ಬಗರ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿ
Team Udayavani, Jan 19, 2020, 2:15 PM IST
ಗಜೇಂದ್ರಗಡ: ಬಗರ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವುದಲ್ಲದೇ ರೈತರನ್ನು ಒಕ್ಕಲೆಬ್ಬಿಸುವುದನ್ನು ಅರಣ್ಯ ಇಲಾಖೆ ನಿಲ್ಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘ ಕಾರ್ಯಕರ್ತರು ಶನಿವಾರ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
ಕಳೆದ ಹಲವಾರು ದಶಕಗಳಿಂದ ಬಡ ಕುಟುಂಬಗಳು ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ ಬದುಕು ನಡೆಸುತ್ತಿವೆ. ಕರ್ನಾಟಕ ಭೂ ಕಂದಾಯ ನಿಯಮ 2017 ತಿದ್ದುಪಡಿಯಿಂದಾಗಿ ನೂರಾರು ದಲಿತ ಕೃಷಿ ಕಾರ್ಮಿಕರು ಮತ್ತು ಬಡ ರೈತ ಕುಟುಂಬಗಳಿಗೆ ಭೂಮಿ ಸಿಗುವ ಅವಕಾಶ ಒದಗಿಸಿದೆ. ಇದನ್ನು ನಂಬಿ ಫಾರ್ಮ್ ನಂ. 53ರ ಅಡಿ ಬಹುತೇಕ ಜನರು ಅರ್ಜಿ ಸಲ್ಲಿಸಿದ್ದರು. ಕಾನೂನಿನ ತಾಂತ್ರಿಕ ತೊಡಕುಗಳು ಅಲ್ಲದೇ ರಾಜಕೀಯ ಹಿತಾಸಕ್ತಿಗಾಗಿ ಲಕ್ಷಾಂತರ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಬಗರ ಹುಕುಂ ಸಾಗುವಳಿದಾರರ ಅರ್ಜಿ ಹಾಕಿಕೊಳ್ಳದ ಮತ್ತು ಹಾಕಿದ ಬಡ ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರನ್ನು ಭೂಗಳ್ಳರ ಪಟ್ಟಿಗೆ ಸೇರಿಸಿ ಭೂಮಿಯಿಂದ ಒಕ್ಕಲೆಬ್ಬಿಸುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.
ವಿಶೇಷ ನ್ಯಾಯಾಲಯದ ಭೂ ಕಬಳಿಕೆ ನಿಷೇಧ ಕಾಯ್ದೆ ತಡೆ ಹಿಡಿದು ಊಳುವವನೇ ಭೂಮಿಯ ಒಡೆಯ ಘೋಷಣೆ ಅಡಿಯಲ್ಲಿ ಬಡವರಿಗೆ ಭೂಮಿ ಸಕ್ರಮವಾಗಿ ಮಾಡಿ ಪಟ್ಟಾ ಕೊಡಬೇಕು ಎಂದು ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿದರೂ ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ. 2019ರಲ್ಲಿ ಬಗರ ಹುಕುಂ ಸಾಗುವಳಿದಾರರಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿತ್ತು. ಆದರೀಗ ಸ್ಥಗಿತಗೊಳಿಸಲಾಗಿದೆ. ಕೂಡಲೇ ಆನ್ಲೈನ್ ಅರ್ಜಿ ಪಡೆಯಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಸಂಘಟಕರಿಂದ ಮನವಿ ಸ್ವೀಕರಿಸಿದರು. ಬಾಲು ರಾಠೊಡ, ಶಿವು ಚವ್ಹಾಣ, ಪೀರು ರಾಠೊಡ, ಗುರುನಾಥ ರಾಠೊಡ, ಸೂರಪ್ಪ ರಾಠೊಡ, ತುಳಜವ್ವ ಚವ್ಹಾಣ, ಪಾರವ್ವ ರಾಠೊಡ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್