ಗಜೇಂದ್ರಗಡ ಬೆಟ್ಟದಲ್ಲಿ ʼಕಾಮನ ಬಿಲ್ಲು ಜೇಡ’ ಪತ್ತೆ

ದಕ್ಷಿಣ ಭಾರತ-ಶ್ರೀಲಂಕಾ ದೇಶದಲ್ಲಿ ಕಂಡು ಬರುವ ಜೇಡ; ಸಾಲ್ಟಿಸಿಡೇ ಕುಟುಂಬಕ್ಕೆ ಸೇರಿದ ಸ್ಟೆನಾಲೂರಿಲಸ್‌ ಲೆಸರ್ಟಿ ಹೆಸರಿನ ಕೀಟ

Team Udayavani, Sep 5, 2022, 2:42 PM IST

11

ಗಜೇಂದ್ರಗಡ: ದಕ್ಷಿಣ ಭಾರತ, ಶ್ರೀಲಂಕಾ ದೇಶದಲ್ಲಿ ಕಂಡುಬರುವ ಸಾಲ್ಟಿಸಿಡೇ ಕುಟುಂಬಕ್ಕೆ ಸೇರಿದ ಸ್ಟೆನಾಲೂರಿಲಸ್‌ ಲೆಸರ್ಟಿ ಹೆಸರಿನ ಕಾಮನಬಿಲ್ಲು ಜೇಡ ಗಜೇಂದ್ರಗಡ ಬೆಟ್ಟದಲ್ಲಿ ಪತ್ತೆಯಾಗಿದೆ.

ಸದಾ ಒಂದಿಲ್ಲೊಂದು ಕೌತುಕಕ್ಕೆ ಸಾಕ್ಷಿಯಾಗಿರುವ ಗಜೇಂದ್ರಗಡ ಬೆಟ್ಟದಲ್ಲಿ ಇದೀಗ ಮತ್ತೂಂದು ವಿಭಿನ್ನ ಜಾತಿಯ ಕೀಟ ಪತ್ತೆಯಾಗಿದೆ. ಪರಿಸರ ಸಂರಕ್ಷಕರಾದ ಮಂಜುನಾಥ ನಾಯಕ, ಸಂಗಮೇಶ ಕಡಗದ ಹಾಗೂ ಶರಣು ಗೌಡರ ನೇತೃತ್ವದ ತಂಡ ಪಟ್ಟಣದ ಬೆಟ್ಟ-ಗುಡ್ಡಗಳಲ್ಲಿ ಸಂಶೋಧನೆ ನಡೆಸಿ ಈ ಕೀಟ ಪತ್ತೆ ಹಚ್ಚಿದ್ದಾರೆ.

ವಿಶೇಷತೆಯೇನು?: ಎಲ್ಲ ಜೇಡಗಳು ಬಲೆ ಹೆಣೆಯುವುದಿಲ್ಲ. ಈ ಜೇಡಗಳೂ ಬಲೆ ಹೆಣೆಯುವದಿಲ್ಲ. ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ನೆಗೆಯುತ್ತವೆ. ಆದ್ದರಿಂದ, ಇವುಗಳನ್ನು “ನೆಗೆ ಜೇಡ’ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. 5 ಎಂಎಂ ಗಾತ್ರ ಹೊಂದಿರುತ್ತವೆ. ಹೆಣ್ಣು ಜೇಡ ಗಂಡು ಜೇಡಕ್ಕಿಂತ ಸ್ವಲ್ಪ ದೊಡ್ಡದಿರುತ್ತದೆ.

ಎಲ್ಲೆಲ್ಲಿ ಹಂಚಿಕೆ?: ಈ ಜೇಡ ದಕ್ಷಿಣ ಭಾರತ ಮತ್ತು ಶ್ರೀಲಂಕಾ ದೇಶದಲ್ಲಿ ಸಾಮಾನ್ಯವಾಗಿ ಕಂಡು ಬರುತ್ತವೆ. ಜೀವ ವೈವಿಧ್ಯ ಸಂಶೋಧಕ ಮಂಜುನಾಥ ನಾಯಕ್‌ ನೇತೃತ್ವದ ತಂಡ ಈ ಜೇಡದ ಇರುವಿಕೆಯನ್ನು ಪ್ರಥಮ ಬಾರಿಗೆ ಗದಗ ಜಿಲ್ಲೆಯಲ್ಲಿ ಗುರುತಿಸಿದ್ದಾರೆ. ಇದರ ದೇಹದ ಬಣ್ಣ ಆಕರ್ಷಕವಾಗಿದ್ದು, ಗಂಡು ಜೇಡಗಳ ಮುಖದ ಮುಂಭಾಗದಲ್ಲಿ ಆಕರ್ಷಕ ಕೆಂಪು ಮತ್ತು ನೀಲಿ ಸಮತಲ ಪಟ್ಟಿಗಳಿರುತ್ತವೆ. ಕಾಮನಬಿಲ್ಲಿನ ವರ್ಣ ಸಂಯೋಜನೆಯಂತಿದ್ದು, ಕಾಮನಬಿಲ್ಲಿನ ಜೇಡ ಎಂದೂ ಕರೆಲಾಗುತ್ತದೆ. ಇನ್ನು ಹೆಣ್ಣು ಜೇಡಗಳಲ್ಲಿ ಈ ಪಟ್ಟಿಗಳು ಮಂದ ವರ್ಣದಿಂದ ಕೂಡಿದೆ.

ಪರಿಸರ ಸಮತೋಲನಕ್ಕೆ ಜೇಡಗಳ ಪಾತ್ರ: ಜೇಡಗಳು ರೈತರಿಗೆ ಪೀಡಕವಾದ ಕೀಟಗಳನ್ನು ಭಕ್ಷಿಸುವುದರ ಮೂಲಕ ಜೈವಿಕ ಕೀಟ ನಿಯಂತ್ರಕಗಳಾಗಿವೆ. ಬೇಟೆ ಮತ್ತು ಭಕ್ಷಕದ ಆಹಾರ ಸರಪಳಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕೆಲವು ಪ್ರಭೇದದ ಜೇಡಗಳಲ್ಲಿರುವ ವಿಷಯವನ್ನು ವೈದ್ಯಕೀಯ ಕ್ಷೇತ್ರಗಳಲ್ಲಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ.

ಅಧ್ಯಯನದ ಪ್ರಕಾರ ಪ್ರತಿದಿನ ಒಂದು ಜೇಡ ತನ್ನ ದೇಹದ ತೂಕಕ್ಕಿಂತ ನಾಲ್ಕು ಪಟ್ಟು ಆಹಾರ ಸೇವಿಸುತ್ತವೆ. ಅಂದರೆ ಒಂದು ಎಕರೆ ನೈಸರ್ಗಿಕ ಆವಾಸದಲ್ಲಿ ಸುಮಾರು 1 ಲಕ್ಷ ವಿವಿಧ ಜೇಡಗಳು ವಾಸಿಸುತ್ತವೆ. ಇವುಗಳು ಪ್ರತಿನಿತ್ಯ 4-5 ಕೀಟಗಳನ್ನು ತಿನ್ನುತ್ತವೆ. ಹೀಗೆ ವಾರ್ಷಿಕವಾಗಿ ಸರಾಸರಿ 800 ಮಿಲಿಯನ್‌ ಕೀಟಗಳನ್ನು ಭಕ್ಷಿಸುವುದರ ಮೂಲಕ ರೈತನ ಮಿತ್ರನಾಗಿವೆ. ವಿಭಿನ್ನ ಜೇಡಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಚಿಟ್ಟೆಗಿಂತಲೂ ಸುಂದರ ವರ್ಣಗಳನ್ನು ಕಾಣಬಹುದು. ಪ್ರತಿ ಜೀವಿ ಪ್ರಕೃತಿಯ ಭಾಗ. ನಾವೂ ಸಹ ಪ್ರಕೃತಿಯ ಭಾಗ. ಪರಿಸರದ ಪ್ರತಿ ಜೀವಿಗಳ ಸಂಖ್ಯೆ ನಿರ್ದಿಷ್ಟ ಅನುಪಾತದಲ್ಲಿದ್ದಾಗ ಆರೋಗ್ಯಕರ ಪರಿಸರ ಉಳಿಯುತ್ತದೆ. ಗದಗ ಜಿಲ್ಲೆಯ ಅರಣ್ಯ ಇಲಾಖೆ ಸಹಕಾರದೊಂದಿಗೆ ಈ ತಂಡ ಗಜೇಂದ್ರಗಡ ಭಾಗದ ಜೀವ ವೈವಿಧ್ಯತೆಯನ್ನು ಕಳೆದ 5 ವರ್ಷದಿಂದ ದಾಖಲೀಕರಿಸುತ್ತಿದೆ.

ಗಜೇಂದ್ರಗಡ ಬೆಟ್ಟಗಳು ಸಮೃದ್ಧ ಜೀವ ವೈವಿಧ್ಯ ತಾಣಗಳಾಗಿದ್ದು, ಪ್ರತಿ ಜೀವಿ ಆಹಾರ ಸರಪಳಿಯಲ್ಲಿ ಮಹತ್ವದ ಪಾತ್ರ ವಹಿಸಿ ಪರಿಸರ ಸಮತೋಲನ ಕಾಪಾಡುತ್ತವೆ. ಸಾರ್ವಜನಿಕರಲ್ಲಿ ಈ ಕುರಿತು ಮಹತ್ವದ ಅರಿವು ಮೂಡಿಸಲಾಗುತ್ತಿದೆ.  -ಪರಿಮಳ ವಿ.ಎಚ್‌., ಉಪಸಂರಕ್ಷಣಾಧಿಕಾರಿ

ಗದಗ ಜಿಲ್ಲೆಯ ಅರಣ್ಯ ಇಲಾಖೆ ಸಹಕಾರದೊಂದಿಗೆ ಗಜೇಂದ್ರಗಡ ಭಾಗದ ಜೀವ ವೈವಿಧ್ಯತೆಯನ್ನು ಕಳೆದ 5 ವರ್ಷದಿಂದ ದಾಖಲೀಕರಿಸಲಾಗುತ್ತಿದೆ. ಈ ಭಾಗದ ಪ್ರಕೃತಿ ಸಂಪತ್ತು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. -ಮಂಜುನಾಥ ನಾಯಕ, ಜೀವ ವೈವಿಧ್ಯ ಸಂಶೋಧಕರು

-ಡಿ.ಜಿ.ಮೋಮಿನ್‌

ಟಾಪ್ ನ್ಯೂಸ್

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.