ಇನ್ನೂ ಸಿಕ್ಕಿಲ್ಲ ರುದ್ರಭೂಮಿಗೆ ಜಾಗ


Team Udayavani, Jan 12, 2020, 12:02 PM IST

gadaga-tdy-1

ರೋಣ: ರಾಜ್ಯ ಸರ್ಕಾರ ರುದ್ರಭೂಮಿ ಖರೀದಿಗೆ ನೀಡುವ ಹಣ ಕಡಿಮೆಯಾದ ಕಾರಣ ಭೂಮಾಲೀಕರು ತಮ್ಮ ಫಲವತ್ತಾದ ಭೂಮಿ ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಸಾರ್ವಜನಿಕರು ರುದ್ರಭೂಮಿ ಇಲ್ಲದೇ ರಸ್ತೆ ಬದಿಯಲ್ಲಿಯೇ ಶವ ಸಂಸ್ಕಾರ ಮಾಡಬೇಕಾದ ಪರಿಸ್ಥಿಯಿದೆ.

ಹೌದು. ಈ ಪರಿಸ್ಥಿತಿ ಇರುವುದು ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ. ಜಿಲ್ಲಾಧಿಕಾರಿಗಳು ರುದ್ರಭೂಮಿಗೆ ಜಾಗ ಖರೀದಿಸಲು ಆಯಾ ತಾಲೂಕು ನೋಂದಣಿ ಇಲಾಖೆಯಲ್ಲಿ ಗ್ರಾಮವಾರು ನೊಂದಾವಣೆಯಾಗಿರುವ ದರಕ್ಕೆ ಮೂರು ಪಟ್ಟು ಹೆಚ್ಚು ನೀಡಿ ಖರೀದಿಸುತ್ತಿದ್ದಾರೆ. ಆದರೆ ಖಾಸಗಿ ವ್ಯಕ್ತಿಗಳು ಭೂಮಿ ಖರೀದಿಸುವಾಗ ತೆರಿಗೆ ಉಳಿಸಿಕೊಳ್ಳಲು ಕಡಿಮೆ ದರಕ್ಕೆ ನೊಂದು ಮಾಡಿಕೊಳ್ಳುತ್ತಾರೆ. ಉದಾಹರಣೆಗೆ ಖಾಸಗಿ ವ್ಯಕ್ತಿ1 ಲಕ್ಷ ರೂ.ಗೆ ಒಂದು ಎಕರೆ ಖರೀದಿ ಮಾಡಿದ್ದರೆ, ಸರ್ಕಾರ 3 ಲಕ್ಷ ಹಣವನ್ನು ನೀಡುತ್ತದೆ. ಆದರೆ ಕಪ್ಪು ಮಣ್ಣನ್ನು ಹೊಂದಿದ ಪ್ರದೇಶದಲ್ಲಿ 6 ಲಕ್ಷಕ್ಕೂ ಅಧಿಕ ದರದಲ್ಲಿ ಒಂದು ಎಕರೆ ಭೂಮಿ ಮಾರಾಟವಾಗುತ್ತಿದೆ. ಇದರಿಂದ ಸ್ಮಶಾನಕ್ಕೆ ಭೂಮಿ ಕೊಡಲು ಇಲ್ಲಿನ ರೈತರು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಮಾನವ ಸೂಚಾಂಕ ಹೊಂದಿದ ಗ್ರಾಮವೆಂದು ಪ್ರಶಸ್ತಿ ಪಡೆದ ತಾಲೂಕಿನ ಕುರಹಟ್ಟಿ ಗ್ರಾಮಕ್ಕೆ ಇಲ್ಲಿಯವರೆಗೆ ಒಂದು ರುದ್ರಭೂಮಿಯಿಲ್ಲ. ಇದರಿಂದ ಇಲ್ಲಿನ ಜನರು ಗ್ರಾಮದಲ್ಲಿ ಯಾರಾದರು ಮೃತಪಟ್ಟರೆ ಅವರನ್ನು ಗ್ರಾಮದ ಪಕ್ಕದಲ್ಲಿಯೇ ಹಾಗೂ ರಸ್ತೆ ಮೇಲೆ ಸುಡುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಈ ಗ್ರಾಮಕ್ಕೊಂದು ಗ್ರಾಪಂ ಇದ್ದು, 1000 ಮನೆಗಳು, 5000 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಆದರೆ ಇಷ್ಟೊಂದು ದೊಡ್ಡ ಗ್ರಾಮದಲ್ಲಿ ಹೆಣ ಸುಡಲು ರುದ್ರಭೂಮಿಯಿಲ್ಲ. ಇದರಿಂದ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿದೆ.

ರಸ್ತೆಯಲ್ಲೇ ಶವ ಸಂಸ್ಕಾರ :  ಆರ್ಥಿಕವಾಗಿ ಸಬಲರಾಗಿರುವರು ಮೃತಪಟ್ಟರೆ ಅವರದೆ ಊರ ಪಕ್ಕದಲ್ಲಿ ಇರುವ ಹೊಲದಲ್ಲಿ ಅಂತ್ಯಕ್ರಿಯೆ ಮಾಡುತ್ತಾರೆ. ಅವರ ಭೂಮಿ ಇಲ್ಲವಾದರೆ ಸಂಬಂಧಿಕರ ಹೊಲದಲ್ಲಿ ವಿಧಿವಿಧಾನಗಳು ನಡೆಸುತ್ತಾರೆ. ಆದರೆ ಬಡವರು, ನಿರ್ಗತಿಕರ ಕುಟುಂಬದವರು ಸತ್ತರೆ ಅವರಿಗೆ ಹೂಳಲು ಭೂಮಿಯಿಲ್ಲ, ಸುಡಲು ಜಾಗವಿಲ್ಲ. ಇದರಿಂದ ಗ್ರಾಮದಿಂದ ಮುದೇನಗುಡಿ ರಸ್ತೆಯಲ್ಲಿ ಹೆಣಗಳನ್ನು ಸುಡುತ್ತಾರೆ. ಗ್ರಾಮದಿಂದ ಕೂದಲೆಳೆಯ ಅಂತರದಲ್ಲಿರುವ ಮನೆಗಳಿಗೆ ಹೊಗೆ ಹಾಗೂವಾಸನೆ ಬಂದು ವಾಯುಮಾಲಿನ್ಯ ಆಗುತ್ತಿದೆ. ಇದರ ಪರಿಣಾಮ ಇಲ್ಲಿರುವ ದಲಿತ ಹಾಗೂ ಹಿಂದುಳಿದ ಕುಟುಂಬಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಸ್ವತಂತ್ರ ಬಂದು ಏಳು ದಶಕ ಕಳೆದಿದ್ದೇವೆ. ಆದರೆ ಗ್ರಾಮಕ್ಕೊಂದು ರುದ್ರಭೂಮಿ ಪಡೆಯುವಲ್ಲಿ ನಾವು ಹಾಗೂ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ರಸ್ತೆಯ ಪಕ್ಕದಲ್ಲಿ ಅಂತ್ಯಕ್ರಿಯೆ ವಿಧಾನ ನಡೆಸುವುದರಿಂದ ಗ್ರಾಮ ತುಂಬೆಲ್ಲ ವಾಯುಮಾಲಿನ್ಯ ಆಗುತ್ತಿದೆ. ಆದ್ದರಿಂದ ಕೂಡಲೇ ಗ್ರಾಮಕ್ಕೆ ಸ್ಮಶಾನ ಮಂಜೂರು ಮಾಡಬೇಕು.ರಾಮನಗೌಡ ಪಾಟೀಲ, ಸ್ಥಳೀಯ

 

-ಯಚ್ಚರಗೌಡ ಗೋವಿಂದಗೌಡ್ರ

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.