ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವ
Team Udayavani, Mar 6, 2024, 12:45 PM IST
ಗದಗ: ನಗರದ ನಾಗಾವಿಯ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದ ಸಭಾಂಗಣದಲ್ಲಿ ಜರುಗಿದ ವಿವಿಯ 4ನೇ ಘಟಿಕೋತ್ಸವದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವ್ ಸಿಂಗ್ ಹಾಗೂ ಸಿ. ನಾರಾಯಣಸ್ವಾಮಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಜೊತೆಗೆ ಈರ್ವರಿಗೂ ಜೊತೆಗೆ ಗ್ರಾಮೀಣಾಭಿವೃದ್ಧಿ ಚೇತನ ಬಿರುದು ನೀಡಿ ಗೌರವಿಸಲಾಯಿತು.
ಗ್ರಾಮೀಣಾಭಿವೃದ್ಧಿಯೇ ನಮ್ಮ ಸಂಕಲ್ಪ ಘೋಷವಾಕ್ಯದಡಿ ಜರುಗಿದ 4ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರು 10 ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳ 239 ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ 5 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪದವಿಗಳನ್ನು ಪ್ರದಾನ ಮಾಡಿದರು.
ಎಂಬಿಎ ವಿಭಾಗದಿಂದ ಓಜಸ್ವಿ ಮಲ್ಲಾಡದ, ಎಂಎ ವಿಭಾಗದಿಂದ ಲಿಂಗರಾಜು ಎಚ್.ಎಂ., ಭೀಮಪ್ಪ ಛಲವಾದಿ, ಜಗದೀಶ ಬಳಿಗಾರ, ಎಂ.ಎಸ್ಸಿ ವಿಭಾಗದಿಂದ ಯಲ್ಲಾಲಿಂಗ ಹೊಸಮನಿ, ನಿಶಾ ಎಂ., ಪವಿತ್ರಾ ಶೇಠ, ಎಂಪಿಎಚ್ ವಿಭಾಗದಿಂದ ಶಾರೋನ್ ಥಾಮಸ್, ಎಂಎಸ್ಡಬ್ಲೂ ವಿಭಾಗದಿಂದ ಅಕ್ಷತಾ ಸಾನಿಕೊಪ್ಪ, ಕೀರ್ತಿ ಗಾಮನಗಟ್ಟಿ ಹಾಗೂ ಎಂ.ಕಾಂ ವಿಭಾಗದಿಂದ ಲತಾ ಕಾಡರ ಅವರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಜತೆಗೆ ಎರಡು ಮತ್ತು ಮೂರನೇ ರ್ಯಾಂಕ್ ಗಳಿಸಿದ 10 ವಿದ್ಯಾರ್ಥಿಗಳಿಗೆ ಮೆರಿಟ್ ಪ್ರಮಾಣ ಪತ್ರ ವಿತರಿಸಲಾಯಿತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಕುಲಪತಿ ವಿಷ್ಣುಕಾಂತ ಚಟಪಲ್ಲಿ, ಕೇಂದ್ರ ಸರಕಾರದ ಪಂಚಾಯತ್ ರಾಜ್ ಮಂತ್ರಾಲಯದ ಮಾಜಿ ಜಂಟಿ ಕಾರ್ಯದರ್ಶಿ ಡಾ. ಟಿ.ಆರ್. ರಘುನಂದನ, ಕುಲಸಚಿವ ಡಾ. ಸುರೇಶ ನಾಡಗೌಡರ ಸೇರಿ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು