ಮೂಲಸೌಕರ್ಯ ಪೂರಕ ಕ್ರಿಯಾಯೋಜನೆ ತಯಾರಿಸಲು ಸೂಚನೆ
ವಾರ್ಡ್ ಮುಖ್ಯಸ್ಥರೊಂದಿಗೆ ಪಪಂ ಮುಖ್ಯಾಧಿಕಾರಿ ಚರ್ಚೆ
Team Udayavani, Jun 23, 2019, 10:38 AM IST
ಶಿರಹಟ್ಟಿ: ಪಪಂ ಕಾರ್ಯಾಲಯದಲ್ಲಿ ಹಸಿರು ನ್ಯಾಯಾಧಿಕರಣದ ನಿರ್ದೇಶನದ ಮೇರೆಗೆ ವಾರ್ಡ್ಗಳ ಮುಖ್ಯಸ್ಥರೊಂದಿಗೆ ಮುಖ್ಯಾಧಿಕಾರಿ ಶೋಭಾ ಬೆಳ್ಳಿಕೊಪ್ಪ ಚರ್ಚಿಸಿದರು.
ಶಿರಹಟ್ಟಿ: ಹಸಿರು ನ್ಯಾಯಾಧಿಕರಣದ ನಿರ್ದೇಶನದಂತೆ ಪಪಂ ವ್ಯಾಪ್ತಿಯಲ್ಲಿನ ವಿವಿಧ ವಾರ್ಡ್ಗಳಲ್ಲಿ ಮೂಲ ಸೌಕರ್ಯಕ್ಕೆ ಪೂರಕವಾದಂತಹ ಕ್ರಿಯಾಯೋಜನೆ ತಯಾರಿಸಿ ತಮಗೆ ನೀಡಬೇಕೆಂದು ಪಪಂ ಮುಖ್ಯಾಧಿಕಾರಿ ಶೋಭಾ ಬೆಳ್ಳಿಕೊಪ್ಪ ಹೇಳಿದರು.
ಪಪಂ ಕಾರ್ಯಾಲಯದಲ್ಲಿ ಹಸಿರು ನ್ಯಾಯಾಧಿಕರಣದ ನಿರ್ದೇಶನದ ಮೇರೆಗೆ ವಾರ್ಡ್ಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ ಅವರು ಮಾತನಾಡಿದರು. ವಾರ್ಡ್ಗಳ ಅಭಿವೃದ್ಧಿಗೆ ಅನುದಾನ ಸಾಕಾಗುತ್ತಿಲ್ಲ ಎಂಬುದರ ಬಗ್ಗೆ ಹಸಿರು ನ್ಯಾಯಾಲಯಕ್ಕೆ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯವು ವಾರ್ಡ್ಗಳ ಸ್ಥಿತಿಗತಿ ಬಗ್ಗೆ ಹಾಗೂ ಮೂಲಸೌಕರ್ಯಕ್ಕೆ ಬೇಕಾಗುವಂತಹ ಮಾಹಿತಿ ಕೇಳಿದ್ದು, ಅದಕ್ಕಾಗಿ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಕಮಿಟಿ ರಚನೆ ಮಾಡಿ 10 ಜನ ಸದಸ್ಯರನ್ನು ಹೊಂದಬೇಕು. ಇದರಲ್ಲಿ ಐದು ಜನ ಮಹಿಳೆಯರು ಕಡ್ಡಾಯವಾಗಿ ಇರಬೇಕು. ಇವರೆಲ್ಲರೂ ಸೇರಿ ತಮ್ಮ ವಾರ್ಡ್ ಅಭಿವೃದ್ಧಿಯಾಗುವಂತಹ ಕ್ರಿಯಾಯೋಜನೆ ತಯಾರಿಸಿ ತಮಗೆ ನೀಡಬೇಕು. ತಾವು ನೀಡಿದ ನಂತರ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು.
ಇದರ ಜೊತೆಗೆ ಪಟ್ಟಣದಲ್ಲಿ ಘನ ತ್ಯಾಜ್ಯ, ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ತರುವುದಕ್ಕಾಗಿ ಮೊದಲಿಗೆ ದಂಡ ರೂಪದಲ್ಲಿ ತಿಳಿ ಹೇಳಲಾಗುವುದು. ತದನಂತರ ಅಂತಹ ಅಂಗಡಿಗಳ ಪರವಾನಗಿ ರದ್ದು ಮಾಡಲಾಗುವುದು. ಸಾರ್ವಜನಿಕರು ಮನೆಗಳ ಮುಂದೆ ಹಸಿ ಕಸ ಚೆಲ್ಲಬಾರದು. ಇದಕ್ಕಾಗಿಯೇ ಪಪಂ ವತಿಯಿಂದ ನಾಲ್ಕು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇವುಗಳ ಸಮರ್ಪಕ ನಿರ್ವಹಣೆಗೆ ಜಿಪಿಎಸ್ ಅಳವಡಿಸಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಂಡು ಪಟ್ಟಣದ ಸೌಂದರ್ಯದ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಹೇಳಿದರು.
ಸಂದೀಪ ಕಪ್ಪತ್ತನವರ, ಪರಮೇಶ ಪರಬ, ಫಕ್ಕೀರೇಶ ರಟ್ಟಿಹಳ್ಳಿ, ಮಹದೇವ ಗಾಣಿಗೇರ, ಪರಶುರಾಮ ಡೊಂಕಬಳ್ಳಿ, ಮಂಜುನಾಥ ಹುಬ್ಬಳ್ಳಿ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ