ಅವೈಜ್ಞಾನಿಕ ರಾಜಕಾಲುವೆಯಿಂದ ಸಂಕಷ್ಟ

ವಿಧಾನ ಪರಿಷತ್‌ ಸದಸ್ಯ ಸಂಕನೂರ ಬೇಸರ ; ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ

Team Udayavani, Jul 30, 2022, 4:46 PM IST

17

ಗದಗ: ಬೆಟಗೇರಿ ಭಾಗದಲ್ಲಿ ಈ ಹಿಂದೆ ರಾಜಕಾಲುವೆಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದು ಹಾಗೂ ಕಳಪೆ ಕಾಮಗಾರಿ ಮಾಡಿರುವುದೇ ರಾಜಕಾಲುವೆಗಳು ತುಂಬಿ ಮನೆಗಳಿಗೆ ನೀರು ನುಗ್ಗಲು ಕಾರಣವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಹೇಳಿದರು.

ಬುಧವಾರ ತಡರಾತ್ರಿ ಸುರಿದ ಭಾರಿ ಮಳೆಗೆ ರಾಜಕಾಲುವೆಗಳು ತುಂಬಿ ಮನೆಗಳಿಗೆ ನೀರು ನುಗ್ಗಿ ಹಾನಿಗೀಡಾದ ಸ್ಥಳೀಯ ಬೆಟಗೇರಿ ಭಾಗದ ಭಜಂತ್ರಿ ಓಣಿ, ವಾಲ್ಮೀಕಿ ನಗರ, ಅಂಬೇಡ್ಕರ್‌ ನಗರ ಹಾಗೂ ವಾಂಬೆ ಬಡಾವಣೆ ಪ್ರದೇಶಗಳಿಗೆ ಭೇಟಿ ನೀಡಿ, ಹಾನಿಗೊಳಗಾದ ನಿವಾಸಿಗಳ ಮನೆಗಳನ್ನು ವೀಕ್ಷಣೆ ಮಾಡಿ ಮಾತನಾಡಿದರು.

ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಹಾಗೂ ಅಪೂರ್ಣಗೊಂಡ ರಾಜಕಾಲುವೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನವನ್ನು ಸಂಬಂಧಪಟ್ಟ ಇಲಾಖೆಯಿಂದ ಬಿಡುಗಡೆಗೊಳಿಸಲು ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಭಜಂತ್ರಿ ಓಣಿಯಲ್ಲಿ ಹಾಗೂ ಶಿವರತ್ನ ಪ್ಯಾಲೇಸ್‌ ಪಕ್ಕದಲ್ಲಿ ರಾಜ ಕಾಲುವೆಗಳಿಗೆ ನಿರ್ಮಿಸಿರುವ ತಡೆಗೋಡೆಗಳು ಸಂಪೂರ್ಣ ಕಳಪೆಯಿಂದ ಕೂಡಿವೆ. ಅಲ್ಲದೇ, ಅವುಗಳು ಕುಸಿಯುತ್ತಿವೆ ಮತ್ತು ರಾಜಕಾಲುವೆ ಮುಂದೆ ಹೋದಂತೆ ಕಿರಿದಾಗಿದ್ದು, ನೀರು ನಿಂತು ಮನೆಗಳಿಗೆ ನೀರು ನುಗ್ಗಲು ಕಾರಣವಾಗಿದೆ ಎಂದು ಸಾರ್ವಜನಿಕರು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಅವರ ಗಮನಕ್ಕೆ ತಂದರು.

ಈ ಕುರಿತು ಸಂಪೂರ್ಣವಾಗಿ ಪರಿಶೀಲಿಸಿ ರಾಜಕಾಲುವೆ ನಿರ್ಮಿಸಿದ ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಳಪೆ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಅಧಿಕಾರಿಗಳಿಗೆ ಸಂಕನೂರ ಅವರು ಸೂಚನೆ ನೀಡಿದರು.

ವಾಲ್ಮೀಕಿ, ಅಂಬೇಡ್ಕರ್‌ ಬಡಾವಣೆಯಲ್ಲಿ ಹಾದು ಹೋಗಿರುವ ರಾಜ ಕಾಲುವೆ ವೀಕ್ಷಿಸಿದ ಸಂಕನೂರ ಅವರು, ರಾಜಕಾಲುವೆಗಳಲ್ಲಿ ಆದ ಅತಿಕ್ರಮಣ ಹಾಗೂ ರಾಜಕಾಲುವೆ ತುಂಬ ಬೆಳೆದ ಗಿಡಗಂಟಿಗಳಿಂದಾಗಿ ಮಳೆ ನೀರು ಹರಿದು ಹೋಗಲು ಅಡ್ಡಿಯಾಗಿದೆ. ಹಾಗಾಗಿ, ಮನೆಗಳಿಗೆ ನೀರು ನುಗ್ಗಿ ಹಾನಿ ಉಂಟಾಗಲು ಕಾರಣವಾಗಿದೆ. ಕೂಡಲೇ ಅವುಗಳನ್ನು ಸ್ವಚ್ಛಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಣ್ಣ ಪಲ್ಲೇದ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ ಯಳವತ್ತಿ, ನಗರಸಭೆ ಸದಸ್ಯರಾದ ಅನಿಲ ಅಬ್ಬಿಗೇರಿ, ಮಾಧುಸಾ ಮೇರವಾಡೆ, ಶಕುಂತಲಾ ಅಕ್ಕಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವ ಗಣಾಚಾರಿ, ಬಿಜೆಪಿ ಶಹರ ಪ್ರಧಾನ ಕಾರ್ಯದರ್ಶಿ ದೇವಪ್ಪ ಗೋಟೂರ, ಮುಖಂಡರಾದ ಶ್ರೀನಿವಾಸ ಹುಬ್ಬಳ್ಳಿ, ಹೊಳೆಬಸಪ್ಪ ಅಕ್ಕಿ, ತಹಶೀಲ್ದಾರ್‌ ಕಿಶನ್‌ ಕಲಾಲ, ನಗರಸಭೆ ಅಭಿಯಂತರ ಎಚ್‌.ವೈ. ಬಂಡಿವಡ್ಡರ ಇತರರಿದ್ದರು.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರಾಜಕಾಲುವೆಗಳು ಹಾಗೂ ಚರಂಡಿಗಳು ತುಂಬಿ ಮನೆಗಳಿಗೆ ನೀರು ನುಗ್ಗಿ, ಸಾರ್ವಜನಿಕರ ಮನೆಗಳಿಗೆ ಹಾಗೂ ಪಂಚಮಿ ಹಬ್ಬಕ್ಕಾಗಿ ಅವರು ಖರೀದಿಸಿದ್ದ ಹಬ್ಬದ ವಸ್ತುಗಳು ಮತ್ತು ದವಸ-ಧಾನ್ಯಗಳು ಹಾನಿಗೀಡಾಗಿವೆ. ಈ ಕುರಿತು ವಿವಿಧ ಭಾಗಗಳಲ್ಲಿ ವೀಕ್ಷಣೆ ಮಾಡಿದ್ದು, ನಾಲ್ಕು ದಿನಗಳಲ್ಲಿ ಪರಿಶೀಲನೆ ಮಾಡಿ ಹಾನಿಗೀಡಾದ ಫಲಾನುಭವಿಗಳಿಗೆ ಕೂಡಲೇ ಪರಿಹಾರ ಒದಗಿಸಲು ತಹಶೀಲ್ದಾರ್‌ ಕಿಶನ್‌ ಕಲಾಲ ಅವರಿಗೆ ಸೂಚನೆ ನೀಡಲಾಗಿದೆ.  –ಎಸ್‌.ವಿ. ಸಂಕನೂರ, ಮೇಲ್ಮನೆ ಸದಸ್ಯರು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.