ಕೋಚಲಾಪುರ: ಮಳೆಗಾಗಿ ಕತ್ತೆಗಳ ಮರವಣಿಗೆ
Team Udayavani, Jun 20, 2019, 10:43 AM IST
ನರೇಗಲ್ಲ: ವರುಣನ ಕೃಪೆಗಾಗಿ ಕೋಚಲಾಪುರ ಗ್ರಾಮದಲ್ಲಿ ಕತ್ತೆಗಳ ಮೆರವಣಿಗೆ ನಡೆಯಿತು.
ನರೇಗಲ್ಲ: ಮಳೆ ಬಾರದೆ ಕಂಗಾಲಾದ ರೈತರು, ಸಾರ್ವಜನಿಕರು ಕತ್ತೆಗೆ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮಾಡಿ ಕರುಣೆ ತೋರೋ ವರುಣದೇವ ಎಂದು ಕೋಚಲಾಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಹೋಬಳಿ ವ್ಯಾಪ್ತಿಯ ರೈತರು ಕಳೆದ ಐದಾರು ವರ್ಷಗಳಿಂದ ಮಳೆ ಇಲ್ಲದೆ ಸಂಕಷ್ಟ ಪರಿಸ್ಥಿತಿ ಎದುರಿಸುವಂತಾಗಿದೆ. ಪ್ರಸಕ್ತ ಬಾರಿ ಮುಂಗಾರು ಆರಂಭವಾದರೂ ಮಳೆಯಾಗಿಲ್ಲ. ವರುಣನ ಕೃಪೆಗಾಗಿ ಕಪ್ಪೆ, ಕತ್ತೆಗಳ ಮೆರವಣಿಗೆ ಮಾಡುತ್ತಾ ಗುರ್ಜಿ ಹಾಡುತ್ತಿದ್ದಾರೆ.
ಸಮೀಪದ ಕೋಚಲಾಪುರ ಗ್ರಾಮಸ್ಥರು ಮಂಗಳವಾರ ಸಂಜೆ ಕತ್ತೆಗಳ ಮರವಣಿಗೆ ಮಾಡಿ ಮಳೆಗಾಗಿ ಪ್ರಾರ್ಥಿಸಿದರು. ಕತ್ತೆಗಳನ್ನು ಸಿಂಗರಿಸಿ, ವಿಶೇಷ ಪೂಜೆ ಸಲ್ಲಿಸಿದ ನಂತರ ಪ್ರಮುಖ ಬೀದಿಗಳಲ್ಲಿ ವಿಶೇಷ ವಾದ್ಯಗಳೊಂದಿಗೆ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ರಾಜೇಸಾಹೇಬ ನದಾಫ, ಕತ್ತೆ ಮೆರವಣಿಗೆ ಮಾಡಿದರೆ ಮಳೆಯಾಗಿ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಕೆಲ ಗ್ರಾಮಗಳಲ್ಲಿ ಮಳೆಗಾಗಿ ದೇವಸ್ಥಾನಗಳಲ್ಲಿ ಭಜನೆ, ಅಭಿಷೇಕ, ಅನ್ನಸಂತರ್ಪಣೆ ನಡೆಸಿ, ಶ್ರದ್ಧಾ ಭಕ್ತಿಯಿಂದ ದೇವರಲ್ಲಿ ಮೊರೆಯಿಡುತ್ತಿದ್ದಾರೆ ಎಂದರು.
ಕೆರೆ, ಹಳ್ಳ, ಕೊಳ್ಳಗಳ ನೀರು ಬತ್ತಿ ಹೋಗಿವೆ. ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ. ಜನ ಜಾನುವಾರಗಳು ಬದುಕಿಗೆ ಕಷ್ಟವಾಗಿದೆ. ಈಗಾಗಲೇ ಅನೇಕರು ಮಳೆಗಾಗಿ ವಾರ, ಉಪವಾಸ ಮಾಡುತ್ತಿದ್ದಾರೆ. ಮುಂಗಾರು ಮಳೆ ಇಲ್ಲದೆ ಅನ್ನದಾತ ಚಿಂತಾಕ್ರಾಂತನಾಗಿದ್ದಾರೆ ಎಂದರು.
ಪಪಂ ಸದಸ್ಯ ರಾಚಯ್ಯ ಮಾಲಗಿತ್ತಿಮಠ, ಶ್ರೀಕಾಂತ ರಡ್ಡೇರ, ಮಲ್ಲರಡ್ಡೇಪ್ಪ ರಡ್ಡೇರ, ರಜಾಕಸಾಬ್ ಅಬ್ಬಿಗೇರಿ, ಕುಮಾರ ಅಮಾತಿಗೌಡ್ರ, ಶಿವಲಿಂಗಯ್ಯ ಅಮಾತಿಗೌಡ್ರ, ಶರಣಪ್ಪಗೌಡ ಅಯ್ಯನಗೌಡ್ರ, ಬಾಬುಸಾಬ ಮಾಕಿ, ಸಂಗಯ್ಯ ಮಾಲಗಿತ್ತಿಮಠ, ಸುರೇಶ ರಡ್ಡೇರ, ಚಂದ್ರಕಾಂತ ರಡ್ಡೇರ, ಎ.ಎಸ್. ರವಡೂರ ಸೇರಿದಂತೆ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್