ಕೋರ್ಲಹಳ್ಳಿ ಸರಕಾರಿ ಶಾಲೆಗೆ ಮೂಲ ಸೌಲಭ್ಯ ಕೊರತೆ

ಮಕ್ಕಳಿಗೆ ಮಾರಕವಾದ ಮೋಟಾರ್‌ ಸ್ಟಾರ್ಟರ್‌

Team Udayavani, Jul 20, 2019, 11:31 AM IST

gadaga-tdy-2

ಮುಂಡರಗಿ: ತಾಲೂಕಿನ ಕೋರ್ಲಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವು ಮೂಲ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಶಾಲೆ ಆವರಣದಲ್ಲಿರುವ ಕೊಳವೆಬಾವಿಯ ಸ್ಟಾರ್ಟರ್‌ಗಳು ಮಕ್ಕಳ ಜೀವಕ್ಕೆ ಮಾರಕವಾಗಿ ಪರಿಣಮಿಸಿವೆ.

ಶಾಲೆಯ ಆವರಣದಲ್ಲಿ ಮೂರು ಕೊಳವೆಬಾವಿಗಳನ್ನು ಗ್ರಾಮ ಪಂಚಾಯಿತಿಯಿಂದ ಕೊರೆಯಿಸಿ ಗ್ರಾಮಕ್ಕೆ ನೀರು ಪೂರೈಕೆ ಮಾಡಲಾಗುತ್ತಿದೆ. ಜೊತೆಗೆ ಶುದ್ಧ ಕುಡಿಯುವ ನೀರಿನ ಘಟಕಕ್ಕೂ ಈ ಕೊಳವೆಬಾವಿಯ ನೀರೇ ಗತಿಯಾಗಿದ್ದರೂ ಶುದ್ಧ ನೀರಿನ ಘಟಕವು ಸ್ಥಗಿತಗೊಂಡಿದೆ. ಜೊತೆಗೆ ಶಾಲೆಯ ಬಿಸಿಯೂಟದ ಅಡುಗೆಗೆ ನೀರು ಬೇಕೆಂದರೆ ಅಡುಗೆಯವರು ಗ್ರಾಮದ ಬೇರೆಡೆಯಿಂದ ಹೊತ್ತು ತರಬೇಕಾಗಿರುವ ಅನಿವಾರ್ಯತೆಯಿದೆ. ಒಂದು ಕೊಳವೆ ಬಾವಿಯ ನೀರು ಸೋರಿಕೆಯಾಗಿ ಶಾಲಾ ಆವರಣದ ಮೈದಾನದಲ್ಲಿ ನಿಲ್ಲುತ್ತದೆ. ಈ ನೀರಿನಲ್ಲಿ ಏನಾದರೂ ವಿದ್ಯುತ್‌ ಪ್ರವಹಿಸಿದರೆ ಅನಾಹುತ ತಪ್ಪಿದ್ದಲ್ಲ.

ಕೊಳವೆಬಾವಿಗೆ ಅಳವಡಿಸಿರುವ ಸ್ಟಾರ್ಟರ್‌ಗಳು ನೆಲಕ್ಕೆ ಸಮೀಪ ಇರುವುದರಿಂದಾಗಿ ಶಾಲೆ ಮಕ್ಕಳ ಕೈಗೆ ಎಟುಕುತ್ತವೆ. ಆವರಣದಲ್ಲಿ ಆಟ ಆಡುವಾಗ ಮಕ್ಕಳು ಸ್ಟಾರ್ಟರ್‌ ಮುಟ್ಟಿ ಏನಾದರೂ ಅವಘಢ ಸಂಭವಿಸಿದರೆ ಅದಕ್ಕೆ ಹೊಣೆಗಾರರು ಯಾರು ಎನ್ನುವಂತಾಗಿದೆ. ಈ ಸಮಸ್ಯೆಗೆ ಪರಿಹಾರವನ್ನು ಗ್ರಾಮ ಪಂಚಾಯಿತಿ ಮತ್ತು ಶಾಲಾ ಆಡಳಿತ ಹಾಗೂ ಶಿಕ್ಷಕರು ತಗೆದುಕೊಳ್ಳಬೇಕಾಗಿದೆ.

ಅಲ್ಲದೇ ಶಾಲಾ ಆವರಣದಲ್ಲಿ ಮಕ್ಕಳಿಗೆ ಶೌಚಾಲಯದ ಸಮಸ್ಯೆಯಿದ್ದು, ಇರುವ ಶೌಚಾಲಯಗಳು ಬಿದ್ದು ಹೋಗಿವೆ. ಇದರಿಂದ ಮಕ್ಕಳು ಬಯಲನೇ ಆಶ್ರಯಿಸಬೇಕಿದೆ. ಶಾಲೆ ಮುಂದೆ ರಾಜ್ಯ ಹೆದ್ದಾರಿ ಹಾಯ್ದು ಹೋಗಿದ್ದು, ಶಾಲೆಗೆ ಕಾಂಪೌಂಡ್‌ ಗೋಡೆಯ ಗೇಟು ಅಳವಡಿಸಬೇಕಿದೆ. ಇಲ್ಲದಿದ್ದರೆ ಅಪಘಾತ ಸಂಭವಿಸುವ ಸಾಧ್ಯತೆಗಳಿವೆ. ಆದ್ದರಿಂದ ಕೊಡಲೇ ಬಿಇಒ ಶಾಲೆಗೆ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ.

ಶಾಲೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಪರಿಹಾರಕ್ಕಾಗಿ ಬಿಇಒ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು.•ಪ್ರಶಾಂತ ಪುರದ, ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಅಧ್ಯಕ್ಷ

ಶಾಲೆ ಮೂಲ ಸೌಲಭ್ಯಗಳ ಕುರಿತು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಅಲ್ಲದೇ ಮಕ್ಕಳ ಸುರಕ್ಷತೆ ಬಗ್ಗೆ ಸೂಚನೆಯನ್ನು ನೀಡಲಾಗಿದೆ. ಮೂಲ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಹಲವು ಸೌಲಭ್ಯಗಳ ಸುಧಾರಣೆಗಾಗಿ 1.05 ಲಕ್ಷ ಅನುದಾನ ನೀಡಲಾಗಿದೆ. ಮಾರ್ಚ್‌ ಅಂತ್ಯದಲ್ಲಿ ಅನುದಾನವನ್ನು ಬ್ಯಾಂಕಿನಿಂದ ತೆಗೆದುಕೊಂಡು ಮುಖ್ಯಶಿಕ್ಷಕರು ಸದ್ಭಳಕೆ ಮಾಡದೇ ಇರುವುದರಿಂದಾಗಿ ನೋಟಿಸ್‌ ನೀಡಿ ಮುಖ್ಯಶಿಕ್ಷಕರ ಎರಡು ತಿಂಗಳಿಂದ ಸಂಬಳವನ್ನು ತಡೆ ಹಿಡಿಯಲಾಗಿದೆ.•ಎಸ್‌.ಎನ್‌. ಹಳ್ಳಿಗುಡಿ, ಬಿಇಒ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.