ಉದ್ಯಾನಕ್ಕೆ ನಿರ್ವಹಣೆ ಕೊರತೆ


Team Udayavani, Sep 17, 2018, 4:34 PM IST

17-sepctember-20.jpg

ಗಜೇಂದ್ರಗಡ: ಪಟ್ಟಣದಲ್ಲಿ ಆಕರ್ಷಣೆಯಾಗಿದ್ದ ಉದ್ಯಾನ ಸೂಕ್ತ ನಿರ್ವಹಣೆ ಕೊರತೆಯಿಂದ ಅಂದಗೆಟ್ಟು ಅವ್ಯವಸ್ಥೆ ಆಗರವಾಗಿದೆ.

ಪುರಸಭೆ ಆಡಳಿತ ಉದ್ಯಾನ ನಿರ್ಮಾಣ ಮಾಡುವ ಮೂಲಕ ಜನರ ಕನಸು ಸಾಕಾರಗೊಳಿಸಿದೆ. ಆದರೆ ಉದ್ಯಾನ ನಿರ್ವಹಣೆಯಲ್ಲಿ ಮಾತ್ರ ಸಂಪೂರ್ಣ ಎಡೆವಿದೆ. ಗಾರ್ಡನ್‌ ನಿರ್ವಹಣೆಗಾಗಿ ಪುರಸಭೆ ವತಿಯಿಂದ ಪ್ರತಿ ತಿಂಗಳು 10 ಸಾವಿರ ರೂ. ಖರ್ಚು ಮಾಡಲಾಗುತ್ತಿದೆ. ಉದ್ಯಾನವನದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಇದರಿಂದ ಉದ್ಯಾನಕ್ಕೆ ಆಗಮಿಸುವ ಸಾರ್ವಜನಿಕರು ಪುರಸಭೆಗೆ ಹಿಡಿಶಾಪ ಹಾಕುವಂತಾಗಿದೆ.

ಗುಡ್ಡದ ತಳಭಾಗದ ಕೆರೆ ಬಳಿ ಮಕ್ಕಳ ಉದ್ಯಾನ ಅನೈರ್ಮಲ್ಯದ ತಾಣವಾಗಿದೆ. ತ್ಯಾಜ್ಯ ಎಲ್ಲೆಂದರಲ್ಲಿ ಸಂಗ್ರಹವಾಗಿದೆ. ಗಿಡಗಳು ಅಡ್ಡಾ ದಿಡ್ಡಿ ಬೆಳೆದು ನಿಂತ ಪರಿಣಾಮ ಸಾರ್ವಜನಿಕರ ಮುಖಕ್ಕೆ ಬಡಿಯುವಂತಾಗಿದೆ. ಇನ್ನೊಂದೆಡೆ ಹುಲ್ಲಿನ ಹಾಸಿಗೆಯಾಗುವ ಬದಲು ಕಾಲು ಮುಚ್ಚುವಷ್ಟು ಕಸ ಬೆಳೆದು ನಿಂತಿದೆ. ಕೆಲ ಭಾಗದಲ್ಲಿ ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಇರಿಸಿದ ಕಲ್ಲುಗಳು ಅದೇ ಸ್ಥಳದಲ್ಲಿವೆ. ಮಕ್ಕಳ ಆಟೋಟಕ್ಕೆ ನಿರ್ಮಿಸಿರುವ ಉಪಕರಣಗಳನ್ನು ದೊಡ್ಡವರು ಉಪಯೋಗಿಸುತ್ತಿರುವುದು ಉದ್ಯಾನವನ ನಿರ್ವಹಣೆ ಲೋಪಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಮನಸ್ಸಿಗೆ ತಂಪು ನೀಡುವುದರ ಜತೆಗೆ ವಿಶಾಲವಾದ ವಾತಾವರಣ ಕಲ್ಪಿಸುವೆ. ಮಕ್ಕಳ ಆಟೋಟಕ್ಕೂ ನೆರವಾಗುವೆ. ಎಲ್ಲರನ್ನು ಆಕರ್ಷಿಸುವೆ. ಮನಸ್ಸಿಗೆ ಮುದ ತಣಿಸುವಂತೆ ಮಾಡುವೆ. ನೀವು ನನ್ನನ್ನು ಉಳಿಸಿ. ಇದು ಯಾರೋ ಹೇಳುವ ಮಾತಲ್ಲ. ಬದಲಾಗಿ ಉದ್ಯಾನದ ಸ್ಥಿತಿಯ ಆರ್ಥನಾದ. 

ಉದ್ಯಾನವನದಲ್ಲಿ ಹಲವಾರು ಸಸ್ಯವರ್ಗ ವಿವಿಧ ಅಲಂಕಾರಗಳಿಂದ ನಿರ್ಮಿಸಲಾಗಿದೆ. ವರ್ಷ ಕಳೆದಂತೆ ಅವುಗಳೆಲ್ಲವೂ ಮಾಯವಾಗುವ ಹಂತಕ್ಕೆ ತಲುಪಿವೆ. ಸಮಯಕ್ಕೆ ಸರಿಯಾಗಿ ನೀರು ಹಾಕಿ ಬೆಳೆಸದ ಹಿನ್ನೆಲೆಯಲ್ಲಿ ಸಸ್ಯಗಳು ಒಣಗುವ ಹಂತ ತಲುಪಿವೆ. 

ಪಟ್ಟಣದ ಹೊರ ವಲಯದಲ್ಲಿ 4.40 ಲಕ್ಷ ರೂ. ಅನುದಾನದಲ್ಲಿ 851 ಚದರ ಜಾಗೆಯಲ್ಲಿ ಅಂದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿದ್ದ ಹಾಲಿ ಶಾಸಕ ಕಳಕಪ್ಪ ಬಂಡಿ ಅವರ ಅಧಿಕಾರವಧಿಯಲ್ಲಿ ಸುಂದರವಾಗಿ ಅವತಾರವೆತ್ತಿದ್ದ ಉದ್ಯಾನ ಈಗ ಹಾಳು ಕೊಂಪೆಯಂತಾಗಿ ನಿಂತಿದೆ. ಆದರೆ ಶಾಸಕರಾಗಿ ಆಯ್ಕೆಯಾಗಿರುವ ಕಳಕಪ್ಪ ಬಂಡಿ ಅವರು ಮತ್ತೆ ಉದ್ಯಾನ ಅಭಿವೃದ್ಧಿಗೆ ಆಸಕ್ತಿ ತೋರುವರೇ ಎಂಬ ಪ್ರಶ್ನೆ ಎದುರಾಗಿದೆ.

ಗಜೇಂದ್ರಗಡವನ್ನು ಮತ್ತಷ್ಟು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಉದ್ಯಾನ ನಿರ್ವಹಣೆ ಮಾಡುವಲ್ಲಿ ಪುರಸಭೆ ಆಡಳಿತ ಸಂಪೂರ್ಣ ವಿಫಲವಾಗಿದೆ. ಕಾಲಗರ್ಭ ಸೇರುವ ಹಂತ ತಲುಪಿಸುವ ಉದ್ಯಾನ ಉಳಿವಿಗೆ ಜನಪ್ರತಿನಿ ಧಿಗಳು, ಅಧಿಕಾರಿಗಳು ಮುಂದಾಗಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು.
ಭೀಮಣ್ಣ ಇಂಗಳೆ,
ಜಯ ಕರ್ನಾಟಕ ಸಂಘಟನೆ,ತಾಲೂಕು ಅಧ್ಯಕ್ಷ 

ಪುರಸಭೆ ವತಿಯಿಂದ ನಿರ್ಮಾಣಗೊಂಡಿರುವ ಉದ್ಯಾನ ನಿರ್ವಹಣೆಗಾಗಿ ಇಬ್ಬರನ್ನು ನೇಮಕ ಮಾಡಲಾಗಿದೆ. ಆದರೆ ಸ್ವತ್ಛತೆ ಕಾಪಾಡದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಉದ್ಯಾನ ನಿರ್ವಹಣೆಗೆ ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಲಾಗುವುದು. ಜತೆಗೆ ಪುರಸಭೆ ಅ ಧಿಕಾರಿಗಳೇ ಸ್ವತಃ ಉದ್ಯಾನಕ್ಕೆ ತೆರಳಿ ಸ್ವಚ್ಛತೆ ಕಾರ್ಯ ಮಾಡಲಾಗುವುದು.
ಹನಮಂತಮ್ಮ ನಾಯಕ, ಮುಖ್ಯಾಧಿಕಾರಿ

ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.