ಶವ ಸಂಸ್ಕಾರಕ್ಕೆ ಹಳ್ಳದ ದಂಡೆಯೇ ಗತಿ
Team Udayavani, Jan 13, 2020, 12:42 PM IST
ಶಿರಹಟ್ಟಿ: ಈ ಊರಲ್ಲಿ ಶವ ಸಂಸ್ಕಾರ ಮಾಡಲು ಸ್ಮಶಾನ ಭೂಮಿಯೇ ಇಲ್ಲವಾಗಿದ್ದು, ಪರದಾಡುವ ಸ್ಥಿತಿಯಿದೆ. ಹೀಗಾಗಿ ಶವ ಸಂಸ್ಕಾರಕ್ಕೆ ಊರಿನ ಪಕ್ಕದಲ್ಲಿರುವ ಹಳ್ಳದ ದಂಡೆಯೇ ಗತಿಯಾಗಿದೆ. ಹೌದು. ಇದು ಶಿರಹಟ್ಟಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಹರಿಪುರ ಗ್ರಾಮ (ಎರಡನೇ ವಾರ್ಡ್)ದಲ್ಲಿನ ದುಸ್ಥಿತಿ.
ಖರೀದಿ ಪ್ರಕ್ರಿಯೆ ನನೆಗುದಿಗೆ: ಕಳೆದ ಹತ್ತು ವರ್ಷಗಳ ಹಿಂದೆ ಸ್ಮಶಾನ ಭೂಮಿಗಾಗಿ ನಿವೇಶನ ಖರೀದಿಸಲು ಪಪಂ ಮುಂದಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ನಿವೇಶನವನ್ನು ಕೂಡ ಗುರುತಿಸಲಾಗಿತ್ತು. ಆದರೆ ಅಧಿಕಾರಿಗಳ ಬದಲಾವಣೆಯಿಂದಾಗಿ ಖರೀದಿ ಪ್ರಕ್ರಿಯೆ ನನೆಗುದಿಗೆ ಬಿದ್ದಿದ್ದು, ಇಂದಿಗೂ ಸಮಸ್ಯೆ ಕಗ್ಗಂಟಾಗಿಯೇ ಉಳಿದಿದೆ ಎನ್ನುತ್ತಾರೆ ಗ್ರಾಮಸ್ಥರು.
ನಿವೇಶನ ಖರೀದಿಯಾಗಿಲ್ಲ: ಕಳೆದ ನಾಲ್ಕೈದು ತಿಂಗಳ ಹಿಂದೆ ಶವ ಸಂಸ್ಕಾರ ಮಾಡಲು ನಿವೇಶನದ ಮಾಲೀಕರು ಅನುಮತಿ ನೀಡದ ಕಾರಣ ಶವವನ್ನು ತಹಶೀಲ್ದಾರ್ ಕಚೇರಿ ಎದುರು ಇಟ್ಟು ಪ್ರತಿಭಟನೆ ಮಾಡಲಾಗಿತ್ತು. ಇದರಿಂದ ತಹಶೀಲ್ದಾರ್ ಒಂದು ತಿಂಗಳ ಅವಧಿಯಲ್ಲಿ ಖರೀದಿ ಪ್ರಕ್ರಿಯೆ ಮುಗಿಸುವುದಾಗಿ ಭರವಸೆ ನೀಡಿದ್ದರು. ದುರಾದೃಷ್ಟ ಈವರೆಗೂ ನಿವೇಶನ ಖರೀದಿಯಾಗದೇ ಇರುವುದು ಬೇಸರದ ಸಂಗತಿ. ಇಂದಿಗೂ ನಿವೇಶನದಲ್ಲಿ ಶವಗಳನ್ನು ಹೂಳಲು ಅವಕಾಶವಿಲ್ಲದೇ ಹಳ್ಳದ ದಂಡೆಯೇ ಗತಿಯಾಗಿದೆ. ನಿವೇಶನ ಖರೀದಿಯಾಗದೇ ಇರುವುದರಿಂದ ಶವ ಸಂಸ್ಕಾರ ಮಾಡಲು ಅವಕಾಶ ನೀಡುತ್ತಿಲ್ಲ. ಆದ್ದರಿಂದ ಊರಿನ ಪಕ್ಕದಲ್ಲಿರುವ ಹಳ್ಳದ ದಂಡೆಯೇ ನಮಗೆ ಗತಿಯಾಗಿದೆ ಎನ್ನುವುದು ಗ್ರಾಮಸ್ಥರ ಅಳಲು.
ಸ್ಮಶಾನಕ್ಕಾಗಿ ಹಣ ಮಂಜೂರಾಗಿದ್ದು, ನಿವೇಶನದಾರರ ಖಾತೆಗೆ ಹಣ ಜಮಾವಣೆಯಾಗಬೇಕಿದೆ. ಆದಷ್ಟು ಶೀಘ್ರ ಈ ಪ್ರಕ್ರಿಯೆ ಮುಗಿಸಿ ಸಮಸ್ಯೆ ಬಗೆಹರಿಸಲಾಗುವುದು. –ಯಲ್ಲಪ್ಪ ಗೋಣೆಣ್ಣವರ, ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!
Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ