ಭಾಗ್ಯ ನಗರಕ್ಕಿಲ್ಲ ಮೂಲ ಸೌಕರ್ಯ-ಸ್ವಚ್ಛತೆ ಭಾಗ್ಯ


Team Udayavani, Feb 26, 2020, 3:21 PM IST

gadaga-tdy-3

ನರೇಗಲ್ಲ: ಸರ್ಕಾರ ಪಟ್ಟಣಗಳ ಅಭಿವೃದ್ಧಿಗಾಗಿ ಕೋಟ್ಯಂತರ ಹಣ ಖರ್ಚು ಮಾಡುತ್ತಿದೆ. ಆದರೆ ಪಟ್ಟಣದ ಕೆಲ ಭಾಗಗಳು ಇನ್ನೂ ಅಭಿವೃದ್ಧಿ ಕಂಡಿಲ್ಲ. ಇದಕ್ಕೆ ಉದಾಹರಣೆ ಪಟ್ಟಣದ ವಾರ್ಡ್‌ ನಂ. 7ರಲ್ಲಿನ ಭಾಗ್ಯ ನಗರ. ಇಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಚರಂಡಿ, ಸಾಮೂಹಿಕ ಶೌಚಾಲಯ, ಬೀದಿ ದೀಪ, ಸಿಸಿ ರಸ್ತೆ, ಉದ್ಯಾನವನ ಸೇರಿದಂತೆ ಹತ್ತು ಹಲವು ಸೌಲಭ್ಯಗಳಿಂದ ವಂಚಿತವಾಗಿದೆ.

ನರೇಗಲ್ಲ ಪಟ್ಟಣಕ್ಕೆ ಕಳೆದ ಮೂರು ವರ್ಷಗಳಲ್ಲಿ ಸರ್ಕಾರದಿಂದ 6,78,55,428 ರೂ. ಅನುದಾನ ಬಂದಿದೆ. ಆದರೂ ಭಾಗ್ಯ ನಗರ ಮಾತ್ರ ಅಭಿವೃದ್ಧಿ ಕಂಡಿಲ್ಲ. ಕಸ ವಿಲೇವಾರಿ ಇರಲಿ ಇಲ್ಲಿನ ಚರಂಡಿಗಳ ನಿರ್ವಹಣೆ ಕೂಡ ಸರಿಯಾಗಿ ಆಗುತ್ತಿಲ್ಲ. ಗಬ್ಬು ವಾಸನೆ ಮಧ್ಯದಲ್ಲಿಯೇ ಇಲ್ಲಿನ ನಿವಾಸಿಗಳು ವಾಸಿಸುತ್ತಿದ್ದು, ಜನಪ್ರತಿನಿ ಧಿಗಳು, ಪ.ಪಂ ಅಧಿಕಾರಿಗಳು ಮಾತ್ರ ಸಮಸ್ಯೆ ಪರಿಹಾರ ದೊರಕಿಸಿಕೊಡುತ್ತಿಲ್ಲ. ಭಾಗ್ಯನಗರವು 2011ರಲ್ಲಿ ಪ.ಪಂ ವ್ಯಾಪ್ತಿಗೆ ಒಳ್ಳಪಟ್ಟಿದೆ. ಪ್ರತಿವರ್ಷ ತಪ್ಪದೆ ತೆರಿಗೆ ವಸೂಲಿ ಮಾಡುವ ಪ.ಪಂ ಅಧಿಕಾರಿಗಳು ನಿವಾಸಿಗಳಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ಉದಾಸೀನ ಧೋರಣೆ ತೋರುತ್ತಿದ್ದಾರೆ ಎನ್ನುತ್ತಿದ್ದಾರೆ ಇಲ್ಲಿನ ನಿವಾಸಿಗಳು.

ನನಸಾಗಿಲ್ಲ ಸ್ವಚ್ಛ ಭಾರತ ಕನಸು: ಭಾಗ್ಯ ನಗರದಲ್ಲಿ ಎಲ್ಲಿ ನೋಡಿದರೂ ಕಸದ ರಾಶಿ ಕಣ್ಣು ಮುಂದೆ ಕಾಣುತ್ತಿದೆ. ಚರಂಡಿಗಳಲ್ಲಿ ಪ್ಲಾಸ್ಟಿಕ್‌ ಬಾಟಲಿ, ಹಾಳೆ, ತ್ಯಾಜ್ಯ ನೀರು ತುಂಬಿಕೊಂಡು ಗುಬ್ಬು ನಾರುತ್ತಿದೆ. ಅಲ್ಲದೇ ನಗರದಲ್ಲಿ ಪ್ರತಿಯೊಂದು ಮನೆಯ ಮುಂದೆ ಕಸದ ರಾಶಿ ಗೋಚರಿಸುತ್ತದೆ. ಇಲ್ಲಿ ಸಾವಿರಕ್ಕೂ ಅಧಿಕ ಜನರು ವಾಸಿಸುತ್ತಿರುವ ನಗರದಲ್ಲಿ ಪ.ಪಂ ವತಿಯಿಂದ ಒಂದೂ ಕಂಟೇನರ್‌ ಅಳವಡಿಸಿಲ್ಲ. ಕಸ ವಿಲೇವಾರಿ ಜವಾಬ್ದಾರಿ ಪ.ಪಂ ಹೆಗಲಿಗೆ ಇದ್ದರೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನೆ ಕುಳಿತಿದ್ದಾರೆ. ಕಸ ಹೆಚ್ಚಾಗುತ್ತಿದ್ದಂತೆ ಸೊಳ್ಳೆ, ಹಂದಿಗಳ ಕಾಟವೊ ದಿನೇ ದಿನೇ ಹೆಚ್ಚಾಗುತ್ತಿದೆ.

ಭಾಗ್ಯ ನಗರದಲ್ಲಿ ಕಳೆದ ಐದಾರು ವರ್ಷಗಳಿಂದ ಆರಂಭವಾಗಿರುವ ಅಂಗನವಾಡಿ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರು, ಶಾಲೆಯ ಸುತ್ತ ಸ್ವಚ್ಛತೆ ಸೇರಿದಂತೆ ನಿತ್ಯ ಅಂಗನವಾಡಿಗೆ ಬರುವ ವಿದ್ಯಾರ್ಥಿಗಳು ಕೊಳಚೆ ನೀರಿನ್ನು ತುಳಿದುಕೊಂಡು ಕೇಂದ್ರಕ್ಕೆ ಬರಬೇಕಾಗಿದೆ. ಅಂಗನವಾಡಿ ಮುಂದೆ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಮಕ್ಕಳು ಸಾಂಕ್ರಾಮಿಕ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇಲ್ಲಿ ಮಕ್ಕಳಿಗೆ ಶೌಚಾಲಯ ಇದ್ದರೂ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ.

ಸವಳು ನೀರೇ ಗತಿ: ಪಟ್ಟಣದ ವಿವಿಧ ಕಡೆಗಳಲ್ಲಿ ಈಗಾಗಲೇ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಆದರೆ, ಅವು ಬೇಸಿಗೆ ಪ್ರಾರಂಭ ಹಂತದಲ್ಲೇ ಸ್ಥಗಿತೊಂಡಿವೆ. ಕಳೆದ 19 ಷರ್ವಗಳಿಂದ ಈ ನಗರದ ಜನತೆ ಸವಳು ನೀರು ಕುಡಿದು ಜೀವನ ಸಾಗಿಸುತ್ತಿದ್ದಾರೆ. ಭಾಗ್ಯ ನಗರದಲ್ಲಿ ಕನಿಷ್ಠ 15 ನೂರಕ್ಕೂ ಅಧಿಕ ಮಹಿಳೆಯರು ಮತ್ತು ಪುರುಷರು ನಿತ್ಯ ಬಯಲು ಶೌಚಾಲಯವನ್ನು ಅವಲಂಬಿಸಿದ್ದಾರೆ. ಇಲ್ಲಿ ಒಂದು ಸಾಮೂಹಿಕ ಶೌಚಾಲಯವಿಲ್ಲದಾಗಿದೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.