14 ವರ್ಷದ ಬಳಿಕ ವಿಮಾ ನ್ಯಾಯ!


Team Udayavani, Dec 15, 2018, 6:45 AM IST

60.jpg

ಗದಗ: ಮಳೆ, ಬೆಳೆ ಕೈ ಕೊಟ್ಟು ಕಂಗಾಲಾದ ರೈತನಿಗೆ ವಿಮಾ ಕಂಪನಿಗಳು ಮೋಸ ಮಾಡುವುದು ಹೊಸದೇನಲ್ಲ. ಆದರೆ, 14 ವರ್ಷಗಳಿಂದ ಪರಿಹಾರ ನೀಡದೆ ಅನ್ಯಾಯ ಮಾಡಿದ್ದ ವಿಮಾ ಕಂಪನಿಯನ್ನು ಕಟಕಟೆಯಲ್ಲಿ ನಿಲ್ಲಿಸಿದ ರೈತರು ತಮಗೆ ಬರಬೇಕಿದ್ದ 30 ಲಕ್ಷ ರೂ.ಗಳಷ್ಟು ಪರಿಹಾರವನ್ನು ಗ್ರಾಹಕರ ನ್ಯಾಯಾಲಯದ ಮೂಲಕ ವಸೂಲಿ ಮಾಡಿದ್ದಾರೆ!

ಜಿಲ್ಲೆಯ ರೋಣ ತಾಲೂಕಿನ ಮಾರನ ಬಸರಿ, ಹುಲ್ಲೂರು, ಸೋಮನಕಟ್ಟಿ, ಮುದೇನಗುಡಿ, ಹೊಳೆಹಡಗಲಿ ಸೇರಿ ವಿವಿಧ ಗ್ರಾಮಗಳ 185 ರೈತರು 2003ರಲ್ಲಿ ಭಾರತೀಯ ಕೃಷಿ ವಿಮಾ ಕಂಪನಿಯಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಈರುಳ್ಳಿ, ಮೆಕ್ಕೆಜೋಳ ಮತ್ತು ಸೂರ್ಯಕಾಂತಿ ಬೆಳೆಗಳಿಗೆ ವಿಮೆ ಮಾಡಿಸಿದ್ದರು. ಆದರೆ, ಆ ವರ್ಷ ಜಿಲ್ಲೆಯಲ್ಲಿ ಬರ ಆವರಿಸಿದ್ದರಿಂದ ಬೆಳೆಗಳು ಕೈಗೆ ಬಾರದ ಹಿನ್ನೆಲೆಯಲ್ಲಿ ಪರಿಹಾರ ನೀಡುವಂತೆ ಬೆಳೆ ವಿಮಾ ಕಂಪನಿಗೆ ಮನವಿ ಮಾಡಿದ್ದರು. ಆದರೆ, ರೈತರ ಅರ್ಜಿಯನ್ನು ತಿರಸ್ಕರಿಸಿದ್ದ ವಿಮಾ ಕಂಪನಿ, ಬೆಳೆ ಸಂಪೂರ್ಣವಾಗಿ ಬಂದಿದೆ. ನಿಮಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕಡ್ಡಿಮುರಿದಂತೆ ಹೇಳಿತ್ತು. ಆದಾಗಲೇ ಬೆಳೆ ನಷ್ಟದಿಂದ ನೊಂದಿದ್ದ ರೈತರು, ವಿಮಾ ಕಂಪನಿಯ ಬೇಜವಾಬ್ದಾರಿ ಹೇಳಿಕೆಯಿಂದ ಕಂಗಾಲಾಗಿ 2005ರಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಕುರಿತು ಪರ-ವಿರೋಧ  ವಾದ ಆಲಿಸಿದ್ದ ಗ್ರಾಹಕರ ವೇದಿಕೆ 2006ರಲ್ಲಿ ರೈತರಿಗೆ ಪರಿಹಾರ ನೀಡುವಂತೆ ಆದೇಶಿಸಿತ್ತು.

ವಾರೆಂಟ್‌ ಹೊರಡಿಸಿತ್ತು: ರೈತರಿಗೆ ಪರಿಹಾರ ನೀಡದೇ ವರ್ಷಗಳ ಕಾಲ ಅಲೆದಾಡಿಸುತ್ತಿದ್ದ ಭಾರತೀಯ ವಿಮಾ ಕಂಪನಿ ವಿರುದ್ಧ 2012ರಲ್ಲಿ ಜಿಲ್ಲಾ ಗ್ರಾಹಕರ ವೇದಿಕೆ ವಾರಂಟ್‌ ಜಾರಿಗೊಳಿಸಿತ್ತು. ಇದರಿಂದ ಆತಂಕಗೊಂಡ ವಿಮಾ ಕಂಪನಿ ವಾರಂಟ್‌
ತೆರವುಗೊಳಿಸುವಂತೆ ಕೋರಿ ರಾಜ್ಯ ಗ್ರಾಹಕರ ವೇದಿಕೆ ಮೆಟ್ಟಿಲೇರಿತ್ತು. ಅಲ್ಲಿಂದ ಆರಂಭವಾದ ವಿಚಾರಣೆ 2018ರಲ್ಲಿ ಪೂರ್ಣಗೊಂಡಿದೆ. ಅಲ್ಲದೇ, ಜಿಲ್ಲಾ ಗ್ರಾಹಕರ ವೇದಿಕೆ ನೀಡಿದ್ದ ತೀರ್ಪು ಎತ್ತಿ ಹಿಡಿದ ರಾಜ್ಯ ಗ್ರಾಹಕರ ವೇದಿಕೆ, ಕೆಳ ವೇದಿಕೆಯಲ್ಲೇ ವಾರಂಟ್‌ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವಂತೆ ಸೂಚಿಸಿತ್ತು. ವೇದಿಕೆಯ ಎಲ್ಲ ಷರತ್ತುಗಳಿಗೆ ಒಪ್ಪಿದ ವಿಮಾ ಕಂಪನಿ ಕಳೆದ ಅ.12ರಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ 30 ಲಕ್ಷ ರೂ. ಹಣ ಜಮೆ ಮಾಡಿದೆ. ಇತ್ತೀಚೆಗೆ 10 ಜನ ಹಾಗೂ ಶುಕ್ರವಾರ ರೋಣ ತಾಲೂಕಿನ 18 ಜನ ರೈತರಿಗೆ ಪರಿಹಾರ ಚೆಕ್‌ ವಿತರಿಸಲಾಯಿತು. ಇನ್ನುಳಿದವರಿಗೆ ಹಂತ ಹಂತವಾಗಿ
ಹಣವನ್ನು ಚೆಕ್‌ ಮೂಲಕ ನೀಡಲಾಗುವುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷೆ ಸಿ.ಎಚ್‌. ಸಮಿವುನ್ನೀಸಾ ಹಾಗೂ ವೇದಿಕೆ ಸದಸ್ಯ ಬಸವರಾಜ ಕೆರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.