ಶವ ಸಂಸ್ಕಾರಕ್ಕೆ ಕಾಡು-ಮೇಡು ಅಲೆದಾಟ


Team Udayavani, Jan 20, 2020, 3:21 PM IST

gadaga-tdy-1

ಗದಗ: ಇದೊಂದು ಪುಟ್ಟ ತಾಂಡಾಯಾಗಿದ್ದರೂ, ಸ್ಥಿತಿವಂತರೇ ಹೆಚ್ಚು. ಸರಕಾರದ ನೆರವು ಸಾಕಾಗಲಿಲ್ಲವೆಂದರೆ, ಸ್ಥಳೀಯರೇ ಆರ್ಥಿಕವಾಗಿ ನೆರವಾಗುವ ಸಹೃದಯಿಗಳು. ಆದರೆ, ಈ ತಾಂಡೆಯಲ್ಲಿ ಯಾರಾದರೂ ನಿಧನರಾದರೆ, ಕುಟುಂಬಸ್ಥರ ಪಾಡು ಹೇಳತೀರದು. ಈ ಊರಿನಲ್ಲಿ ರುದ್ರಭೂಮಿ ಇಲ್ಲದೇ, ಶವ ಸಂಸ್ಕಾರಕ್ಕಾಗಿ ಕಾಡು-ಮೇಡು ಅಲೆಯುವುದು ಇಲ್ಲಿನ ದುಸ್ಥಿತಿ.

ಇದು, ಜಿಲ್ಲಾ ಕೇಂದ್ರದಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಅಡವಿಸೋಮಾಪುರ ದೊಡ್ಡ ತಾಂಡಾ ಜನರ ವ್ಯಥೆಯಿದು. ಅಡವಿಸೋಮಾಪುರ ಗ್ರಾ.ಪಂ ವ್ಯಾಪ್ತಿಯ ಈ ಗ್ರಾಮದಲ್ಲಿ 2011ರ ಜನ ಗಣತಿ ಪ್ರಕಾರ ಸುಮಾರು 1300 ಜನ ಸಂಖ್ಯೆಯಿದೆ. ಈ ಪೈಕಿ ಲಮಾಣಿ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿ ಬಹುತೇಕರು ಗೋವಾ, ಪುಣೆ ಹಾಗೂ ಬೆಂಗಳೂರಿನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದು, ಹೆತ್ತವರು, ಮಕ್ಕಳು ಗ್ರಾಮದಲ್ಲೇ ವಾಸಿಸುತ್ತಿದ್ದಾರೆ. ತಿಂಗಳಿಗೊಮ್ಮೆ ಅಥವಾ ಹಬ್ಬ, ಹರಿದಿನಗಳ ಸಂದರ್ಭದಲ್ಲಿ ಗ್ರಾಮಕ್ಕೆ ಮರಳುತ್ತಾರೆ. ಗ್ರಾಮಕ್ಕೆ ಸ್ಮಶಾನ ಕಲ್ಪಿಸುವಂತೆ ಆಗೊಮ್ಮೆ, ಈಗೊಮ್ಮೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ, ಬಳಿಕ ಅದನ್ನು ಫಾಲೋಅಪ್‌ ಮಾಡಲು ಸಾಧ್ಯವಾಗುತ್ತಿಲ್ಲ. ಮನವಿ ಸ್ವೀಕರಿಸಿದವರೂ, ಬಳಿಕ ಇತ್ತ ಗಮನ ಹರಿಸುವುದಿಲ್ಲ. ಹೀಗಾಗಿ ವರ್ಷಗಳಿಂದ ರುದ್ರ ಭೂಮಿಯ ಬೇಡಿಕೆ ಈಡೇರುತ್ತಿಲ್ಲ ಎಂಬುದು ಗ್ರಾಮಸ್ಥರ ಅಸಹಾಯಕ ನುಡಿಗಳು.

ಸರಕಾರಿ ಜಮೀನಿಗೆ ಅಡ್ಡಿ: ಒಂದೆರಡು ವರ್ಷಗಳ ಹಿಂದೆ ಗ್ರಾಮದಲ್ಲಿ ಸರಕಾರಕ್ಕೆ ಸಂಬಂಧಿಸಿದ 20 ಗುಂಟೆಯಲ್ಲಿ ಜಾಗೆಯಲ್ಲಿ ಸ್ಮಶಾನ ಅಭಿವೃದ್ಧಿಪಡಿಸಲು ಗ್ರಾಮದ ಹಿರಿಯರು ಬೇಡಿಕೆ ಇಟ್ಟಿದ್ದರು. ಅದಕ್ಕೆ ಪೂರಕವಾಗಿ ಸ್ಪಂದಿಸಿದ್ದ ಗ್ರಾ.ಪಂ. ಆಡಳಿತ, ಎನ್‌ಆರ್‌ ಇಜಿ ಯೋಜನೆಯಡಿ ಸುಮಾರು 10 ಲಕ್ಷ ರೂ. ಮೊತ್ತದಲ್ಲಿ ಕ್ರಿಯಾ ಯೋಜನೆಯನ್ನೂ ಸಿದ್ಧಗೊಳಿಸಿತ್ತು. ಆದರೆ, ರುದ್ರಭೂಮಿಗಾಗಿ ಗುರುತಿಸಿದ ಜಾಗೆಯ ಸುತ್ತಮುತ್ತಲಿನ ಜಮೀನು ಮಾಲೀಕರು ತಕರಾರರು ಮಾಡಿದ್ದರಿಂದ ಆ ಪ್ರಕ್ರಿಯೆ ಅಲ್ಲಿಗೆ ಸ್ಥಗಿತಗೊಂಡಿದೆ ಎನ್ನುತ್ತಿವೆ ಗ್ರಾ.ಪಂ ಮೂಲಗಳು.

ತಪ್ಪದ ಕಾಡು-ಮೇಡು ಅಲೆದಾಟ: ಈ ತಾಂಡಾ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಇಲಾಖೆ ಖಾಲಿ ಜಾಗೆಯಲ್ಲಿ ಈ ವರೆಗೆ ಶವ ಸಂಸ್ಕಾರ ಮಾಡಲಾಗುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಅರಣ್ಯ ಇಲಾಖೆ ಹಸರೀಕರಣ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲೆಡೆ ಸಸಿಗಳನ್ನು ನೆಟ್ಟು, ಪೋಷಿಸುತ್ತಿದ್ದಾರೆ. ಬೇಸಿಗೆಯಲ್ಲಿ ಶವ ದಹನದಿಂದ ಅರಣ್ಯಕ್ಕೆ ಬೆಂಕಿ ಹೊತ್ತಿಕೊಳ್ಳುವ ಸಂಭವವಿದ್ದರಿಂದ ಕೆಲವೊಮ್ಮೆ ಅರಣ್ಯ ಅಧಿಕಾರಿಗಳ ಕಿರಿಕಿರಿ ಎದುರಿಸುವಂತಾಗುತ್ತದೆ. ಸದ್ಯಕ್ಕೆ ಗುಡ್ಡದ ಮೂಲೆಯೊಂದನ್ನು ಶವಗಳ ದಹನಕ್ಕೆ ಸ್ಥಳ ಗೊತ್ತುಪಡಿಸಲಾಗಿದೆ. ಆದರೆ, ಸರಕಾರದಿಂದ ಜಮೀನು ಒದಗಿಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬುದು ಗ್ರಾಮಸ್ಥರ ಆಗ್ರಹ.

ಅಡವಿಸೋಮಾಪುರ ದೊಡ್ಡ ತಾಂಡೆಯನ್ನು ಅರಣ್ಯ ಪ್ರದೇಶ ಸುತ್ತುವರಿದಿದ್ದರಿಂದ ಶವ ಸಂಸ್ಕಾರ ಮಾಡುವುದೇ ದೊಡ್ಡ ಸವಾಲಾಗಿ ಪ ರಿಣಮಿಸುತ್ತದೆ. ತಾಂಡೆಯಲ್ಲಿ ಯಾರಾದರೂ, ಸತ್ತರೆ ಖಾಲಿ ಜಾಗೆಯನ್ನು ಹುಡುಕುತ್ತಾ ಶವಹೊತ್ತು ಸಾಗಬೇಕು. ಇಲ್ಲವೇ ಶವ ದಹನದ ವೇಳೆ ಅರಣ್ಯಕ್ಕೆ ಬೆಂಕಿ ಹೊತ್ತಿಕೊಳ್ಳುವ ಆತಂಕ ಕಾಡುತ್ತದೆ. ಈ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಸ್ಮಶಾನ ಭೂಮಿ ಒದಗಿಸಿಕೊಡಬೇಕು. -ಕಷ್ಣಪ್ಪ ಬೀರಪ್ಪ ರಾಥೋಡ, ಗ್ರಾಮಸ್ಥ

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.