ರಾಜೂರಲ್ಲಿ ರಾರಾಜಿಸದ ಗ್ರಂಥಾಲಯ


Team Udayavani, Nov 6, 2019, 2:21 PM IST

gadaga-tdy-1

ಗಜೇಂದ್ರಗಡ: ಪುಸ್ತಗಳನ್ನು ಇಡಲು ಸ್ಥಳವಿಲ್ಲ, ನಾಲ್ಕು ಖುರ್ಚಿಗಳ ಹೊರತುಪಡಿಸಿ ಐದನೇ ಖುರ್ಚಿ ಇಡಲೂ ಸ್ಥಳವಿಲ್ಲ, ವಿದ್ಯುತ್‌ ಸಂಪರ್ಕವಂತೂ ಇಲ್ಲವೇ ಇಲ್ಲ. ಹೀಗೆ ಇಲ್ಲಗಳ ನಡುವೆ ಸಮೀಪದ ರಾಜೂರ ಗ್ರಾಮದ ಗ್ರಂಥಾಲಯ ಕಾರ್ಯ ನಿರ್ವಹಿಸುತ್ತಿದೆ.

ರಾಜೂರು ಗ್ರಂಥಾಲಯ ಹಲವಾರು ವರ್ಷಗಳಿಂದ 10 ಅಡಿ ಅಗಲ, 10 ಅಡಿ ಉದ್ದದ ಸಣ್ಣ ಕೊಠಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಓದುಗರಿಗೆ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ. ಗ್ರಂಥಾಲಯ ಕೊಠಡಿ ಮೊದಲೇ ತೀರಾ ಕಿರಿದಾಗಿದ್ದು, ಅದರಲ್ಲಿಯೇ 3 ಅಲ್ಮೇರಾ, 1 ರ್ಯಾಕ್‌ ಇಡಲಾಗಿದೆ. ಕುಳಿತು ಓದಲು ಜಾಗವಿಲ್ಲದ್ದರಿಂದ ಅದೆಷ್ಟೋ ಸಲ ಓದುಗರು ಮರಳಿ ಹೋದ ಉದಾಹರಣೆಗಳಿವೆ. ಗ್ರಂಥಾಲಯದಲ್ಲಿ ಕೇವಲ 5 ರಿಂದ 6 ಖುರ್ಚಿಗಳು ಮಾತ್ರ ಇದ್ದು, ಅವುಗಳನ್ನಿಡಲೂ ಸಹ ಜಾಗವಿಲ್ಲ. ಅಷ್ಟೊಂದು ಕಿರಿದಾದ ಕೊಠಡಿಯಲ್ಲಿ ಗ್ರಂಥಾಲಯ ನರಕಯಾತನೆ ಅನುಭವಿಸುತ್ತಿದೆ. 1994ರಿಂದ ಆರಂಭವಾಗಿರುವ ಈ ಗ್ರಂಥಾಲಯದಲ್ಲಿ 115ಕ್ಕೂ ಅ ಧಿಕ ಸದಸ್ಯರಿದ್ದು, 3311 ಪುಸ್ತಕಗಳಿವೆ. ಆದರೆ ಸ್ಥಳಾವಕಾಶ ಕೊರತೆಯಿಂದ ಬಹುತೇಕ ಪುಸ್ತಕಗಳು ಅಲ್ಮೇರಾ ಸೇರಿಕೊಂಡಿವೆ.

ಧೂಳು ಹಿಡಿದ ಪುಸ್ತಕಗಳು: ಸೂಕ್ತ ಕಟ್ಟಡ ಕೊರತೆಯಿಂದ ಪುಸ್ತಕಗಳು ಓದುಗರ ಕೈಸೇರುತ್ತಿಲ್ಲ. ಪುಸ್ತಕಗಳನ್ನು ಮುಕ್ತವಾಗಿ ತೆರೆದಿಡಲು ರ್ಯಾಕ್‌ ಗಳಲ್ಲಿಲ್ಲ. ಜಾಗ ಇಲ್ಲದ್ದರಿಂದ 3 ಸಾವಿರಕ್ಕೂ ಅಧಿಕ ಪುಸ್ತಕಗಳು ಅಲ್ಮೇರಾ ಸೇರಿವೆ.

ಸ್ಪರ್ಧಾತ್ಮಕ ಪೂರಕ ಪುಸ್ತಕಗಳು ಬೇಕು: ಸ್ಪರ್ಧಾತ್ಮಕಪರೀಕ್ಷೆ ಬರೆಯುವ ಸಾಕಷ್ಟು ವಿದ್ಯಾರ್ಥಿಗಳು ಗ್ರಂಥಾಲಯಗಳನ್ನೇ ಅವಲಂಬಿಸಿರುವುದರಿಂದ ಅನುದಾನ ಕೊರತೆಯಿಂದ ರಾಜೂರ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಪುಸ್ತಕಗಳನ್ನು ಕೊಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ನಿಯಮಿತವಾಗಿ ಹಣ ಬಿಡುಗಡೆಯಾದರೆ ಈ ತೊಂದರೆ ತಪ್ಪುತ್ತದೆ ಎನ್ನುತ್ತಾರೆ ವಿದ್ಯಾರ್ಥಿಗಳು.

ಪತ್ರಿಕೆ ಖರೀದಿಗೆ ಕೇವಲ 400 ರುಪಾಯಿ: ದಿನಪತ್ರಿಕೆಗಳ ಖರೀದಿಗೆ ತಿಂಗಳಿಗೆ 400 ಮಾತ್ರ ಬಿಡುಗಡೆ ಮಾಡಲಾಗುತ್ತದೆ. ಆ ಹಣದಲ್ಲಿ ಕೇವಲ ಮೂರು ಪತ್ರಿಕೆಗಳನ್ನು ಸಹ ಖರೀದಿಸಲಾಗುತ್ತಿಲ್ಲ. ಇನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿ ಸಿದ ಪತ್ರಿಕೆ ಖರೀದಿ ದೂರದ ಮಾತು. ಆದ್ದರಿಂದ ಈ ಹಣವನ್ನು ಕನಿಷ್ಠ 800 ರೂ.ಗಳಿಗೆ ಹೆಚ್ಚಿಸಲು ಮುಂದಾಗಬೇಕು ಎನ್ನುವುದು ಗ್ರಂಥಪಾಲಕರ ಸಾಮೂಹಿಕ ಮನವಿ.

ಗ್ರಂಥಾಲಯದಲ್ಲಿ ಪತ್ರಿಕೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಕ್ಕಾಗಿ ಕೇವಲ 400 ರೂಪಾಯಿಗಳನ್ನು ನೀಡಲಾಗುತ್ತಿದೆ. ಇದು ದಿನಪತ್ರಿಕೆಗೂ ಸಾಕಾಗಲ್ಲ. ಹೀಗಾಗಿ ಸ್ಪರ್ಧಾತ್ಮಕ ಪುಸ್ತಕಗಳಿಗಾಗಿ ಯುವಕರು ನಿತ್ಯ ಮನವಿ ಮಾಡುತ್ತಿದ್ದಾರೆ. ಅವುಗಳ ಪೂರೈಕೆಗೆ ಇಲಾಖೆ ಮುಂದಾಗಬೇಕು.ಎಸ್‌.ವಿ ಪಾಟೀಲ, ರಾಜೂರ ಗ್ರಂಥಪಾಲಕ

 

-ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.