ಬೆಳೆ ವಿಮೆ ಹಣ ಬಿಡುಗಡೆಗೆ ಒತ್ತಾಯ
ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯಿಂದ ಮನವಿ
Team Udayavani, Aug 7, 2019, 11:32 AM IST
ಗದಗ: ಮೂರು ವರ್ಷಗಳಿಂದ ಬಾಕಿ ಇರುವ ಬೆಳೆ ವಿಮೆ ಹಣ ಬಿಡುಗಡೆಗೆ ಒತ್ತಾಯಿಸಿ ರೈತ ಮುಖಂಡರು ಜಿ.ಪಂ. ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.
ಗದಗ: ಕಳೆದ ಮೂರು ವರ್ಷಗಳಿಂದ ಬಿಡುಗಡೆಯಾಗದೇ ಬಾಕಿ ಇರುವ ಬೆಳೆ ವಿಮಾ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.
ಈ ಕುರಿತು ರೈತ ಸಂಘದ ಪ್ರಮುಖರು ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ ಅವರಿಗೆ ಮನವಿ ಸಲ್ಲಿಸಿ, ಚಿಕ್ಕಮಣ್ಣೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರಿಗೆ 2016ರಿಂದ ಈ ವರೆಗೆ ಯಾವುದೇ ರೀತಿಯ ವಿಮಾ ಹಣ ಬಿಡುಗಡೆಯಾಗಿಲ್ಲ.
2016-17 ಹಿಂಗಾರು, 2017-18ನೇ ಸಾಲಿನ ಮುಂಗಾರಿನ ಕಡಲಿ, ಜೋಳ ಹಾಗೂ 2018-19ರ ಮುಂಗಾರು ಬೆಳೆಗಳಾದ ಹೆಸರು ಮತ್ತು ಮುಸುಕಿನ ಜೋಳ ಮತ್ತು ಶೇಂಗಾ ಬೆಳೆಗಳಿಗೆ ವಿಮೆ ಮಾಡಿಸಲಾಗಿತ್ತು. ಆದರೆ, 2016ರಿಂದ 2018ರ ವರೆಗೆ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಬರಗಾಲ ಕಾಡಿದ್ದರಿಂದ ಬೆಳೆ ಸಂಪೂರ್ಣ ಹಾನಿಗೀಡಾಗಿದೆ.
ಆದರೆ, ಚಿಕ್ಕಮಣ್ಣೂರು ಗ್ರಾ.ಪಂ. ವ್ಯಾಪ್ತಿಯ ಅರಹುಣಸಿ, ಭಾಸಲಾಪುರ, ಚಿಕ್ಕಮಣ್ಣೂರ, ಹಿರೇಮಣ್ಣೂರ ಭಾಗದ ರೈತರಿಗೆ ಬೆಳೆ ವಿಮೆಯಿಂದ ಪರಿಹಾರ ಹಣ ಬಿಡುಗಡೆಯಾಗಿಲ್ಲ. ಈ ಕುರಿತು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈ ಕುರಿತು ಪರಿಶೀಲಿಸಿ ಈ ಭಾಗದ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ರಾಜ್ಯಾಧ್ಯಕ್ಷ ಶಾಂತಸ್ವಾಮಿ ಹಿರೇಮಠ, ಮುತ್ತಣ್ಣ ಚೌಡರೆಡ್ಡಿ, ಶರಣಪ್ಪ ಚಿಗರಿ, ಬಸನಗೌಡ ಸಿ. ಪಾಟೀಲ, ಯಲ್ಲಪ್ಪಗೌಡ ಶಿ. ಪಾಟೀಲ, ಉಮೇಶ ಮ.ತಡಹಾಳ, ಶಂಕ್ರಪ್ಪ ಶಿವಳ್ಳಿ, ರುದ್ರಪ್ಪ ವಿ. ರೋಣದ, ಗೋವಿಂದಪ್ಪ ಕಿರಟಗೇರಿ, ಗಂಗಾಧರಯ್ಯ ಹಿರೇಮಠ, ಬಾಳಪ್ಪ ಮೊರಬದ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…