ಪಾವತಿಗೆ ಒತ್ತಾಯ

ಗದಗ: ಬಾಕಿವೇತನ ಪಾವತಿಗಾಗಿ ಇಎಫ್‌ ಎಂಎಸ್‌ಗೆ ಸೇರದ ಸಿಬ್ಬಂದಿಯನ್ನು ಸೇರ್ಪಡೆಗೊಳಿಸಬೇಕು ಹಾಗೂ ವಿವಿಧ ಹುದ್ದೆಗಳಲ್ಲಿರುವ ನೌಕರರಿಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘ(ಸಿಐಟಿಯು ಸಂಯೋಜಿತ)ದಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.

ಈ ಕುರಿತು ಜಿಪಂ ಅಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿ, ಗ್ರಾಮೀಣ ಭಾಗದಲ್ಲಿ ಜನರಿಗೆ ಕುಡಿಯುವ ನೀರು ಸ್ವಚ್ಛತೆ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‌ಡೌನ್‌, ಸೀಲ್‌ ಡೌನ್‌ ಮುಂತಾದ ಕೆಲಸಗಳಲ್ಲಿ ವಿಶೇಷವಾಗಿ ಕ್ವಾರಂಟೈನ್‌ ಕ್ಯಾಂಪ್‌ಗ್ಳಲ್ಲಿ ಗ್ರಾಮ ಪಂಚಾಯತ್‌ ನೌಕರರು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ ಪಂಚಾಯತ್‌ ಸಿಬ್ಬಂದಿಗೆ 2017, 2018, 2019 ಹಾಗೂ 2020ರಲ್ಲಿಯೂ ಸಂಬಳ ಬಾಕಿ ಉಳಿದಿದೆ. ಪಂಚಾಯತ್‌ ಪಿಡಿಒಗಳು ಸರಕಾರ ನಿಗದಿ  ಪಡಿಸಿದ ಕನಿಷ್ಟ ವೇತನ ಜಾರಿ ಮಾಡದೇ, ಬಾಕಿ ಉಳಿಸಿಕೊಂಡಿದ್ದಾರೆ. ಬಾಕಿ ಉಳಿದ ವೇತನವನ್ನು ತೆರಿಗೆ ಸಂಗ್ರಹದಲ್ಲಿ 14ನೇ ಹಣಕಾಸು ಯೋಜನೆ, 15ನೇ ಹಣಕಾಸಿನ ಯೋಜನೆಯಲ್ಲಿ ಸಂಬಳ ಕೊಡಬೇಕೆಂದು ಸರಕಾರ ಆದೇಶ ಹೊರಡಿಸಿರುವುದು ಅವೈಜ್ಞಾನಿಕ. ಈ ಹಿನ್ನೆಲೆಯಲ್ಲಿ ಪಂಪ್‌ ಆಪರೇಟರ್‌ ಗಳಿಗೆ ಅರ್ಧ ಸಂಬಳ ನೀಡಲು ಮುಂದಾದ ಸರಕಾರ ನೌಕರರ ವಿರೋಧಿ ಕ್ರಮ ಕೈಬಿಡಬೇಕು.

ಎಲ್ಲ ಸಿಬ್ಬಂದಿಗಳ ವೇತನಕ್ಕಾಗಿ ಕೊರತೆ ಇರುವ 382 ಕೋಟಿ ರೂ. ಬೇರೆ ಬೇರೆ ಯೋಜನೆಗಳಿಂದ ಹಣ ಕ್ರೋಢೀಕರಿಸಿ, ಬಿಡುಗಡೆ ಮಾಡಬೇಕು. ಕಂಪ್ಯೂಟರ್‌ ಆಪರೇಟರ್‌ಗಳಿಗೆ ಬಡ್ತಿ ನೀಡಲು ವೃಂದ ಮತ್ತು ಮತ್ತು ನೇಮಕಾತಿಗಳಿಗೆ ತಿದ್ದುಪಡಿ ಮಾಡಬೇಕು. ಅವರ ಹಿಂದಿನ ಸೇವೆ ಪರಿಗಣಿಸಬೇಕು. ಕರ ವಸೂಲಿಗಾರ ಮತ್ತು ಕಂಪ್ಯೂಟರ್‌ ಆಪರೇಟರ್‌ ಕೋಟಾ ಶೇ. 70ರಿಂದ 100 ರಷ್ಟು ಹೆಚ್ಚಿಸಬೇಕು. ಲೆಕ್ಕ ಸಹಾಯಕ ಕೋಟಾವನ್ನು ಶೇ. 30ರಿಂದ 100ಕ್ಕೆ ಹೆಚ್ಚಿಸಬೇಕು. ಎಲ್ಲಾ ಸಿಬ್ಬಂದಿಗೆ ನಿವೃತ್ತಿ ವೇತನ ಮಂಜೂರು ಮಾಡಬೇಕು. ವೈದ್ಯಕೀಯ ವೆಚ್ಚ, 15 ತಿಂಗಳು ಗ್ರಾಚ್ಯೂಟಿ ಹಣ ಒದಗಿಸಬೇಕು. ಅನುಮೋದನೆ ಆಗದೇ ಉಳಿದ ಸ್ವಚ್ಛತಾಗಾರರಿಗೆ ಹಾಗೂ 1500 ಕಂಪ್ಯೂಟರ್‌ ಆಪರೇಟರಗಳಿಗೆ ಅನುಮೋದನೆ ನೀಡಲು 23-07-2019ರ ಆದೇಶಕ್ಕೆ ಸೂಕ್ತ ತಿದ್ದುಪಡಿ ಮಾಡಬೇಕು. ಕನಿಷ್ಠ ವೇತನ ಪಡೆಯುವ ಎಲ್ಲರಿಗೂ ಬಿಪಿಎಲ್‌ ಕಾರ್ಡ್‌ ಉಳಿಸಿಕೊಳ್ಳಲು ಆದಾಯ ಮೀತಿ 1.20 ಲಕ್ಷದಿಂದ 2.00 ಲಕ್ಷಕ್ಕೆ ಹೆಚ್ಚಿಸಬೇಕು. ಅದಕ್ಕಾಗಿ ಆಹಾರ ಇಲಾಖೆಗೆ ಪತ್ರ ಬರೆಯಬೇಕು. ಪಂಪ್‌ ಆಪರೇಟರ್‌ದಿಂದ ಬಿಲ್‌ಕಲೆಕ್ಟರ್‌ ಹುದ್ದೆಗೆ ಬಡ್ತಿ ನೀಡಬೇಕು. ಬಿಲ್‌ಕಲೆಕ್ಟರ್‌ದಿಂದ ಕಾರ್ಯದರ್ಶಿ ಗ್ರೇಡ್‌-2, ಲೆಕ್ಕ ಸಹಾಯಕ ಹುದ್ದೆಗೆಳ ಬಡ್ತಿ ನೀಡಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘ(ಸಿಐಟಿಯು ಸಂಯೋಜಿತ) ಗದಗ ತಾಲೂಕು ಅಧ್ಯಕ್ಷ ರುದ್ರಗೌಡ ಸಂಕನಗೌಡ, ಕಾರ್ಯದರ್ಶಿ ರುದ್ರಪ್ಪಕಂದಗಲ್ಲ, ಖಜಾಂಚಿ, ನೀಲಮ್ಮ ಭಾರದ್ವಾಡ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.