ಕಾರಹುಣ್ಣಿಮೆ ಸಡಗರ-ಸಂಭ್ರಮ

•ಎತ್ತುಗಳಿಗೆ ವಿಶೇಷ ಪೂಜೆ •ಮನೆಗಳಲ್ಲಿ ವಿಶೇಷ ಖಾದ್ಯ •ದೇವಸ್ಥಾನಕ್ಕೆ ತೆರಳಿ ದರ್ಶನಾಶೀರ್ವಾದ

Team Udayavani, Jun 18, 2019, 7:48 AM IST

gadaga-tdy-1..

ಗದಗ: ನಗರದ ಹೊಂಬಳ ನಾಕಾ ಬಳಿ ರೈತರು ತಮ್ಮ ಎತ್ತುಗಳಿಗೆ ಗೊಟ್ಟ ಹಾಕಲು ನಾಲಿಗೆ ಶುಚಿಗೊಳಿಸಿದರು.

ಗದಗ: ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಮುನ್ನುಡಿ ಬರೆಯುವ ಕಾರಹುಣ್ಣಿಮೆಯನ್ನು ಜಿಲ್ಲೆಯಾದ್ಯಂತ ಸೋಮವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಕಾರಹುಣ್ಣಿಮೆ ಅಂಗವಾಗಿ ರೈತಾಪಿ ಜನರು ತಮ್ಮ ಎತ್ತು, ಜಾನುವಾರುಗಳಿಗೆ ಗೊಟ್ಟ ಹಾಕಿ, ಹುರುಪುಗೊಳಿಸಿದರೆ, ಮಹಿಳೆಯರು ಮನೆಗಳಲ್ಲಿ ಸಿಹಿ ತಿನಿಸು ತಯಾರಿಸುವಲ್ಲಿ ತಲ್ಲೀನರಾಗಿದ್ದರು. ಯುವಕರು ಹಾಗೂ ಚಿಣ್ಣರು ಮನೆ ಮಹಡಿ ಹಾಗೂ ಬಯಲಿನಲ್ಲಿ ಗಾಳಿಪಟ ಹಾರಿಸುವ ಮೂಲಕ ಸಂಭ್ರಮದಲ್ಲಿ ಮಿಂದೆದ್ದರು.

ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಪೂರ್ವಜರಿಂದ ಬಳುವಳಿಯಾಗಿ ಬಂದಿರುವ ‘ಗೊಟ್ಟ ಹಾಕುವ’ ಪದ್ಧತಿ ಇಂದಿಗೂ ಜಾರಿಯಲ್ಲಿದೆ. ರೈತರ ಬದುಕಿನ ಅವಿಭಾಜ್ಯವಾಗಿರುವ ಎತ್ತುಗಳಿಗೆ ಮಳೆಗಾಲದಲ್ಲಿ ಯಾವುದೇ ರೋಗಗಳು ಬಾರದಿರಲಿ, ಬೇಸಿಗೆಯಲ್ಲಿ ಒಣ ಮೇವು ತಿನ್ನುತ್ತಿದ್ದ ಜಾನುವಾರುಗಳಿಗೆ ಬೇಸಿಗೆ ಬಳಿಕ ಮಳೆಗಾಲದಲ್ಲಿ ಆಹಾರ ಕ್ರಮ ಬದಲಾಗಿ ಹಸಿರು ಮೇವು ತಿನ್ನಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾರಹುಣ್ಣಿಮೆ ನಿಮಿತ್ತ ಜಿರಿಗೆ, ಅರಿಷಿನ ಪುಡಿ, ಉಪ್ಪು ಮಿಶ್ರಣವನ್ನು ಎತ್ತುಗಳ ಬಾಯಿ ಹಾಕಿ ಸ್ವಚ್ಛಗೊಳಿಸಿದರು. ನಂತರ ಗೊಟ್ಟದಿಂದ ಎತ್ತುಗಳಿಗೆ ಜವಾರಿ ಕೋಳಿ ಮೊಟ್ಟೆ ಹಾಗೂ ಮಜ್ಜಿಗೆ ಕುಡಿಸಿದರು. ಬಳಿಕ ಅವುಗಳ ನಾಲಿಗೆಗೆ ಅರಿಷಿಣದ ಪುಡಿಯನ್ನು ತಿಕ್ಕಿದರು. ಜಿಡ್ಡು ಹಿಡಿದ ನಾಲಿಗೆಯನ್ನು ಸ್ವಚ್ಛಗೊಳಿಸುವುದರಿಂದ ಹಸಿರು ಮೇವು ರುಚಿಸುವಂತಾಗುತ್ತದೆ ಎಂಬುದು ರೈತರ ನಂಬಿಕೆ.

ನಂತರ ಕೋಡುಗಳಿಗೆ ಅರಿಷಿಣ ಮಿಶ್ರಿತ ಎಣ್ಣೆ ಹಚ್ಚಿ,ಬಣ್ಣ ಬಣ್ಣದ ರಿಬ್ಬನ್‌ ಕಟ್ಟಿ ಸಿಂಗರಿಸಿದರು. ಎತ್ತುಗಳನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ದರ್ಶನಾರ್ಶೀವಾದ ಪಡೆದುಕೊಂಡರು. ಬಳಿಕ ಮನೆಯಲ್ಲೂ ಎತ್ತುಗಳಿಗೆ ವಿಶೇಷ ಪೂಜೆ, ನೈವೇದ್ಯ ಅರ್ಪಿಸುವ ಮೂಲಕ ಈ ಬಾರಿ ಉತ್ತಮ ಮಳೆ-ಬೆಳೆಯಾಗಲಿ ಎಂದು ಬಸವಣ್ಣನಿಗೆ ಪ್ರಾರ್ಥನೆ ಸಲ್ಲಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.