ಸಾರ್ವಜನಿಕರಿಂದ ಪುರಸಭೆಗೆ ದಿಢೀರ್‌ ಮುತ್ತಿಗೆ


Team Udayavani, May 31, 2019, 2:46 PM IST

Udayavani Kannada Newspaper

ಲಕ್ಷ್ಮೇಶ್ವರ: ಪುರಸಭೆಯಲ್ಲಿ ಮನೆ ಉತಾರ ನೀಡಲು ಸಿಬ್ಬಂದಿ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಪುರಸಭೆಗೆ ದಿಢೀರ್‌ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಲಕ್ಷ್ಮೇಶ್ವರ: ಸ್ವಂತ ಸೂರು ಹೊಂದಲು, ಮನೆ ನಿರ್ಮಾಣಕ್ಕೆ ಅನುಮತಿ ಸೇರಿ ಇತರೇ ಕಾರಣಗಳಿಗಾಗಿ ಬೇಕಾಗುವ ಮನೆ ಉತಾರಕ್ಕಾಗಿ ಸಾರ್ವಜನಿಕರು ಕಳೆದ 5-6 ತಿಂಗಳಿಂದ ಅಲೆದಾಡುತ್ತಿದ್ದರೂ ಸ್ಪಂದಿಸದ ಪುರಸಭೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಗುರುವಾರ ದಢಿಧೀರ್‌ ಪ್ರತಿಭಟನೆ ನಡೆಸಿದರು.

ಪಟ್ಟಣದಲ್ಲಿ ಉತಾರಕ್ಕಾಗಿ ಸುಮಾರು 170ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ಅದಕ್ಕೆ ಪುರಸಭೆ ಅಭಿಯಂತರರ ಸಹಿ ಅವಶ್ಯವಾಗಿರುತ್ತದೆ. ಕಳೆದ 5-6 ತಿಂಗಳಿಂದ ಬಹುತೇಕ ಅರ್ಜಿಗಳಿಗೆ ಸಹಿ ಆಗದಿದ್ದರಿಂದ ಅರ್ಜಿದಾರರು ಪದೇ ಪದೇ ಪುರಸಭೆಗೆ ಅಲೆದಾಡುವಂತಾಗಿದೆ ಎಂದು ಸಾರ್ವಜನಿಕರು ದೂರಿದರು.

ಬ್ಯಾಂಕ್‌ ಸಾಲ ಪಡೆದುಕೊಳ್ಳಲು, ನೀರು, ವಿದ್ಯುತ್‌ ಸಂಪರ್ಕ, ಸರ್ಕಾರಿ ಸೌಲತ್ತು, ರಹವಾಸಿ, ಆದಾಯ ಸರ್ಟಿಪಿಕೆಟ್ ಪಡೆದುಕೊಳ್ಳಲು ಸೇರಿ ಇತರೆ ಉದ್ದೇಶಕ್ಕಾಗಿ ಮನೆ ಉತಾರ ಅವಶ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅರ್ಜಿ ನೀಡಿದ 3-4 ದಿನಗಳಲ್ಲಿ ಅರ್ಜಿದಾರರಿಗೆ ಕಂಪ್ಯೂಟರ್‌ ಉತಾರ ಪೂರೈಸಬಹುದಾಗಿದ್ದರೂ ಜನತೆ ತಿಂಗಳುಗಳಿಂದ ಪುರಸಭೆಗೆ ಅಲೆದಾಡುತ್ತಿದ್ದಾರೆ. ಸಿಬ್ಬಂದಿ ಇಲ್ಲಸಲ್ಲದ ಕಾರಣಗಳನ್ನು ಹೇಳಿ ಉತಾರ ನೀಡಲು ಸತಾಯಿಸುತ್ತಿರುವುದರ ಹಿಂದೆ ಮತ್ತೇನೋ ಕಾರಣಗಳಿವೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಮಹೇಶ ಹೊಗೆಸೊಪ್ಪಿನ ಮಾತನಾಡಿ, ಪುರಸಭೆಯಲ್ಲಿ ಉತಾರ ನೀಡುವುದಕ್ಕಾಗಿ ಸಿಬ್ಬಂದಿಗಳಿದ್ದರೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕಳೆದ 10 ತಿಂಗಳ ಹಿಂದೆಯೇ ನೂತನ ಸದಸ್ಯರು ಆಯ್ಕೆಯಾಗಿದ್ದರೂ ಸರ್ಕಾರದ ದ್ವಂದ್ವ ನೀತಿಯಿಂದ ಜನಪ್ರತಿನಿಧಿಗಳು ಇದ್ದೂ ಇಲ್ಲದಂತಾಗಿದೆ. ಇದರಿಂದ ಪುರಸಭೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಆಡಿದ್ದೇ ಆಟವಾಗಿದೆ. ಇದನ್ನು ಪರಿಹರಿಸಬೇಕಾದ ಹಿರಿಯ ಅಧಿಕಾರಿಗಳೂ ಜಾಣ ಮೌನ ವಹಿಸಿದ್ದಾರೆ. ಈ ರೀತಿ ವಿನಾಃಕಾರಣ ಸಾರ್ವಜನಿಕರಿಗೆ ತೊಂದರೆ ನೀಡುವುದು ಸರಿಯಲ್ಲ. ನಿಯಮದಂತೆ ಉತಾರ ಪೊರೈಸಲು ಇರುವ ತೊಂದರೆಯಾದರೂ ಏನು ಎಂದು ಪ್ರಶ್ನಿಸಿದರು.

ಈಗ ಉತಾರಕ್ಕೆ ಅರ್ಜಿ ನೀಡಿರುವ ಸಾರ್ವಜನಿಕರಿಗೆ ಶುಕ್ರವಾರ ಉತಾರ ನೀಡುವಲ್ಲಿ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಅವರೊಂದಿಗೆ ಪುರಸಭೆ ಎದುರಿನಲ್ಲಿ ಧರಣಿ ಪ್ರಾರಂಭಿಸುವುದಾಗಿ ಎಚ್ಚರಿಸಿದರು. ಪುರಸಭೆ ಅಧಿಕಾರಿ ಎನ್‌.ಎಂ. ಹಾದಿಮನಿ ಈ ಕುರಿತಂತೆ ಮುಖ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಸಾರ್ವಜನಿಕರಿಗೆ ಅನೂಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಸೋಮಪ್ಪ ಬೆಲ್ಲದ, ನಾಗಪ್ಪ ನುಚ್ಚಂಬಲಿ, ಬಸವರಾಜ ಹೊಸಮನಿ, ದೇವಪ್ಪ ನಾಯಕ, ಈರಣ್ಣ ಕರೆಯತ್ತಿನ, ಬಸಣ್ಣ ಓಂಕಾರಿ, ಬಸವರಾಜ ಅಕ್ಕಿ, ಬಸವರಾಜ ಅಂದಲಗಿ, ಗೌಸಮೋದಿನ ನಂದಿಗಟ್ಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.