ದಶಕದ ನೀರಾವರಿ ಕನಸು ನನಸಾಗಲಿದೆ ಇಂದು

28 ಕೆರೆಗಳ ಒಡಲು ತುಂಬಲಿದೆ ಜಾಲವಾಡಗಿ ಏತ ನೀರಾವರಿ ಯೋಜನೆ

Team Udayavani, Apr 15, 2022, 12:10 PM IST

7

ಗದಗ: ಜಿಲ್ಲೆಯ ಎರಡೂ ಬದಿಗೆ ತುಂಗಭದ್ರಾ ಮತ್ತು ಮಲಪ್ರಭಾ ನದಿಗಳು ಹರಿಯುತ್ತಿದ್ದರೂ, ಜಿಲ್ಲೆಯ ಬಹುಭಾಗ ನೀರಾವರಿ ಸೌಲಭ್ಯದಿಂದ ವಂಚಿತವಾಗಿದೆ. ಗದಗ, ಮುಂಡರಗಿ ಹಾಗೂ ಶಿರಹಟ್ಟಿ ಭಾಗಕ್ಕೆ ನೀರಾವರಿ ಸೌಲಭ್ಯ ದೊರೆಯಬೇಕೆಂಬ ರೈತರ ಬಹು ವರ್ಷಗಳ ಬೇಡಿಕೆಗೆ ಸರಕಾರ ಸ್ಪಂದಿಸಿದೆ. ಮೂರೂ ತಾಲೂಕಿನ ಒಟ್ಟು 28 ಕೆರೆಗಳಿಗೆ ತುಂಗಭದ್ರಾ ನದಿ ನೀರು ತುಂಬಿಸಲು ರಾಜ್ಯ ಸರಕಾರ ಭಗೀರಥ ಪ್ರಯತ್ನಕ್ಕೆ ಮುಂದಾಗಿದೆ.

ಜಿಲ್ಲೆಗೆ ಹೊಂದಿಕೊಂಡೇ ಎರಡು ನದಿಗಳಿದ್ದು, ಮಳೆಗಾಲದಲ್ಲಿ ಜೀವ ಜಲದಿಂದ ಭೋರ್ಗರೆಯುತ್ತವೆ. ಆದರೂ, ಜಿಲ್ಲೆಯ ರೈತರ ಪಾಲಿಗೆ ಕೈಗೆಟುಕದ ಕುಸುಮವಾಗಿದೆ. ಈ ಭಾಗದ ರೈತರ ದಶಕಗಳ ನೀರಾವರಿ ಬೇಡಿಕೆಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ ಹಾಗೂ ಗದಗ ಮತಕ್ಷೇತ್ರದ ಪರಾಜಿತ ಅಭ್ಯರ್ಥಿ ಅನಿಲ್‌ ಮೆಣಸಿನಕಾಯಿ ಸರಕಾರದ ಮಟ್ಟದಲ್ಲಿ ಧ್ವನಿಗೂಡಿಸಿದ್ದಾರೆ. ಅದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಾಲವಾಡಗಿ ಏತ ನೀರಾವರಿ ಯೋಜನೆಗೆ ಅಸ್ತು ಎಂದಿದ್ದು, 197.50 ಕೋಟಿ ರೂ. ಒದಗಿಸಿದ್ದಾರೆ ಎನ್ನಲಾಗಿದೆ.

ಜಾಲವಾಡಗಿ ಏತ ನೀರಾವರಿ ಯೋಜನೆಯಡಿ ಪ್ರಾಥಮಿಕ ಹಂತದಲ್ಲಿ 28 ಕೆರೆಗಳಿಗೆ ನೀರು ತುಂಬಿಸಲು ಉದ್ದೇಶಿಸಿದ್ದು, ಬಳಿಕ ಒಟ್ಟು 31 ಕೆರೆಗಳಿಗೆ ನೀರುಣಿಸುವ ಚಿಂತನೆ ನಡೆಸಿದೆ.

ಯಾವ್ಯಾವ ಕೆರೆಗಳಿಗೆ ನೀರು? ಜಾಲವಾಡಗಿ ಏತ ನೀರಾವರಿ ಯೋಜನೆಯಡಿ ಎರಡು ಹಂತದಲ್ಲಿ ನೀರೆತ್ತುವಳಿ ಮಾಡಿ, ಕೊಳವೆ ಮಾರ್ಗದ ಮೂಲಕ 28 ಕೆರೆಗಳಿಗೆ ನೀರು ತುಂಬಿಸಲು ನೀಲನಕ್ಷೆ ಸಿದ್ಧಪಡಿಸಿದೆ. ಮೊದಲ ಹಂತದ ನೀರೆತ್ತಿ, ಹಮ್ಮಿಗಿ ಸ್ವಾಗಿನಕೆರೆ, ಕಟ್ಟೆಬಸವಣ್ಣ ಕೆರೆ, ಮುರಡಿಕೆರೆ, ಕೇಲೂರು ಕೆರೆ, ಚಿಕ್ಕವಡ್ಡಟ್ಟಿಯ ಎರಡು ಕೆರೆಗಳು, ಕಡಕೋಳ ಕೆರೆ ಹಾಗೂ ಎರಡು ಚೆಕ್‌ಡ್ಯಾಂಗಳಿಗೆ ನೀರು ಹರಿಸಲಾಗುತ್ತದೆ.

2ನೇ ಹಂತದ ನೀರೆತ್ತುವಳಿ ಮಾಡಿ ಜಲ್ಲಿಗೇರಿ ಕೆರೆ, ಹೊಸಳ್ಳಿ ಕೆರೆ, ಮಾಗಡಿ ಕೆರೆ, ಮಹಲಿಂಗಪುರ, ಸೊರಟೂರು, ಅತ್ತಿಕಟ್ಟಿ, ನಭಾಪುರ, ನಾಗಾವಿ, ಹೊಸೂರು, ಸೀತಾಲಹರಿ, ಹರ್ತಿ, ಕುರ್ತಕೋಟಿ, ಮುಳಗುಂದ, ಬೆಳದಡಿ, ಮಲ್ಲಸಮುದ್ರ, ಕಣವಿ, ಚಿಂಚಲಿ, ಕಲ್ಲೂರು, ನಿಲಗುಂದ, ಕಳಸಾಪುರ ಮತ್ತು ಪಾಪನಾಶಿ ಕೆರೆಗಳ ಒಡಲು ತುಂಬಿಸುವುದು ಯೋಜನೆಯ ಮುಖ್ಯ ಉದ್ದೇಶ.

0.557 ಟಿಎಂಸಿ ನೀರಿನ ಸದ್ಬಳಕೆ: ಪ್ರತೀ ವರ್ಷ ಜೂನ್‌ ಮತ್ತು ನವೆಂಬರ್‌ ತಿಂಗಳಲ್ಲಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತದೆ. ಮಳೆಗಾಲದಲ್ಲಿ ಅಪಾರ ಪ್ರಮಾಣದ ಮುಂದಕ್ಕೆ ಹರಿದು ಹೋಗುವ ನೀರನ್ನು ಏತ ನೀರಾವರಿ ಯೋಜನೆ ಮೂಲಕ 28 ಕೆರೆಗಳಿಗೆ ಈ ವೇಳೆ ಸತತ 120 ದಿನಗಳ ಕಾಲ ಸುಮಾರು 0.557 ಟಿಎಂಸಿ ನೀರು ಎತ್ತುವಳಿ ಮಾಡಲಾಗುತ್ತದೆ. ಅದಕ್ಕಾಗಿ ಹಮ್ಮಿಗಿ ಬ್ಯಾರೇಜ್‌ ಹಿನ್ನೀರಿನಲ್ಲಿ ಜ್ಯಾಕ್ವೆಲ್‌ ನಿರ್ಮಿಸಲಾಗುತ್ತದೆ. ಬಳಿಕ ಅದನ್ನು ಭೂಮಿಯ ಗುರುತ್ವಾಕರ್ಷಣೆ ಆಧರಿಸಿ ಕೊಳವೆಗಳ ಮೂಲಕ ಕೆರೆಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿದೆ.

ಅಂತರ್ಜಲ ವೃದ್ಧಿಗೆ ಒತ್ತು: ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಹೀಗಾಗಿ, ಕೆರೆಗಳಿಗೆ ನದಿ ನೀರು ತುಂಬಿಸುವುದರಿಂದ ಅಂತರ್ಜಲ ಮರು ಪೂರಣವಾಗಲಿದೆ. ಜೊತೆಗೆ ಸುತ್ತಮುತ್ತಲಿನ ಕೃಷಿಕರು, ಜನ, ಜಾನುವಾರುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ಮಹತ್ವಾಕಾಂಕ್ಷೆಯಿಂದ ಜಾಲವಾಡಗಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ತರಲಾಗುತ್ತಿದೆ.

ದಶಕದ ಕನಸು ಈಡೇರುವ ಹೊತ್ತು: ಈ ಹಿಂದೆ ಸಿಂಗಟಾಲೂರು ಏತ ನೀರಾವರಿ ಯೋಜನೆ ಜಾರಿ ವೇಳೆ ಮೂರು ತಾಲೂಕುಗಳ ವಿವಿಧ ಗ್ರಾಮಗಳು ಕೈಜಾರಿ ಹೋಗಿದ್ದವು. ಇದರಿಂದ ಆಕ್ರೋಶಗೊಂಡ ರೈತಾಪಿ ಜನರು, ಸರಕಾರದ ವಿರುದ್ಧ ಸಣ್ಣ ಧ್ವನಿಯಲ್ಲೇ ಪ್ರತಿಭಟನೆ ನಡೆಸಿದ್ದರು. ದಶಕದ ಕನಸಿಗೆ ಈಗ ಈಡೇರುವ ಕಾಲು ಕೂಡಿಬಂದಿದೆ.

 

ಈ ಭಾಗದ ಹಳ್ಳಿಗರ ಬಹುದಿನಗಳ ಬೇಡಿಕೆಯಾಗಿದ್ದ ಜಾಲವಾಡಗಿ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 197.50 ಕೋಟಿ ರೂ. ಒದಗಿಸಿದ್ದಾರೆ. ಶೀಘ್ರವೇ ಯೋಜನೆಗೆ ಚಾಲನೆ ದೊರೆಯಲಿದ್ದು, ಈ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಿ, ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.     –ಸಿ.ಸಿ.ಪಾಟೀಲ, ಲೋಕೋಪಯೋಗಿ ಸಚಿವರು

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.