ಹುಟ್ಟೂರಿನ ಸ್ಮಶಾನದಲ್ಲಿ ಶವ ಸಂಸ್ಕಾರಕ್ಕೆ ಅಡ್ಡಿ
Team Udayavani, May 20, 2021, 6:23 PM IST
ಹೊಳೆ ಆಲೂರ: ಮೃತ ಕೊರೊನಾ ಸೋಂಕಿತನ ಶವಸಂಸ್ಕಾರಕ್ಕೆ ಸ್ವತಃ ಗ್ರಾಮಸ್ಥರೇ ಅಡ್ಡಿಪಡಿಸಿದ ಘಟನೆ ಬುಧವಾರ ತಾಲೂಕಿನ ಅಮರಗೋಳದಲ್ಲಿ ನಡೆದಿದೆ.
ಮೂಲತಃ ಅಮರಗೋಳ ಗ್ರಾಮದ 72 ವರ್ಷದ ವೃದ್ಧನೊಬ್ಬ ನೌಕರಿ ನಿಮಿತ್ತ 10-15 ವರ್ಷಗಳಿಂದ ಬಾಗಲಕೋಟೆಯಲ್ಲಿ ವಾಸವಿದ್ದು, ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರು ಸ್ವಗ್ರಾಮ ಅಮರಗೋಳಕ್ಕೆ ಶವ ಸಂಸ್ಕಾರ ಮಾಡಲು ಬಂದಾಗ ಗ್ರಾಮಸ್ಥರು ವಿರೋಧಿಸಿದ ಹಿನ್ನೆಲೆಯಲ್ಲಿ ಜೆಸಿಬಿ ಮೂಲಕ ತಮ್ಮ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಉದ್ಯೋಗ ನಿಮಿತ್ತ ಬಾಗಲಕೋಟೆಯಲ್ಲಿ ವಾಸವಿದ್ದರೂ ವ್ಯಕ್ತಿ ಹುಟ್ಟೂರಿನ ಪ್ರೀತಿ ಬಿಟ್ಟಿರಲಿಲ್ಲ. ಗ್ರಾಮ ದೇವತೆ ಜಾತ್ರೆ, ಉತ್ಸವ, ಕುಟುಂಬ ಕಾರ್ಯಕ್ರಮಕ್ಕಾಗಿ ಸ್ವಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಕಳೆದೊಂದು ವಾರದ ಹಿಂದೆ ಕೊರೊನಾ ಪೀಡಿತರಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಬುಧವಾರ ಬೆಳಗ್ಗೆ ಮೃತಪಟ್ಟಿದ್ದರು. ಆಗ ಕುಟುಂಬಸ್ಥರು ಆಂಬ್ಯುಲೆನ್ಸ್ ಮೂಲಕ ಮಧ್ಯಾಹ್ನ ಸ್ವಗ್ರಾಮ ಅಮರಗೋಳಕ್ಕೆ ಶವ ತಂದು ಸಂಸ್ಕಾರ ಮಾಡಲು ನಿರ್ಧರಿಸಿದ್ದಾರೆ. ಆಗ ವಿಷಯ ತಿಳಿದ ಗ್ರಾಮಸ್ಥರು ಒಪ್ಪಿಗೆ ನೀಡದ್ದರಿಂದ ಹೊಳೆಆಲೂರಿನ ನೀರಾವರಿ ಕಾಲುವೆ ಹತ್ತಿರದ ತಮ್ಮ ಹೊಲದಲ್ಲಿ ಶವ ಸಂಸ್ಕಾರ ಮಾಡಲು ನಿರ್ಧರಿಸಿದ್ದಾರೆ. ಆಗ ಮಳೆ ಬಂದು ಆಂಬ್ಯುಲೆನ್ಸ್ ಹೋಗದ ಪರಿಸ್ಥಿತಿ ಉಂಟಾಗಿದೆ. ಅನಿವಾರ್ಯವಾಗಿ ಜೆಸಿಬಿ ಮೂಲಕ ಅರ್ಧ ಕಿ.ಮೀ ಶವ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು