ಜಕ್ಕಲಿ ಗ್ರಂಥಾಲಯದಲ್ಲಿ ಇಕ್ಕಟ್ಟು


Team Udayavani, Nov 2, 2019, 11:53 AM IST

gadaga-tdy-2

ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮದಲ್ಲಿ 2003ರಲ್ಲಿ ಸ್ಥಳೀಯ ಹಾಲು ಉತ್ಪದಕರ ಸಂಘದ ಕಟ್ಟಡದಲ್ಲಿ ಗ್ರಂಥಾಲಯ ಆರಂಭಿಸಲಾಗಿದೆ. ಓದುಗರ ಸಂಖ್ಯೆ ಅಧಿಕವಾಗಿದ್ದರೂ ಗ್ರಂಥಾಲಯ ಮಾತ್ರ ಉನ್ನತೀಕರಣಗೊಂಡಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗೆ ತಕ್ಕಂತೆ ಪುಸ್ತಕಗಳ ಬೇಡಿಕೆಯೂ ಹೆಚ್ಚಿದೆ.

ಗ್ರಾಮದ ಸಾರ್ವಜನಿಕ ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿದ್ದು, 45-60 ಆಸನ ಸಾಮರ್ಥ್ಯ ಹೊಂದಿದೆ. ಪ್ರಸ್ತುತ ಗ್ರಂಥಾಲಯಕ್ಕೆ 500ರಿಂದ 700 ಓದುಗರು ಆಗಮಿಸುತ್ತಿದ್ದು, ಇರುವ ಕಟ್ಟಡ ಯಾವುದಕ್ಕೂ ಸಾಲುತ್ತಿಲ್ಲ. ಕೆಲವರು ಆಸನದಲ್ಲಿ ಕುಳಿತು ಓದುತ್ತಿದ್ದರೆ, ಹಲವರು ನಿಂತುಕೊಂಡೇ ಓದುವ ಸ್ಥಿತಿಯಿದೆ. ಮಹಡಿಯಲ್ಲಿರುವ ಗ್ರಂಥಾಲಯದ ಮೆಟ್ಟಿಲು ಹತ್ತಲು ವೃದ್ಧರು, ಅಂಗವಿಕಲರಿಗೆ ಸಮಸ್ಯೆಯಾಗುತ್ತಿದೆ. ಗ್ರಂಥಾಲಯದಲ್ಲಿ ಮೂಲ ಸೌಲಭ್ಯಗಳ ಕೊರತೆಯಿದೆ.

ಗ್ರಾಮದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. 1 ಪೂರ್ವ ಪ್ರಾಥಮಿಕ ಶಾಲೆ, 5 ಅಂಗನವಾಡಿ ಕೇಂದ್ರಗಳು, ಗ್ರಾ.ಪಂ, ಆಯುರ್ವೇದ ಆಸ್ಪತ್ರೆ, 3 ಪ್ರಾಥಮಿಕ ಶಾಲೆ, 1 ಪ್ರೌಢಶಾಲೆ ಸೇರಿದಂತೆ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಲಿವೆ. 2003ರಲ್ಲಿ ಪ್ರಾರಂಭವಾದ ಈ ಗ್ರಂಥಾಲಯದಲ್ಲಿ ಮೊದಲಿಗೆ ಸುಮಾರು 700 ಪುಸ್ತಕಗಳಿದ್ದವು. ನಂತರದಲ್ಲಿ ಇಲಾಖೆಯಿಂದ ಆಗೊಮ್ಮೆ ಈಗೊಮ್ಮೆ ಎನ್ನುವಂತೆ ಪುಸ್ತಕಗಳು ಸೇರಿ ಇಂದು ಸುಮಾರು ಮೂರು ಸಾವಿರ ಪುಸ್ತಕಗಳಿವೆ. ಸದ್ಯ 162 ಜನ ಸದಸ್ಯತ್ವ ಪಡೆದುಕೊಂಡಿದ್ದಾರೆ. ಇಲ್ಲಿ ರಾಜ್ಯಮಟ್ಟದ ಎರಡು ದಿನಪತ್ರಿಕೆ, 1 ವಾರ ಪತ್ರಿಕೆ ಮಾತ್ರ ಬರುತ್ತಿದ್ದು, ಇದಕ್ಕೆ ಸರ್ಕಾರದಿಂದ ಕೇವಲ ತಿಂಗಳಿಗೆ 400 ರೂ. ಮಾತ್ರ ಅನುದಾನ ನೀಡುತ್ತಿದ್ದು, ಉಳಿದಂತೆ ಯಾವುದೇ ವಾರಪತ್ರಿಕೆ, ಮಾಸಿಕ ಪತ್ರಿಕೆಗಳು ಲಭ್ಯವಿಲ್ಲ. ಸದ್ಯ ಗ್ರಂಥಾಲಯಕ್ಕೆ ಸಿಬ್ಬಂದಿ ಕೊರತೆ ಕೂಡ ಇದೆ. ಓದುಗರಿಗೆಂದು ನಿಗದಿ ಮಾಡಿರುವ ಸ್ಥಳವು ಇಕ್ಕಟ್ಟಾಗಿರುವುದರಿಂದ ತೀವ್ರ ತೊಂದರೆಯಾಗುತ್ತಿದೆ.

ಸರ್ಕಾರ ಗ್ರಾಮೀಣ ಗ್ರಂಥಾಲಯಕ್ಕೆ ಹೆಚ್ಚಿನ ಅನುದಾನ ನೀಡುವ ಮೂಲಕ ಯುವಕರನ್ನು ಪ್ರೇರೇಪಿಸಬೇಕಾಗಿದೆ. ಇಂದಿನ ಅನೇಕ ಯುವಕರು ಮೊಬೈಲ್‌ ಬಳಕೆಯಿಂದ ಪುಸ್ತಕ ಓದುವ ಹವ್ಯಾಸ ಕಡಿಮೆ ಮಾಡಿದ್ದಾರೆ. ಅದಕ್ಕಾಗಿ ಸರ್ಕಾರಗಳು ಗ್ರಂಥಾಲಯಗಳನ್ನು ಹೈಟೆಕ್‌ ಗ್ರಂಥಾಲಯಗಳನ್ನು ನಿರ್ಮಿಸುವುದು ಅವಶ್ಯಕವಾಗಿದೆ. ಶೌಚಾಲಯ, ಕುಡಿಯುವ ನೀರು ಅವಶ್ಯಕವಾಗಿದೆ. -ಹರ್ಷವರ್ಧನ ದೊಡ್ಡಮೇಟಿ, ಗ್ರಾ.ಪಂ ಸದಸ್ಯ

 ಜಕ್ಕಲಿ ಗ್ರಾಮದಲ್ಲಿ ಗ್ರಂಥಾಲಯಕ್ಕೆ ಉತ್ತಮ ಕಟ್ಟಡವಿದೆ. ಆದರೆ, ಇಲಾಖೆ ವತಿಯಿಂದ ಯುವಕರಿಗೆ ಅನುಕೂಲವಾಗುವ ರೀತಿಯ ಸ್ಪರ್ಧಾತ್ಮಕ ಪುಸ್ತಕಗಳು ಅವಶ್ಯಕವಾಗಿವೆ. ಅಲ್ಲದೇ ವೃದ್ಧರು, ಅಂಗವಿಕಲರಿಗೆ ಮನೆ ಮನೆಗೆ ತೆರಳಿ ಪುಸ್ತಕಗಳು ನೀಡುವ ಯೋಜನೆ ಜಾರಿಯಾಗುವುದು ಅವಶ್ಯಕವಾಗಿದೆ. ಇದರಿಂದ ವೃದ್ಧರು, ಅಂಗವಿಕಲರು ಹೆಚ್ಚಿನ ಜ್ಞಾನ ಸಂಪಾದಿಸಬಹುದು. –ಅಶೋಕ ಮುಕ್ಕಣ್ಣವರ, ಗ್ರಂಥಾಲಯ ಮೇಲ್ವಿಚಾರಕ

 

-ಸಿಕಂದರ ಎಂ. ಆರಿ

ಟಾಪ್ ನ್ಯೂಸ್

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.