ಗದಗ: ಸ್ವರಾಜ್ಯ ಸಮ್ಮೇಳನದಿಂದ ಬೌದ್ಧಿಕ ಚಿಂತನೆ ಆರಂಭ

ಪರ್ಯಾಯ ಗೋಷ್ಠಿಗಳು ಕೂಡ ಅಷ್ಟೇ ಪರಿಣಾಮಕಾರಿಯಾಗಿ ನಡೆದವು.

Team Udayavani, Mar 4, 2023, 2:31 PM IST

ಗದಗ: ಸ್ವರಾಜ್ಯ ಸಮ್ಮೇಳನದಿಂದ ಬೌದ್ಧಿಕ ಚಿಂತನೆ ಆರಂಭ

ಗದಗ: ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದಲ್ಲಿ ಮೂರು ದಿನಗಳ ಕಾಲ ನಡೆದ ಸ್ವರಾಜ್‌ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಹಲವು ದೇಶಗಳ ತಜ್ಞರು, ವಿವಿಧ ರಾಜ್ಯಗಳ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಸ್ವರಾಜ್ಯ ಪರಿಕಲ್ಪನೆಗೆ ಸಂಬಂಧಿಸಿದಂತೆ ತಮ್ಮದೇ ಆದ ಹೊಸ ಕಲ್ಪನೆಗಳನ್ನು ಮಂಡಿಸಿದ್ದಾರೆ ಎಂದು ಗ್ರಾವಿವಿ ಕುಲಪತಿ ಪ್ರೊ|ವಿಷ್ಣುಕಾಂತ ಚಟಪಲ್ಲಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದಲ್ಲಿ ಮೂರು ದಿನಗಳ ಕಾಲ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶ-ವಿದೇಶಗಳ ತಜ್ಞರು ಹಾಗೂ ವಿವಿಧ ರಾಜ್ಯಗಳ ಸಂಪನ್ಮೂಲ ವ್ಯಕ್ತಿಗಳು ಮಂಡಿಸಿದ ಅಂಶಗಳಲ್ಲಿ ಉತ್ಕೃಷ್ಟವಾದವುಗಳನ್ನು ಪರಿಗಣಿಸಿ, ಸ್ವರಾಜ್ಯ ನಿರ್ಣಯ ಮಂಡಿಸಲಾಗಿದೆ. ಈ ನಿರ್ಣಯಗಳ ಆಧಾರದಲ್ಲಿ ನೀತಿ ರಚನೆ ಮಾಡಿ, ಅನುಷ್ಠಾನಗೊಳಿಸಿ ಸ್ವರಾಜ್ಯವನ್ನು ಸದೃಢಗೊಳಿಸಬೇಕಿದೆ ಎಂದು ಹೇಳಿದರು.

ಸ್ವರಾಜ್ಯ-ಸ್ಥಳೀಯ ಆಡಳಿತದ ಸ್ವಯಂ ಮಾದರಿಗಳು, ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭ ಸ್ವರಾಜ್ಯದ ಆಲೋಚನೆಗಳ ಬಗೆಗಿನ ಅಂತ್ಯವಲ್ಲ. ಇದು ಸ್ವರಾಜ್ಯಕ್ಕೆ ಸಂಬಂಧಿಸಿದ ಬೌದ್ಧಿಕ ಚಿಂತನೆಗಳ ಆರಂಭ ಎಂದು ಚಟಪಲ್ಲಿ ಹೇಳಿದರು.

ಪ್ರಜ್ಞಾ ಪ್ರವಾಹದ ಅಖೀಲ ಭಾರತೀಯ ಸಂಯೋಜಕ ನಂದಕುಮಾರ ಮಾತನಾಡಿ, ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಆಗಮಿಸಿದ್ದ ವಿವಿಧ ದೇಶಗಳ ಪ್ರತಿನಿಧಿಗಳು ಬಹಳ ಶಿಸ್ತು ಹಾಗೂ ಶ್ರದ್ಧೆಯಿಂದ ಪಾಲ್ಗೊಂಡಿದ್ದು ಶ್ಲಾಘನೀಯ. ಪರ್ಯಾಯ ಗೋಷ್ಠಿಗಳು ಕೂಡ ಅಷ್ಟೇ ಪರಿಣಾಮಕಾರಿಯಾಗಿ ನಡೆದವು.

ಎಲ್ಲಕ್ಕಿಂತ ಮಿಗಿಲಾಗಿ, ಪ್ರತಿಯೊಂದು ವಿಚಾರ ಸಂಕಿರಣ, ವಿಷಯ ಮಂಡನೆ ವೇಳೆ ಅವರೆಲ್ಲರೂ ಹಿರಿಯರು, ಕಿರಿಯರ ಜತೆಗೆ ಸಂವಾದದಲ್ಲಿ ಪಾಲ್ಗೊಂಡಿದ್ದು ವಿಶೇಷವೆನಿಸಿತು ಎಂದು ಹೇಳಿದರು.

ಅಂತಾರಾಷ್ಟ್ರೀಯ ಸಮ್ಮೇಳವನ್ನು ಅಚ್ಚುಕಟ್ಟಾಗಿ ನಡೆಸಿದ ಕೀರ್ತಿ ವಿಶ್ವವಿದ್ಯಾಲಯಕ್ಕೆ ಸಲ್ಲಬೇಕು. ನಾಯಕನಂತಿರುವ ವಿಷ್ಣುಕಾಂತ ಚಟಪಲ್ಲಿ ಅವರ ದೂರದೃಷ್ಟಿತ್ವದಿಂದ ಇದು ಸಾಧ್ಯವಾಗಿದೆ. ಸಮ್ಮೇಳನ ಯಶಸ್ವಿಯಾಗಿದೆ. ನಿರ್ಣಯಗಳೂ ಮಂಡನೆಯಾಗಿವೆ. ಈಗ ಅವುಗಳನ್ನು ಅನುಸರಿಸಿ, ಅಳವಡಿಸಿಕೊಂಡು ಸ್ವರಾಜ್ಯ ಕಟ್ಟಬೇಕಿದೆ. ಪ್ರತಿಯೊಬ್ಬರೂ ಇದನ್ನು ಗುರಿಯಾಗಿಸಿಕೊಳ್ಳಬೇಕೆಂದು ಹೇಳಿದರು.

ಪ್ರೊ|ಕಿರಣ್‌ ಅವರು ವಿಶ್ವವಿದ್ಯಾಲಯದ ಜತೆಗಿನ ಪಾಲುದಾರಿಕೆಯ ದ್ಯೋತಕವಾಗಿ ಸಿ-20 (ಸಿವಿಲ್‌ ಸೊಸೈಟಿ 20) ಧ್ವಜವನ್ನು ಪ್ರೊ|ವಿಷ್ಣುಕಾಂತ ಎಸ್‌.ಚಟಪಲ್ಲಿ ಅವರಿಗೆ ಹಸ್ತಾಂತರಿಸಿದರು. ಪ್ರಾಚಿ ಫೌಂಡೇಶನ್‌ ಅಧ್ಯಕ್ಷ ಶ್ರೀನಿವಾಸ ಭಗವತಲು ಮಾತನಾಡಿ, ಮೂರು ದಿನಗಳ ಸಮ್ಮೇಳನದಲ್ಲಿ 14 ದೇಶಗಳ 52 ಪ್ರತಿನಿ ಗಳು ಭಾಗವಹಿಸಿದ್ದರು. ದೇಶದ ವಿವಿಧ ರಾಜ್ಯಗಳಿಂದ 220 ಮಂದಿ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು. ನಾಲ್ಕು ಮಂದಿ ಪದ್ಮಶ್ರೀ ಪುರಸ್ಕೃತರು, ಹಲವು ಪ್ರತಿಷ್ಟಿತ ವಿಶ್ವವಿದ್ಯಾಲಯಗಳ ಕುಲಪತಿಗಳು ಉಪಸ್ಥಿತರಿದ್ದರು ಎಂದು ವಿವರಿಸಿದರು.

ಟಾಪ್ ನ್ಯೂಸ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.