ಸೌಕರ್ಯ ಕೊರತೆ: ಜನರ ಪರದಾಟ

•ಸ್ವಚ್ಛಗೊಳಿಸದ್ದರಿಂದ ನಾರುತ್ತಿವೆ ಚರಂಡಿಗಳು•ಗಜೇಂದ್ರಗಡ-ಗದಗ ರಾಜ್ಯ ಹೆದ್ದಾರಿಯಲ್ಲಿ ಕಸದ ರಾಶಿ

Team Udayavani, Aug 19, 2019, 12:05 PM IST

gadaga-tdy-2

ನರೇಗಲ್ಲ: ನಿಡಗುಂದಿ ಗ್ರಾಮದ ಅಯ್ಯಪ್ಪ ಸ್ವಾಮಿ ಓಣಿ ರಸ್ತೆಯಲ್ಲಿ ನಿಂತ ನೀರು. ಸೂಡಿ ಅವರ ಪ್ಲಾಟ್‌ಗೆ ಹೋಗುವ ರಸ್ತೆ ಸ್ಥಿತಿ. (ಬಲಚಿತ್ರ

ನರೇಗಲ್ಲ: ನಿಡಗುಂದಿ ಗ್ರಾಪಂ ಆಡಳಿತದ ನಿರ್ಲಕ್ಷ್ಯದಿಂದಾಗಿ ಗ್ರಾಮಸ್ಥರು ಮೂಲ ಸೌಕರ್ಯಗಳ ಸಮಸ್ಯೆ ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ.

ಸಿಸಿ ರಸ್ತೆ, ಚರಂಡಿಗಳು ಸೇರಿದಂತೆ ಅನೇಕ ಸೌಲಭ್ಯ ಇಲ್ಲದೇ ಜನರು ಪರದಾಡುವಾಂತಗಿದೆ. ಗ್ರಾಮದ ಅಯ್ಯಪ್ಪ ಸ್ವಾಮಿ ಓಣಿ, ಸರ್ಕಾರಿ ಶಾಲೆಯಿಂದ ಸೂಡಿ ಪ್ಲಾಟ್ ರಸ್ತೆ ಮಳೆ ಬಂತ ಎಂದರೆ ಸಾಕು ಜನರ ಗೋಳು ಹೇಳ ತೀರದಾಗಿದೆ.

ಗ್ರಾಮದ ಅನೇಕ ಕಡೆಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿಲ್ಲ. ಮಳೆ ಸುರಿದ ಪರಿಣಾಮ ಸಮಸ್ಯೆ ಉದ್ಭಬಿಸಲು ಕಾರಣವಾಗಿದೆ. ಸುಮಾರು 8 ಸಾವಿರ ಜನಸಂಖ್ಯೆ ಹೊಂದಿದ್ದು, 16 ಜನ ಸದಸ್ಯರಿದ್ದಾರೆ. ಚರಂಡಿಗಳನ್ನು ಸ್ವಚ್ಛಗೊಳಿಸದೇ ಇರುವುದರಿಂದ ಕೊಳಕು ನಾರುತ್ತಿವೆ. ಇದರಿಂದ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಶನಿವಾರ ಸುರಿದ ಮಳೆಯಿಂದ ಗ್ರಾಮದ ಅಯ್ಯಪ್ಪ ಸ್ವಾಮಿ ಓಣಿ, ಸೂಡಿ, ಪ್ಲಾಟ್, ಗ್ರಾಪಂ ಹಿಂಭಾಗ, ಮುಂಭಾಗ ಸೇರಿದಂತೆ ಅನೇಕ ಭಾಗಗಳಲ್ಲಿನ ಮನೆಗೆ ಕೊಳಚೆ ನೀರು ನುಗ್ಗಿದೆ. ಗ್ರಾಮದಲ್ಲಿ ಸೊಳ್ಳೆ ಕಾಟದಿಂದ ಮುಕ್ತಿಗೊಳಿಸಲು ರಾಸಾಯನಿಕ ಸಿಂಪಡಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹಲವು ಬಾರಿ ಮೌಖೀಕ ಹಾಗೂ ಲಿಖೀತವಾಗಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿಗಳು ಇಲ್ಲದಿರುವುದರಿಂದ ಮಳೆ ಬಂದ ಸಮಯದಲ್ಲಿ ನೀರು ಮನೆಯೊಳಗೆ ನುಗ್ಗಿ ಸಾಕಷ್ಟು ತೊಂದರೆಯಾಗುತ್ತಿದೆ. ಇದರಿಂದ ಮಳೆ ನೀರು ಹರಿದು ಹೋಗಲು ಅವಕಾಶ ಇಲ್ಲದೇ, ನೇರವಾಗಿ ಜನರ ಮನೆ, ಬಣವೆಗಳಿಗೆ ನುಗ್ಗುತ್ತದೆ. ಮಳೆ ನೀರು ಮನೆಯೊಳಗೆ ಪ್ರವೇಶಿಸದಂತೆ ಸಲಕೆಯಿಂದ ಬೇರೆಡೆ ಹರಿದು ಹೋಗಲು ದಾರಿ ಮಾಡಿಕೊಡುವುದೇ ದಿನನಿತ್ಯದ ಕೆಲಸವಾಗಿ ಬಿಟ್ಟಿದೆ.

ಗಜೇಂದ್ರಗಡ-ಗದಗ ರಾಜ್ಯ ಹೆದ್ದಾರಿಯಲ್ಲಿ ಕಸದ ರಾಶಿಯಲ್ಲಿಯೇ ನಿತ್ಯ ವಿದ್ಯಾರ್ಥಿಗಳು, ಕಾರ್ಮಿಕರು, ಸಾರ್ವಜನಿಕರು ಓಡಾಡುತ್ತಾರೆ. ಆಹಾರದ ಆಸೆಯಿಂದ ತ್ಯಾಜ್ಯ ಚೀಲಗಳನ್ನು ಪ್ರಾಣಿಗಳು ಎಳೆದಾಡುವುದರಿಂದ ದುರ್ವಾಸನೆಗೆ ಕಾರಣವಾಗುತ್ತಿದ್ದರೂ ಅಧಿಕಾರಿಗಳು ಮಾತ್ರ ಯಾವುದನ್ನು ಗಮನಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಗ್ರಾಮದ ಅಯ್ಯಪ್ಪ ಸ್ವಾಮಿ ಓಣಿಯಲ್ಲಿರುವ ವಿದ್ಯುತ್‌ ಟಿಸಿ ಮಳೆಗಾಲದಲ್ಲಿ ನೀರಲ್ಲಿ ನಿಂತಿರುತ್ತದೆ. ಇದಕ್ಕೆ ಯಾವುದೇ ಭದ್ರತೆ ಇಲ್ಲ. ಹೆಸ್ಕಾಂ ಅಧಿಕಾರಿಗಳು ಇತ್ತ ಗಮನಹರಿಸಿ ಕೂಡಲೇ ಅದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಾವು ವಾಸಿಸುವ ಮನೆಗೆ ಮಳೆ ನೀರು ಮತ್ತು ಚರಂಡಿ ನೀರು ನುಗ್ಗಿರುವುದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ. ಹಲವಾರು ಭಾರಿ ಗ್ರಾಪಂ ಸದಸ್ಯರಿಗೆ ಹಾಗೂ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸಿಲ್ಲ. ನಿವು ವಾಸಿಸುವ ಮನೆ ಪಂಚಾಯಿತಿ ದಾಖಲೆಯಲ್ಲಿಲ್ಲ. ಅದಕ್ಕೆ ಯಾವುದೇ ರೀತಿಯ ಸೌಲಭ್ಯ ಕಲ್ಪಿಸಲು ಆಗುವುದಿಲ್ಲ ಎಂದು ಹೇಳಿ ಕಳುಹಿಸುತ್ತಿದ್ದಾರೆ. ಆದರೆ, ನಾವು ಮನೆ ಕಂದಾಯ ಹಾಗೂ ವಿದ್ಯುತ್‌ ಬಿಲ್ ನಿರಂತರವಾಗಿ ಕಟ್ಟುತ್ತ ಬಂದಿದ್ದೇವೆ. ಮೇಲಾಧಿಕಾರಿಗಳು ಕೂಡಲೇ ಸೌಲಭ್ಯ ಒದಗಿಸಬೇಕು ಎಂದು ವಿ.ಎಸ್‌. ಅರಮನಿ, ಎಸ್‌.ಎಲ್. ಪಾಟೀಲ ಆಗ್ರಹಿಸಿದ್ದಾರೆ.

 

•ಸಿಕಂದರ ಎಂ. ಆರಿ

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.