ನಾಗರಾಳ ಜನ ಸತ್ತಾಗಲೂ ತಪ್ಪದ ಗೋಳು


Team Udayavani, Jan 25, 2020, 12:32 PM IST

gadaga-tdy-1

ನರೇಗಲ್ಲ: ರೋಣ ತಾಲೂಕಿನ ಕೊನೆಯ ಗ್ರಾಮ ನಾಗರಾಳಕ್ಕೆ ಅನೇಕ ವರ್ಷಗಳಿಂದ ಸಾರ್ವಜನಿಕ ಸ್ಮಶಾನವಿಲ್ಲದೇ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಗ್ರಾಮದಲ್ಲಿ ಯಾರದರೂ ಸತ್ತರೆ ಅವರನ್ನು ಊರ ಮುಂದಿನ ದೇಶಪಾಂಡೆ ಅವರ ಹೊಲದಲ್ಲಿ ಮಣ್ಣು ಮಾಡುವ ಪ್ರಸಂಗ ಎದುರಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಸ್ಮಶಾನಕ್ಕೆ ಭೂಮಿ ಕೊಡುವುದಕ್ಕೆ ಯಾರು ಮುಂದೆ ಬರುವುದಿಲ್ಲ. ಆದರೆ, ಇಲ್ಲಿ ಭೂಮಿ ಕೊಟ್ಟರೂ ಖರೀದಿ ಮಾಡವುದಕ್ಕೆ ಅಧಿಕಾರಗಳು ಹಿಂದೇಟ್ಟು ಹಾಕುತ್ತಿದ್ದಾರೆ.

ಈ ಗ್ರಾಮವು ಕುರುಡಗಿ ಗ್ರಾಪಂ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಜನ ಸಂಖ್ಯೆಯಿದೆ. ಇಲ್ಲಿನ ಮುಸ್ಲಿಂ ಸಮಾಜದವರ ಕೇವಲ ನಾಲ್ಕು ಮನೆಗಳಿದರೂ ತಾವು ಒಗ್ಗಟ್ಟಾಗಿ ತಮ್ಮದೊಂದು ಸ್ವಂತ ಜಮೀನಿನಲ್ಲಿ ಸ್ಮಶಾನವನ್ನು (ಖಬರಸ್ತಾನ) ನಿರ್ಮಿಸಿಕೊಂಡಿದ್ದಾರೆ. ಆದರೆ, ಅವರಿಗೂ ಕೂಡ ಸರ್ಕಾರದಿಂದ ಯಾವುದೇ ಜಮೀನು ನೀಡಿಲ್ಲ.

ಆದರೆ, ಇಲ್ಲಿ ಕುರುಬ, ಅಂಬಿಗ, ಲಿಂಗಾಯತ, ಬ್ರಾಹ್ಮಣ, ಮಾದಿಗ, ವಾಲ್ಮೀಕಿ, ಕುಂಬಾರ, ಬಡಿಗೇರ ಸೇರಿದಂತೆ ಇತರೆ ಜನಾಂಗದವರಿಗೆ ಇನ್ನೂ ಕೂಡ ಸ್ಮಶಾನವಿಲ್ಲ. ಕಳೆದ 80 ವರ್ಷಗಳಿಂದಲ್ಲೂ ಗ್ರಾಮದಿಂದ ಕಿ.ಮೀ ದೂರವಿರುವ ದೇಶಪಾಂಡೆ ಅವರ ಹೊಲದಲ್ಲಿ ಅಥವಾ ಸಣ್ಣ ಹಳ್ಳದಲ್ಲಿ ಮಣ್ಣು ಅಥವಾ ಸುಡುವ ಕಾರ್ಯವನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಗ್ರಾಮದಲ್ಲಿ ಅನೇಕ ವರ್ಷಗಳಿಂದ ಮುಕ್ತಿ ಧಾಮ ಇಲ್ಲದಿರುವುದರಿಂದ ಮಳೆಗಾಲದಲ್ಲಿ ಸತ್ತ ಶವಗಳನ್ನು ಮೂರ್‍ನಾಲ್ಕು ದಿನಗಳ ವರೆಗೆ ಮನೆಯಲ್ಲಿ ಇಟ್ಟು ಮಳೆ ನಿಂತ ಮೇಲೆ ಅಂತ್ಯಸಂಸ್ಕಾರ ಮಾಡುವ ಸ್ಥಿತಿಯಿದೆ. ಯಾರದರೂ ಅವಘಡ, ಅಪಘಾತದಲ್ಲಿ ಮೃತಪಟ್ಟರೆ ಗ್ರಾಮದಿಂದ 1.5 ಕಿ.ಮೀ ದೂರದಲ್ಲಿರುವ ಹಳ್ಳದಲ್ಲಿ ಸುಡುವ ಕೆಲಸವನ್ನು ಮಾಡುತ್ತಿದ್ದಾರೆ. ಅಲ್ಲದೇ ಮಳೆ ಬಂದಾಗ ಹಳ್ಳವನ್ನು ದಾಟಿ ಹೋಗಿ ಮಣ್ಣು ಅಥವಾ ಸುಡುವ ಕಾರ್ಯಕ್ಕೆ ಯಾರು ಮುಂದೆ ಬರುವುದಿಲ್ಲ.

ಭೂಮಿ ಖರೀದಿಸದ ತಾಲೂಕು ಆಡಳಿತ: ನಾಗರಾಳ ಗ್ರಾಮದಲ್ಲಿ ಸ್ಮಶಾನ ನಿರ್ಮಿಸಿ ಎಲ್ಲ ಜನಾಂಗದವರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಗ್ರಾಮದ ದತ್ತಾತ್ರೇಯ ದೇಶಪಾಂಡೆ ಎಂಬುವವರು ಕಳೆದ ಒಂದೂವರೆ ವರ್ಷದ ಹಿಂದೆ ತಾಲೂಕಾ ಕಚೇರಿಗೆ ಹೋಗಿ ಒಪ್ಪಿಗೆ ಪತ್ರ ಸಲ್ಲಿಸಿದ್ದಾರೆ. ನಾಗರಾಳದಿಂದ ನೀರಲಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯದಲ್ಲಿರುವ 1 ಎಕರೆ 39 ಗುಂಟೆ ಜಮೀನನ್ನು ರುದ್ರಭೂಮಿಗೆ ನೀಡುತ್ತೇವೆ ಎಂದು ಅದಕ್ಕೆ ಸಂಬಂಧಿಸಿದ ಎಲ್ಲ ಕಾಗದ ಪತ್ರಗಳನ್ನು ನೀಡಿದ್ದರು. ಆದರೆ, ತಾಲೂಕು ಕಚೇರಿಯಲ್ಲಿರುವ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಲ್ಲಿವರೆಗೂ ಈ ಭೂಮಿ ಮಾತ್ರ ಸರ್ಕಾರಕ್ಕೆ ಖರೀದಿ ಮಾಡಿಕೊಳ್ಳುವ ತಾಲೂಕಾ ಆಡಳಿತ ಸಂಪೂರ್ಣ ವಿಫಲವಾಗಿದೆ. ಈ ಬಗ್ಗೆ ಯಾವುದೆ ಡ ಮ್ಯುಟೇಶನ ಇರುವುದಿಲ್ಲ ಹಾಗೂ ಸರದ ಜಮೀನು ಇನಾಂ ಜಮೀನಾಗಿದ್ದು ಹಳೇ ಶರ್ತ ಆದ ಬಗ್ಗೆ ಸರಿಯಾದ ಮಾಹಿತಿ ಇರುವುದಿಲ್ಲ ಅಂತಾ ಪತ್ರ ರವಾನಿಸಿದ್ದಾರೆ.

ರೋಣ ತಾಲೂಕಿನ ನಾಗರಾಳ ಗ್ರಾಮದಲ್ಲಿ ಸ್ಮಶಾನ ಇಲ್ಲದಿರುವುದು ನಮ್ಮ ಗಮನಕ್ಕೆ ಬಂದಿದೆ. ಅಲ್ಲದೇ ಸದ್ಯ ಈ ಗ್ರಾಮದ ದತ್ತಾತ್ರೇಯ ದೇಶಪಾಂಡೆ ಎಂಬುವವರು 1 ಎಕರೆ 39 ಗುಂಟೆ ಜಮೀನನ್ನು ರುದ್ರಭೂಮಿಗೆ ಮಾರಾಟ ಮಾಡಲು ಒಪ್ಪಿಗೆ ನೀಡಿದ್ದಾರೆ. ಆದರೆ, ಕಾಗದಲ್ಲಿ ಸ್ವಲ್ಪ ಸಮಸ್ಯೆ ಇರುವುದರಿಂದ ಈ ಪ್ರಕರಣವನ್ನು ಕೂಡಲೇ ಪರಿಶೀಲನೆ ಕೈಗೊಂಡು ಈ ಭೂಮಿಯನ್ನು ಖರೀದಿ ಮಾಡಿ ಸಾರ್ವಜನಿಕರ ಅನುಕೂಲಕ್ಕೆ ನೀಡಲಾಗುವದು. – ಜಿ.ಬಿ. ಜಕ್ಕನಗೌಡ್ರ, ರೋಣ ತಾಲೂಕು ತಹಶೀಲ್ದಾರ್‌

 

-ಸಿಕದಂರ ಎಂ. ಆರಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.