ಕಪ್ಪತ್ಪಗುಡ್ಡದಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿದೆ ಬೆಂಕಿ

ನೂರಾರು ಹೆಕ್ಟೇರ್‌ನಲ್ಲಿರುವ ಔಷಧೀಯ ಸಸ್ಯಗಳು, ಅಪರೂಪದ ಗಿಡಗಂಟಿಗಳು ನಾಶ

Team Udayavani, Mar 29, 2021, 4:34 PM IST

ಕಪ್ಪತ್ಪಗುಡ್ಡದಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿದೆ ಬೆಂಕಿ

ಮುಂಡರಗಿ: ಕಪ್ಪತ್ತಗುಡ್ಡದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಮತ್ತೆ, ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಕಪ್ಪತ್ತಗುಡªಲ್ಲಿರುವನೂರಾರು ಹೆಕ್ಟೇರ್‌ ಪ್ರದೇಶದಲ್ಲಿರುವ ಔಷಧೀಯ ಸಸ್ಯಗಳು, ಚಿಕ್ಕಪುಟ್ಟ ಗಿಡಗಂಟಿಗಳು, ಬಾದೆಹುಲ್ಲು ನಾಶವಾಗಿದೆ.

ಬೆಂಕಿ ಅವಘಡಕ್ಕೆ ಕಿಡಿಗೇಡಿಗಳ ಕೈವಾಡ ಕಾರಣವೋ ಅಥವಾ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಳ್ಳುತ್ತಿದೆಯೇ ಎಂಬುದರ ಬಗ್ಗೆ ಅರಣ್ಯ ಇಲಾಖೆಯೇ ಉತ್ತರಿಸಬೇಕಿದೆ. ಜತೆಗೆ ಕಪ್ಪತ್ತಗುಡ್ಡದಲ್ಲಿರುವಗಾಳಿಯಂತ್ರಗಳಿಂದ ಸಿಡಿಯುವ ಕಿಡಿ ಬೆಂಕಿ ಹತ್ತಲು ಕಾರಣವೋ ಎನ್ನುವುದು ತನಿಖೆಯಿಂದ ಮಾತ್ರ ಹೊರ ಬರಬೇಕಿದೆ.

ಪ್ರತಿವರ್ಷ ಕಪ್ಪತ್ತಗುಡ್ಡದಲ್ಲಿ ಬೆಂಕಿಯಿಂದ ಔಷಧೀಯ ಸಸ್ಯಗಳು, ಅಪರೂಪದ ಸಸ್ಯಗಳು, ಬಾದೆಯ ಹುಲ್ಲು, ಪ್ರಾಣಿ ಪಕ್ಷಿಗಳಿಗೆ ತೊಂದರೆಯಂತೂ ತಪ್ಪುತ್ತಿಲ್ಲ. ಕಪ್ಪತ್ತ ಹಿಲ್ಸ್‌ ವಲಯ ಅರಣ್ಯ ಇಲಾಖೆಪ್ರತಿ ವರ್ಷ ಬೆಂಕಿ ಬೀಳದಂತೆ ಮುಂಜಾಗ್ರತಾ ಕ್ರಮ ಕೈಕೊಂಡು, ಬೆಂಕಿ ಬೇರೆಡೆಗೆ ಹರಡದಂತೆ ಬೆಂಕಿಯ (ಪೈಯರ್‌ )ಲೈನ್‌ಗಳನ್ನು ಹಾಕುತ್ತದೆ. ಆದರೆ, ಕಪ್ಪತ್ತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ರಭಸವಾಗಿ ಬೀಸುವ ಗಾಳಿಯಿಂದ ಹತೋಟಿಗೆ ಬಾರದೇ ಬೆಂಕಿ ಜ್ವಾಲೆ ನಿಯಂತ್ರಣ ಮೀರಿ ಆವರಿಸತೊಡಗುತ್ತದೆ.

ಆಧುನಿಕ ಉಪಕರಣ ಅಗತ್ಯ: ಕಪ್ಪತ್ತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಾಗ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಆಧುನಿಕ ಉಪಕರಣಗಳು, ರಾಸಾಯನಿಕ ಪುಡಿಯ ಗ್ಯಾಸ್‌ ಉಪಯೋಗ ಕಂಡದ್ದು ಕಡಿಮೆಯೇ ಎನ್ನಬಹುದು. ಸಿಬ್ಬಂದಿ ಬೆಂಕಿ ನಂದಿಸಲು ಗಿಡದ ತಪ್ಪಲಿನಿಂದ ಬೆಂಕಿ ಆರಿಸುವಾಗ ಬೆಂಕಿಯ ಕೆನ್ನಾಲಿಗೆ ಹಿಡತಕ್ಕೆ ಸಿಗದೇ ಆವರಿಸತೊಡಗುತ್ತದೆ. ಇದರಿಂದ ಅರಣ್ಯದಲ್ಲಿ ಬೆಂಕಿ ಆವರಿಸುವಾಗ ಸಿಬ್ಬಂದಿ ಅಸಹಾಯಕರಾಗಿ ನಿಲ್ಲಬೇಕಾಗುತ್ತದೆ.

ಬೆಂಕಿ ನಿರೋಧಕ ಬಟ್ಟೆ-ನೀರು: ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು 24 ಗಂಟೆಯೂ ಶ್ರಮಿಸುತ್ತಾರೆ. ಆದರೆ ಬೆಂಕಿಯಿಂದ ರಕ್ಷಿಸಿಕೊಳ್ಳಲುಸಿಬ್ಬಂದಿಗೆ ಬೆಂಕಿ ನಿರೋಧಕ ಬಟ್ಟೆಗಳು, ಕಾರ್ಬನ್‌ ಡೈಆಕ್ಸೈಡ್‌ ಮತ್ತು ಹೊಗೆಯಿಂದ ರಕ್ಷಿಸಿಕೊಳ್ಳಲು ಮುಖಕ್ಕೆ ಮಾಸ್ಕ್, ಕೈಗವಸುಗಳು ಬೇಕು. ಜತೆಗೆಬೆಂಕಿಯನ್ನು ನಂದಿಸುವಾಗ ವಿಪರೀತ ದಾಹ ಉಂಟಾಗುವುದರಿಂದ ಕುಡಿಯಲು ನೀರು ಕೂಡಾ ಬೇಕಾಗುತ್ತದೆ. ಕೆಲ ಸಂದರ್ಭದಲ್ಲಿ ಬೆಂಕಿ ನಂದಿಸುವಾಗ ನೀರಡಿಕೆಯಿಂದ ಸಿಬ್ಬಂದಿ ತತ್ತರಿಸುತ್ತಾರೆ.

ಗ್ರಾಮ ಅರಣ್ಯ ಸಮಿತಿ ಸಹಭಾಗಿತ್ವ ಅಗತ್ಯ: ಕಪ್ಪತ್ತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಾಗ ಗ್ರಾಮ ಅರಣ್ಯ ಸಮಿತಿಗಳು, ಯುವ ಸಂಘಗಳ, ಗುಡ್ಡದ ಸುತ್ತಲಿನಲ್ಲಿರುವ ಹೊಲಗಳ ರೈತರ ಸಹಭಾಗಿತ್ವಕೂಡಾ ತುಂಬಾ ಅಗತ್ಯವಿದೆ. ಬೆಂಕಿ ನಂದಿಸಲುಸ್ಥಳೀಯರ ಸಹಕಾರ, ಸಹಭಾಗಿತ್ವ ಅಗತ್ಯ. ಏಕೆಂದರೆ,ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದರೆ ಬೆಂಕಿಯಿಂದಾಗುವ ಹೆಚ್ಚಿನ ನಷ್ಟ ತಪ್ಪಿಸಬಹುದಾಗಿದೆ.

ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡರೆ ಗ್ರಾಮದ ಯುವಕರು, ರೈತರು ಸ್ವಯಂಪ್ರೇರಣೆಯಿಂದ ಬೆಂಕಿ ಆರಿಸಲು ಗುಂಪು ರಚಿಸಿಕೊಂಡು ನೀರು, ಬೆಲ್ಲದ ಜತೆಗೆ ಟ್ರ್ಯಾಕ್ಟರ್‌ ತೆಗೆದುಕೊಂಡು ಹೋಗಿ ಬೆಂಕಿ ಆರಿಸಿ ಬರುತ್ತಿದ್ದೆವು. ಆದರೆ, ಅರಣ್ಯ ಇಲಾಖೆಯವರು ಅರಣ್ಯ ಸಮಿತಿಗಳು, ಜನರ ಜತೆಗೆಸಂವಾದ ನಡೆಸಿದರೆ ಸಹಕಾರ ಇದ್ದೇ ಇರುತ್ತದೆ. ಕಪ್ಪತ್ತಗುಡ್ಡದ ಸುತ್ತಲಿನ 32 ಹಳ್ಳಿಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಬೆಂಕಿ ಪ್ರಕರಣ ತಡೆಯಬಹುದು. ಪ್ರಸಕ್ತ ಬೆಂಕಿ ಪ್ರಕರಣದ ಸಮಗ್ರ ತನಿಖೆ ನಡೆದು ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು. – ಶಂಕರಗೌಡ ಜಾಯನಗೌಡರ, ಮಾಜಿ ಅಧ್ಯಕ್ಷ, ಡೋಣಿ ಗ್ರಾಪಂ

ಕಳೆದ ಒಂದು ತಿಂಗಳ ಅವಧಿಯಲ್ಲಿ ಕಪ್ಪತ್ತಗುಡ್ಡದಲ್ಲಿ 12 ಸಲ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ 700 ರಿಂದ 800 ಹೆಕ್ಟೇರ್‌ ಅರಣ್ಯ ಪ್ರದೇಶದಲ್ಲಿ ಔಷ ಧೀಯ ಸಸ್ಯಗಳು, ಬಾದೆಹುಲ್ಲು, ಸಣ್ಣಪುಟ್ಟ ಗಿಡಗಂಟಿಗಳು ಸುಟ್ಟಿವೆ. ಬೆಂಕಿ ಘಟನೆ ಕುರಿತು ಈಗಾಗಲೇ 15 ಪ್ರಕರಣಗಳನ್ನು ದಾಖಲಿಸಲಾಗಿದೆ.  –ಪ್ರದೀಪ್‌ ಪವಾರ, ಕಪ್ಪತ್ತಹಿಲ್ಸ್‌ ವಲಯ ಅರಣ್ಯಾಧಿಕಾರಿ

 

ಹು.ಬಾ.ವಡ್ಡಟಿ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.