ನರೇಗಲ್ಲನಲ್ಲಿ ‘ಕಡಬಡ’ ಸೋಗು ನೃತ್ಯ

•ಒಂದು ತಂಡದಲ್ಲಿ 20-40 ವೇಷಧಾರಿಗಳು •ಶ್ರಾವಣಮಾಸ ಮಂಗಳವಾರ-ಶುಕ್ರವಾರ ಮಾತ್ರ ಆಟ

Team Udayavani, Aug 28, 2019, 11:08 AM IST

gadaga-tdy-2

ನರೇಗಲ್ಲ: ಪಟ್ಟಣದ ಕಟ್ಟಿ ಬಸವೇಶ್ವರ ಓಣಿ ಜನರಿಂದ ಮಂಗಳವಾರ ಸಂಜೆ ಕಡಬಡ ಸೋಗಿನ ಮೆರವಣಿಗೆ ಜರುಗಿತು.

ನರೇಗಲ್ಲ: ಜಿಲ್ಲೆಯಲ್ಲಿ ಎಲ್ಲೂ ಕಾಣದ ಸಾಂಪ್ರದಾಯಿಕ ಜನಪದ ಶೈಲಿಯ ಆಟ ‘ಕಡಬಡ’ ಸೋಗು ಪಟ್ಟಣದಲ್ಲಿ ಚಾಲ್ತಿಯಲ್ಲಿದೆ.

ಪ್ರತಿವರ್ಷ ಶ್ರಾವಣ ಮಾಸದಲ್ಲಿ ಪಟ್ಟಣದ ವಿವಿಧ ಓಣಿಗಳಲ್ಲಿ ಮಾತ್ರ ಆಡುವ ವಿಶೇಷ ನೃತ್ಯವನ್ನು ಪ್ರದರ್ಶಿಸಲು ಕಲಾವಿದರು ತುದಿಗಾಲ ಮೇಲೆ ನಿಂತಿರುತ್ತಾರೆ. ಶ್ರಾವಣ ಮಾಸದ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಈ ಆಟ ಆಡಲಾಗುತ್ತಿದ್ದು, ಇಲ್ಲಿನ ಯುವಕರು ಮತ್ತು ಹಿರಿಯರು ನೂರಾರು ವರ್ಷಗಳಿಂದಲೂ ಈ ಆಟ ಆಡುತ್ತ ನಮ್ಮ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

ಶ್ರಾವಣ ಮಾಸವೆಂದರೆ ಅನೇಕ ಸಾಂಕ್ರಾಮಿಕ ಮತ್ತಿತರ ರೋಗಗಳಿಂದ ಜನರು ಬಳಲುವ ಸಾಧ್ಯತೆ ಹೆಚ್ಚು. ಬಿತ್ತನೆ ಮುಗಿಸಿದ ರೈತರು ವರುಣನ ಕೃಪೆಗಾಗಿ ಕಾದು ಕುಳಿತಿರುವ ಮಾಸವೂ ಹೌದು. ಮಳೆ ಚೆನ್ನಾಗಿ ಆಗಲಿ, ಬರುವ ಎಲ್ಲ ರೋಗಗಳು ದೂರವಾಗಲಿ ಮತ್ತು ಜನತೆಗೆ ಈ ಸಮಯದಲ್ಲಿ ಮನರಂಜನೆ ನೀಡಬೇಕೆನ್ನುವ ದೃಷ್ಟಿಯಿಂದಲೂ ಈ ಕಡಬಡ ಸೋಗನ್ನು ಆಡಲಾಗುತ್ತಿದೆ.

ಆಟ ನೋಡುವುದೇ ಸೊಗಸು: ಕಡಬಡ ಸೋಗಿನ ಒಂದು ತಂಡದಲ್ಲಿ 20ರಿಂದ 40 ವೇಷಧಾರಿಗಳಿರುತ್ತಾರೆ. ದೇವಿ, ಬ್ರಹ್ಮ, ವಿಷ್ಣು, ಮಹೇಶ್ವರ, ದೇವೇಂದ್ರ, ರಂಭೆ, ಊರ್ವಶಿ, ಮೇನಕೆ, ರಾಕ್ಷಸರು (ಕಡಬಡ), ಯಮಧರ್ಮ, ಹನುಮಂತ ಹೀಗೆ ಹತ್ತು ಹಲವು ಪೌರಾಣಿಕ ಪಾತ್ರಗಳ ವೇಷಧಾರಿಗಳು ಇರುತ್ತಾರೆ. ವಾಹನ ಮುಂದೆ ದೇವಿ ಕುಣಿತವಿದ್ದರೆ ಆಕೆಯನ್ನು ಕಾಡಲು ರಾಕ್ಷಸರು ಕಾಯುತ್ತಿರುತ್ತಾರೆ. ದೇವಿ ಅವರನ್ನು ಸಂಹರಿಸಲು ಬಂದಾಗ ಆಡುವ ಆಟ ನೋಡುವುದೇ ಒಂದು ಸೊಗಸು. ನರೇಗಲ್ಲನ ಈಟಿಯವರ ಓಣಿ, ಗುಡಿ ಓಣಿ, ಪಾಯಪ್ಪಗೌಡ್ರ ಓಣಿ, ಕಟ್ಟಿ ಬಸವೇಶ್ವರ ಓಣಿ, ಹಿರೇಮಠದ ಓಣಿ, ಹಲಗೇರಿ ಓಣಿ, ಅಂಬೇಡ್ಕರ್‌ ಓಣಿ ಸೇರಿದಂತೆ ವಿವಿಧ ಓಣಿಯ ಜನರು ಶ್ರಾವಣ ಮಾಸದಲ್ಲಿ ಈ ‘ಕಡಬಡ’ ಸೋಗನ್ನು ಆಡುತ್ತಾರೆ. ಸೋಗಿನ ಪಾತ್ರ ಧರಿಸಲು ಯುವಕರು ನಾ ಮುಂದು ತಾ ಮುಂದು ಎಂದು ಧಾವಿಸುತ್ತಾರೆ. ಈ ಸೋಗಿನ ಸೊಗಸು, ವೇಷಧಾರಿಗಳ ಉತ್ಸಾಹ, ಬಣ್ಣ ಬಳಿಯವವರ ಕಲೆ ಕುರಿತು ವರ್ಣಿಸಲು ಅಸಾಧ್ಯ. ಮತ್ತೂಬ್ಬರಿಂದ ಕಥೆಯ ರೂಪದಲ್ಲಿ ಕೇಳಿದರೆ ಇದರ ಸ್ವಾರಸ್ಯ ತಿಳಿಯುವುದಿಲ್ಲ. ಇದನ್ನು ಕಣ್ಣಾರೆ ಕಂಡಾಗ ಮಾತ್ರ ಅದರಲ್ಲಿನ ನವರಸಗಳು ಅರ್ಥವಾಗುತ್ತದೆ.

 

•ಸಿಕಂದರ ಆರಿ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.