ಕಪ್ಪತ್ತಗುಡ್ಡ ರಕ್ಷಣೆಗೆ ಮುಂದಾಗಲಿ ಸರ್ಕಾರ
Team Udayavani, Jun 15, 2020, 3:40 PM IST
ಗದಗ: ಪಾರಂಪರಿಕ ಔಷಧ ಅಥವಾ ನಾಟಿ ಔಷಧಿಯನ್ನು ಉಪಯೋಗಿಸುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳಿಲ್ಲ ಎಂದು ಕಪ್ಪತ್ತಗುಡ್ಡ ಗಂಗಿಬಾವಿಮಠದ ಪಾರಂಪರಿಕ ವೈದ್ಯ ಸಿ.ಎಂ.ಗುರುಶಾಂತಯ್ಯಸ್ವಾಮಿ ಅಭಿಪ್ರಾಯಪಟ್ಟರು.
ಗದಗ-ಬೆಟಗೇರಿ ರೋಟರಿ ಕ್ಲಬ್ನ ಸದಸ್ಯರ ತಂಡ ಕೈಗೊಂಡಿದ್ದ “ಕಪ್ಪತ್ತಗುಡ್ಡ ಪರಿಸರ ಪ್ರಜ್ಞೆ’ ಹೊರ ಸಂಚಾರ ಯೋಜನಾ ಕಾರ್ಯಕ್ರಮದಡಿ ಕಪ್ಪತ್ತಗುಡ್ಡ ಗಂಗಿಬಾವಿಮಠಕ್ಕೆ ಭೇಟಿ ನೀಡಿದ ತಂಡದೊಂದಿಗೆ ಸಂವಾದ ನಡೆಸಿದ ಅವರು, ಪಾರಂಪರಿಕ ವೈದ್ಯರು ಬಳಸುವ ಔಷಧಿಯ ಸಸಿಗಳ ಬಗ್ಗೆ ಮತ್ತು ಅದರ ಉಪಯೋಗಗಳು, ಗಿಡಮೂಲಿಕೆಗಳಿಂದ ಇನ್ನೂ ಅನೇಕ ಔಷಧಗಳು ತಯಾರಾಗುತ್ತಿದ್ದರೂ, ಜನರಿಗೆ ಔಷಧಿಧೀಯ ಸಸ್ಯಗಳ ಸಂರಕ್ಷಣೆಯ ಮಹತ್ವ ಅರಿವಾಗುತ್ತಿಲ್ಲ. ಜೊತೆಗೆ ಇಂಗ್ಲಿಷ್ ಔಷಧ, ಚಿಕಿತ್ಸೆಯಿಂದ ಉಂಟಾಗುವ ಅಡ್ಡ ಪರಿಣಾಮಗಳಿಗೆ ಒಳಗಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಅಪಾರ ಖನಿಜ ಸಂಪತ್ತು, ಔಷಧೀಯ ಸಸ್ಯ ಸಂಪತ್ತು ಹೊಂದಿರುವ ಕಪ್ಪತ್ತಗುಡ್ಡವನ್ನು ಯಾವುದೇ ರೀತಿಯ ಗಣಿಗಾರಿಕೆಗೆ ಮುಕ್ತ ಮಾಡಬಾರದು. ಕಪ್ಪತ್ತಗಿರಿ ಸಂರಕ್ಷಣೆಗೆ ಸರಕಾರ ಮುಂದಾಗಬೇಕಿದೆ ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಎಸ್.ಎಸ್.ಹೊಸಳ್ಳಿಮಠ, ಮಾಜಿ ಅಧ್ಯಕ್ಷ ಡಾ|ಗಚ್ಚಿನಮಠ, ರೋಟರಿ ವೇಲ್ಫೆರ್ ಸೊಸೈಟಿಯ ಕಾರ್ಯದರ್ಶಿ ಶ್ರೀಧರ ಸುಲ್ತಾನಪೂರ, ಸದಸ್ಯ ಡಾ|ಉಪ್ಪಿನ, ಹಾಲುಮತ ಮಹಾಸಭಾದ ರಾಜ್ಯ ಅಧ್ಯಕ್ಷ ರುದ್ರಣ್ಣ ಗುಳಗುಳಿ, ಸ್ವಕುಳಸಾಳಿ ಸಮಾಜದ ಅಧ್ಯಕ್ಷ ವಿಠuಲ ಸಫಾರೆ, ಸೋಮನಗೌಡ ಪಾಟೀಲ, ಹನಮರಡ್ಡಿ ಶಿಗ್ಗಾಂವಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ