ಕೇಂದ್ರ ಗ್ರಂಥಾಲಯಕ್ಕೆ ಸೌಲಭ್ಯ ಕೊರತೆ


Team Udayavani, Oct 26, 2019, 1:38 PM IST

gadaga-tdy-2

ಗದಗ: ಐಎಎಸ್‌, ಕೆಎಎಎಸ್‌ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳು ಗ್ರಂಥಾಲಯಕ್ಕೆ ಹೆಚ್ಚಿನ ಸಮಯ ಮೀಸಲಿಡುತ್ತಾರೆ. ಹೀಗಾಗಿ ಸಾವಿರಾರು ಗ್ರಂಥಗಳಿಂದ ತುಂಬಿರುವ ನಗರ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸುತ್ತಾರೆ. ಆದರೆ, ಇಲ್ಲಿ ಕುಡಿಯುವ ನೀರು, ಶೌಚಾಲಯ ಇಲ್ಲದಿರುವುದೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ.

ನಗರದ ಹೃದಯ ಭಾಗದಲ್ಲಿರುವ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಹೊಂದಿಕೊಂಡು ನಗರ ಕೇಂದ್ರ ಗ್ರಂಥಾಲಯದ ನೆಲಮಹಡಿಯಲ್ಲಿ ಸುದ್ದಿ ಪತ್ರಿಕೆಗಳು, ಮೊದಲ ಮಹಡಿಯಲ್ಲಿ ಗ್ರಂಥಗಳನ್ನು ಜೋಡಿಸಲಾಗಿದೆ. ಪ್ರತಿ ಮಹಡಿಯಲ್ಲಿ 6 ಕುರ್ಚಿಗಳುಳ್ಳ 15 ಮೇಜು, ಉತ್ತಮವಾದ ಗಾಳಿ-ಬೆಳಕಿನ ವ್ಯವಸ್ಥೆ ಹೊಂದಿದೆ. ಗ್ರಂಥಾಲಯ ಸಮೀಪದಲ್ಲೇ ರೆಡ್ಡಿ ಕಾಲೇಜು, ಪಿಪಿಜಿ ಕಾಲೇಜು, ವಿಡಿಎಸ್‌ಟಿಸಿ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜು, ಜೆಟಿ ಕಾಲೇಜು ಸೇರಿದಂತೆ ಹತ್ತಾರು ಶಿಕ್ಷಣ ಸಂಸ್ಥೆಗಳಿಗೆ ಕಾಲ್ನನಡಿಗೆಯಷ್ಟು ಸನಿಹದಲ್ಲಿದೆ. ಜ್ಞಾನಾರ್ಜನೆಗಾಗಿ ಪ್ರತಿನಿತ್ಯ ಸಾರ್ವಜನಿಕರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಆಗಮಿಸುತ್ತಾರೆ. ಕೆಲವೊಮ್ಮೆ ಅವರಿಗೆ ಮೂಲ ಸೌಲಭ್ಯಗಳ ಕೊರತೆಯೇ ಸಂಕೋಲೆಯಾಗಿ ಕಾಡುತ್ತವೆ.

ಗ್ರಂಥಾಲಯಕ್ಕೆ ಆಗಮಿಸುವವರಲ್ಲಿ ಕೆಲವರು ಐದತ್ತು ನಿಮಿಷಗಳಲ್ಲಿ ಆಸಕ್ತಿದಾಯ ದಿನ ಪತ್ರಿಕೆಗಳನ್ನು ಕಣ್ಣಾಡಿಸಿ ಮರಳಿದರೆ, ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಉನ್ನತ ಶಿಕ್ಷಣ ವಿದ್ಯಾರ್ಥಿಗಳು ಬಹುತೇಕ ಸಮಯವನ್ನು ಗ್ರಂಥಾಲಯದಲ್ಲೇ ಕಳೆಯುತ್ತಾರೆ. ಈ ವೇಳೆ ಅವರಿಗೆ ಶೌಚ, ಜಲಬಾಧೆ ಕಾಡಿದರೆ ಅವರ ಪಾಡು ಹೇಳತೀರದು. ವಾಚನಾಲಯದಲ್ಲಿ ನೀರೇ ಇಲ್ಲ: 2012ರಲ್ಲಿ ರಾಜ್ಯ ಸರಕಾರದಿಂದ ಹೊಸದಾಗಿ ನಗರ ಕೇಂದ್ರ ಗ್ರಂಥಾಲಯ ನಿರ್ಮಿಸಲಾಗಿದೆ.

ಆದರೆ, ಓದುಗರ ಅನುಕೂಲಕ್ಕಾಗಿ ಶೌಚಾಲಯಗಳನ್ನೇ ನಿರ್ಮಿಸಿಲ್ಲ. ಇದೇ ಕಟ್ಟಡದಲ್ಲಿರುವ ಜಿಲ್ಲಾ ಗ್ರಂಥಾಲಯ ಕಚೇರಿಯಲ್ಲಿ ಅಧಿಕಾರಿ, ಸಿಬ್ಬಂದಿಗಾಗಿ ಒಂದು ಶೌಚಾಲಯವಿದ್ದರೂ ಅದಕ್ಕೆ ನೀರಿನ ಸಂಪರ್ಕವಿಲ್ಲದೇ ಬಾಗಿಲು ಮುಚ್ಚಿದೆ. ಹೀಗಾಗಿ ಸಿಬ್ಬಂದಿಗಳೂ ಬಯಲನ್ನೇ ಆಶ್ರಯಿಸುವಂತಾಗಿದೆ.

ಈ ಕಟ್ಟಡಕ್ಕೆ ನೀರಿನ ಸೌಕರ್ಯಕ್ಕಾಗಿ ಬೃಹತ್‌ ಟ್ಯಾಂಕ್‌ ನಿರ್ಮಿಸಿದ್ದರೂ ನಳದ ನೀರಿನ ಸಂಪರ್ಕವಿಲ್ಲದೇ ಸದಾ ಬರಿದಾಗಿರುತ್ತದೆ.  ಈ ಹಿಂದೆ ಕೊಳವೆ ಬಾವಿ ಕೊರೆದಾಗ ನೀರು ಬಂದಿಲ್ಲ. ನಳದ ನೀರಿನ ಸಂಪರ್ಕ ಕಲ್ಪಿಸುವಂತೆ ವರ್ಷಗಳಿಂದ ಮನವಿ ಮಾಡಿದರೂ ನಗರಸಭೆ ಸ್ಪಂದಿಸದಿರುವುದು ಸಮಸ್ಯೆ ಗಂಭೀರವಾಗಿದೆ. ಕುಡಿಯಲು ಶುದ್ಧ ನೀರಿನ ಕ್ಯಾನ್‌ ವ್ಯವಸ್ಥೆ ಮಾಡಿದರೂ ಬಳಕೆಗೆ ನೀರಿನ ಸಂಪರ್ಕದ ಜೊತೆಗೆ ಓದುಗರಿಗಾಗಿ ಒಂದೆರಡು ಶೌಚಾಲಯಗಳನ್ನೂ ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿತ್ತಿದ್ದಾರೆ.

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.