ಗದುಗಿನ ಬಸ್‌ ನಿಲ್ದಾಣದಲ್ಲೂ ಜ್ಞಾನಾರ್ಜನೆ


Team Udayavani, Nov 23, 2019, 2:21 PM IST

gadaga-tdy-1

ಗದಗ: ಬಸ್‌ ವಿಳಂಬವಾಗಿ ಗಂಟೆಗಳ ಕಾಲ ಬಸ್‌ ಗಾಗಿ ಕಾಯುವುದು ಎಂದರೆ ಎಂತಹವರನ್ನೂ ಪೇಚಿಗೆ ಸಿಲುಕಿಸುತ್ತದೆ. ಕೆಲವೊಮ್ಮೆ ನಿರೀಕ್ಷಿತ ಸಮಯಕ್ಕೆ ಬಾರದೇ ಬೇಸರವನ್ನೂ ತರಿಸುತ್ತದೆ. ಅಂಥವರಿಗಾಗಿ ಇಲ್ಲಿನ ಹೊಸ ಬಸ್‌ ನಿಲ್ದಾಣದಲ್ಲಿರುವ ಶಾಖಾ ಗ್ರಂಥಾಲಯ ಆಕರ್ಷಣೀಯ ಕೇಂದ್ರವಾಗಿದೆ.

ನೂರಾರು ಪುಸ್ತಕ ಹಾಗೂ ಹತ್ತಾರು ಪತ್ರಿಕೆ ಹೊಂದಿರುವ ಶಾಖಾ ಗ್ರಂಥಾಲಯ ಜ್ಞಾನಾರ್ಜನೆಯ ಕೇಂದ್ರವಾಗಿದ್ದು, ಸಾರ್ವಜನಿಕರನ್ನು ಕೈ ಬೀಸಿ ಕರೆಯುತ್ತಿದೆ. ಜಿಲ್ಲಾ ಕೇಂದ್ರವಾದ ಗದಗ ನಗರಕ್ಕೆ ಪ್ರತಿನಿತ್ಯ ನಾನಾ ಕೆಲಸ ಕಾರ್ಯಗಳ ನಿಮಿತ್ತ ಜಿಲ್ಲೆಯ ವಿವಿಧೆ ಡೆಯಿಂದ ಅಸಂಖ್ಯಾತ ಜನರು ಆಗಮಿಸುತ್ತಾರೆ. ಅದರಲ್ಲೂ ತಾಲೂಕಿನ ಲಕ್ಕುಂಡಿ, ಬಿಂಕದಕಟ್ಟಿ, ಹುಲಕೋಟಿ, ಕುರ್ತಕೋ ಟಿ, ಅಸುಂಡಿ, ರೋಣ, ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕಿನ ವಿವಿಧೆಡೆಯಿಂದ ಪ್ರತಿನಿತ್ಯ ಸಾರಾರು ಸಂಖ್ಯೆಯಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಆಗಮಿಸುತ್ತಾರೆ.

ಆಸ್ಪತ್ರೆ, ಸರಕಾರದ ವಿವಿಧ ಕಚೇರಿಗಳಿಗೆ ಹಾಗೂ ವಾಣಿಜ್ಯ ಉದ್ದೇಶದಿಂದಲೂ ಗದುಗಿಗೆ ಆಗಮಿಸುವವರ ಸಂಖ್ಯೆ ಹೆಚ್ಚು. ಜೊತೆಗೆ ಹುಬ್ಬಳ್ಳಿ, ಕೊಪ್ಪಳ ಮಾರ್ಗವಾಗಿ ಸಂಚರಿಸುವವರ ಸಂಖ್ಯೆಗೂ ಕಡಿಮೆ ಇಲ್ಲ. ಆದರೆ, ಕೆಲವೊಮ್ಮೆ ನಿರೀಕ್ಷಿತ ಸಮಯಕ್ಕೆ ಬಸ್‌ ಸಿಗದೇ ಕೆಲವೊಮ್ಮೆ ಗಂಟೆಗಳ ಕಾಲ ಬಸ್‌ ಲಭ್ಯವಾಗದೇ ಬಸ್‌ ನಿಲ್ದಾಣದಲ್ಲಿ ಕಾಯುವ ಪರಿಸ್ಥಿತಿ ಎದುರಾಗುತ್ತದೆ. ಅಂಥ ಸಂದರ್ಭದಲ್ಲಿ ಸಮಯ ಸದ್ಬಳಕೆಗೆ ಇದು ವೇದಿಕೆಯಾಗಿದೆ.

 920 ಪುಸ್ತಕ-10 ಪತ್ರಿಕೆ:  ಹೊಸ ಬಸ್‌ ನಿಲ್ದಾಣದ ಲೈಬ್ರರಿಯಲ್ಲಿ ಪುಸ್ತಕಗಳಿಗಿಂತ ಹೆಚ್ಚಾಗಿ ದಿನ ಪತ್ರಿಕೆಗಳು ಹಾಗೂ ಮ್ಯಾಗಜಿನ್‌ಗಳಿಗೆ ಓದುಗರಿಂದ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತದೆ. ಹೀಗಾಗಿ 10 ಕನ್ನಡ, 4 ಆಂಗ್ಲ ದಿನ ಪತ್ರಿಕೆಗಳು ಬರುತ್ತಿವೆ. 3  ಆಂಗ್ಲ ಸೇರಿದಂತೆ 14 ಮಾಸಿಕ ಮ್ಯಾಗಜಿನ್‌ಗಳು ಬರುತ್ತಿವೆ. ಜೊತೆಗೆ ಸ್ಪರ್ಧಾ ಸ್ಪೂರ್ತಿ ಸೇರಿದಂತೆ ಎರಡು ಸ್ಪರ್ಧಾತ್ಮಕ ಪರೀಕ್ಷಾ ಮ್ಯಾಗಜಿನ್‌ಗಳು ಬರುತ್ತಿದ್ದು, ಓದುಗರನ್ನು ಆಕರ್ಷಿಸುತ್ತಿದೆ. ಜೊತೆಗೆ ಕವನ, ಹನಿಗವನ, ಪ್ರವಾಸ ಕಥನ, ಕಥೆ, ಕಾದಂಬರಿ, ನಾಟಕ ಸೇರಿದಂತೆ ಒಟ್ಟು 920 ಪುಸ್ತಕಗಳನ್ನು ಮೂರು ರ್ಯಾಕ್‌ಗಳಲ್ಲಿ ಜೋಡಿಸಲಾಗಿದೆ. ಸುಮಾರು 15 ಜನರಿಗೆ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಿನ ಸಮಯದಲ್ಲಿ ಬೆರಳೆಣಿಕೆಯಷ್ಟಿರುವ ಓದುಗರ ಸಂಖ್ಯೆ, ಶಾಲಾ- ಕಾಲೇಜು ಸಮಯದ ಬಳಿಕ ಸಂಜೆ 4ರ ವರೆಗೂ ಗ್ರಂಥಾಲಯ ಓದುಗರಿಂದ ತುಂಬಿ ತುಳುಕುತ್ತಿರುತ್ತದೆ. ಈ ಪೈಕಿ ಬಹುತೇಕರು ದಿನಪತ್ರಿಕೆಗಳ ಓದಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ ಎಂದು ಹೇಳಲಾಗಿದೆ.

 ನಿರುಪಯುಕ್ತ ಕೊಠಡಿ ಸದ್ಬಳಕೆ: ಜಿಲ್ಲಾಡಳಿತ ಭವನದಲ್ಲಿ ಗ್ರಂಥಾಲಯ ಆರಂಭಿಸಿ ಸೈ ಎನಿಸಿಕೊಂಡಿದ್ದ ಗ್ರಂಥಾಲಯ ಇಲಾಖೆ, ಅದರ ಬೆನ್ನಲ್ಲೇ ಹೊಸ ಬಸ್‌ ನಿಲ್ದಾಣದಲ್ಲಿ ಶಾಖೆಯೊಂದನ್ನು ಆರಂಭಿಸಲು ಉದ್ದೇಶಿಸಿತ್ತು. ಅದಕ್ಕಾಗಿ ಕೊಠಡಿಯೊಂದರ ಅಗತ್ಯವಿತ್ತು. ಹೊಸ ಬಸ್‌ ನಿಲ್ದಾಣದ ಪ್ರವೇಶ ದ್ವಾರದ ಎಡ ಭಾಗದಲ್ಲಿ ಪೊಲೀಸ್‌ ಚೌಕಿ, ಮಹಿಳಾ ನಿರೀಕ್ಷಣಾಲಯಗಳಿದ್ದು, ಅದರ ಪಕ್ಕದ 10×12 ಅಳತೆಯ ಪುಟ್ಟ ಕೊಠಡಿಯೊಂದು ನಿರುಪಯುಕ್ತವಾಗಿತ್ತು. ಅದನ್ನೇ ಆಯ್ಕೆ ಮಾಡಿಕೊಂಡ ಅಧಿಕಾರಿಗಳು, ಮಾದರಿ ಲೈಬ್ರರಿ ಎಂಬಂತೆ ಅಭಿವೃದ್ಧಿ ಪಡಿಸಿದ್ದಾರೆ.

ಪ್ರತಿದಿನ ಬೆಳಗ್ಗೆ 10ರಿಂದ 1.30ರ ವರೆಗೆ ಹಾಗೂ ಮಧ್ಯಾಹ್ನ 2.15ರಿಂದ 5.30ರ ವರೆಗೆ ಗ್ರಂಥಾಲಯ ಕಾರ್ಯನಿರ್ವಹಿಸುತ್ತಿದೆ. ಆದರೆ, ಊಟದ ಸಮಯದಲ್ಲೂ ಗ್ರಂಥಾಲಯವನ್ನು ತೆರೆದಿರುತ್ತವೆ. ದಿನಕ್ಕೆ 200- 300 ಜನರು ಭೇಟಿ ನೀಡುತ್ತಿದ್ದು, ಅದರಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚು. -ಮಂಜುಳಾ ಕೊಣ್ಣೂರು ಗ್ರಂಥಾಲಯ ಸಿಬ್ಬಂದಿ

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.