ವರುಣನ ಅವಕೃಪೆಗೆ ರೈತ ಕಂಗಾಲು

•ತೇವಾಂಶವಿಲ್ಲದೆ ಕಮರುತ್ತಿದೆ ಭೂಮಿಯಲ್ಲಿ ಬಿತ್ತಿದ ಹೆಸರು ಬೀಜ •

Team Udayavani, Jun 19, 2019, 10:15 AM IST

gadaga-tdy-1..

ನರಗುಂದ: ತಾಲೂಕಿನಲ್ಲಿ ಬಿತ್ತನೆ ಮಾಡಿದ ಕೆಲವು ರೈತರ ಹೆಸರು ಬೀಜ ಮೊಳಕೆ ಹಂತದಲ್ಲೇ ಮಳೆಯಿಲ್ಲದೇ ಕಮರುತ್ತಿದೆ.

ನರಗುಂದ: ಸತತ ಐದು ವರ್ಷಗಳಿಂದ ಭೀಕರ ಬರಗಾಲ ಸ್ಥಿತಿಗೆ ಕಂಗೆಟ್ಟಿರುವ ತಾಲೂಕಿನ ರೈತಾಪಿ ವರ್ಗ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲೂ ಸಂಕಷ್ಟ ಎದುರಿಸುವಂತಾಗಿದೆ. ಜೂನ್‌ ಮೊದಲ ವಾರದಲ್ಲಿ ಸುರಿದ ಅಷ್ಟಿಷ್ಟು ಮಳೆಗೆ ಹೆಸರು ಬೀಜ ಬಿತ್ತನೆ ಮಾಡಿದ ರೈತರು ಇದೀಗ ವರುಣನ ಅವಕೃಪೆಗೆ ಕಂಗಾಲಾಗಿದ್ದು, ಹೆಸರು ಬೆಳೆಗಳ ಮೇಲೆ ಕರಿನೆರಳು ಆವರಿಸಿದೆ.

ಕಳೆದ ಐದು ವರ್ಷಗಳಿಂದ ಹಿಂಗಾರು ಮತ್ತು ಮುಂಗಾರು ಸೇರಿ ಬಹುತೇಕ ಬೆಳೆಗಳಿಂದ ವಂಚಿತವಾದ ರೈತರು ತೀವ್ರ ಬರಗಾಲ ಸ್ಥಿತಿ ಎದುರಿಸುತ್ತಿದ್ದು, ಈ ವರ್ಷವೂ ಮುಂದುವರೆಯುವ ಲಕ್ಷಣ ಗೋಚರಿಸುತ್ತಿದೆ. ಇದು ಇಡೀ ಕೃಷಿ ವಲಯವನ್ನು ಆತಂಕಕ್ಕೀಡು ಮಾಡಿದೆ.

ಹೆಸರಿಗೆ ಕರಿನೆರಳು: ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಹೆಸರು ಬೀಜ ಬಿತ್ತನೆ ವೇಳೆಗೆ ಸಾಕಷ್ಟು ಸುರಿದ ಮಳೆರಾಯ ಮತ್ತೇ ಮೋಡದ ಮರೆಯಲ್ಲಿ ಮಾಯವಾಗಿದ್ದರಿಂದ ಅಷ್ಟಿಷ್ಟು ರೈತರು ಮಾತ್ರ ಹೆಸರು ಬೆಳೆ ತೆಗೆದರು. ಆಗಲೂ ಬಹುತೇಕ ರೈತರು ಹೆಸರಿನಿಂದ ವಂಚಿತವಾದರು. ಬಳಿಕ ಹಿಂಗಾರು ಅವಧಿಗೆ ನವಿಲುತೀರ್ಥ ರೇಣುಕಾ ಜಲಾಶಯ ರೈತರಿಗೆ ವರವಾದ್ದರಿಂದ ಕಾಲುವೆ ನೀರಿನಿಂದ ಅನ್ನದ ಗಂಜಿಗೆ ನೆರವಾಯಿತು.

ಪ್ರಸಕ್ತ ಸಾಲಿನ ಜೂನ್‌ ತಿಂಗಳಲ್ಲಿ ಒಂದಿಷ್ಟು ಸುರಿದ ಮಳೆರಾಯ ರೈತರಲ್ಲಿ ಭರವಸೆ ಮೂಡಿಸಿತ್ತು. ಮಳೆರಾಯನ ಮೇಲೆ ಭರವಸೆ ಹೊತ್ತ ರೈತರು ಕೃಷಿ ಕಚೇರಿ ಬಾಗಿಲು ಬಡಿದು ಸಾಲಶೂಲ ಮಾಡಿ ಹೆಸರು ಬಿತ್ತನೆ ಬೀಜ ಖರೀದಿಸಿದರು. ಬಹುತೇಕ ರೈತರು ಒಣ ಮಣ್ಣಿನಲ್ಲೇ ಹೆಸರು ಬಿತ್ತನೆ ಮಾಡಿ ಕೈಸುಟ್ಟುಕೊಂಡಂತಾಗಿದೆ. ಕಳೆದ 15 ದಿನಗಳ ಹಿಂದೆ ತಾಲೂಕಿನಲ್ಲಿ ರೈತರು ಹೆಸರು ಬೀಜ ಬಿತ್ತನೆ ಮಾಡಿದ್ದರು. ಆದರೆ ಮಿಂಚಿ ಮರೆಯಾದ ಮಳೆರಾಯನ ಆಟಾಟೋಪಕ್ಕೆ ಮತ್ತೇ ರೈತರು ಕಂಗಾಲಾಗಿದ್ದಾರೆ. ಬಹುತೇಕ ರೈತರು ಬಿತ್ತನೆ ಮಾಡಿದ ಹೆಸರು ಬೀಜ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದು, ಒಂದಷ್ಟು ರೈತರ ಹೆಸರು ಬೀಜ ಮೊಳಕೆ ಹಂತದಲ್ಲೇ ಕಮರಿ ಹೋಗುತ್ತಿವೆ.

ಕೆಲವು ರೈತರ ಮೊಳಕೆಯೊಡೆದ ಹೆಸರು ಬೆಳೆ ಎರಡಿಂಚು ಅಳತೆಯಲ್ಲೇ ತೇವಾಂಶ ಕೊರತೆಯಿಂದ ಬಾಡಿ ನಿಂತಿದ್ದು, ರೈತರು ಸಂಕಷ್ಟ ಸ್ಥಿತಿ ಎದುರಿಸುವಂತಾಗಿದೆ. ಮತ್ತೂಂದೆಡೆ ಸಾಲಶೂಲ ಮಾಡಿ ಹೆಸರು ಬಿತ್ತನೆ ಬೀಜ ತಂದು ಮನೆಯಲ್ಲಿಟ್ಟುಕೊಂಡ ರೈತರು ವರುಣನಿಗೆ ಹಿಡಿಶಾಪ ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ತಾಲೂಕಿನಲ್ಲಿ 7500 ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬೀಜ ಬಿತ್ತನೆಗೆ ಕೃಷಿ ಇಲಾಖೆ ಗುರಿ ಇಟ್ಟುಕೊಂಡಿತ್ತು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.