ನೀರಿನ ತೊಟ್ಟಿ ಯೋಜನೆ ನರೇಗಾ ದಾಖಲೆಗೆ ಸೀಮಿತ


Team Udayavani, Mar 16, 2020, 4:36 PM IST

ನೀರಿನ ತೊಟ್ಟಿ  ಯೋಜನೆ ನರೇಗಾ ದಾಖಲೆಗೆ ಸೀಮಿತ

ರೋಣ: ಬೇಸಿಗೆ ಸಮೀಪಿಸುತ್ತಿದ್ದಂತೆ ಎಲ್ಲೆಡೆ ಕುಡಿಯುವ ನೀರಿಗೆ ಅಲೆದಾಟ ಶುರುವಾಗುತ್ತಿದೆ. ನೆತ್ತಿ ಸುಡುವ ಬಿಸಿಲಿಗೆ ಹೈರಾಣಾದ ಜನರೇ ಕುಡಿಯುವ ನೀರಿಗೆ ಗುಟುರುತ್ತಿರುವಾಗ ಮೂಕ ಪ್ರಾಣಿಗಳ ರೋದನೆ ಮಾತ್ರ ಹೇಳತೀರದ್ದು.

ತಾಲೂಕಿನಲ್ಲಿ ಬೇಸಿಗೆ ಬಿಸಿಲಿನ ಝಳಕ್ಕೆ ಹಳ್ಳ-ಕೊಳ್ಳ, ಕೆರೆ-ಕಟ್ಟೆಗಳಲ್ಲಿದ್ದ ನೀರು ತಳ ಕಂಡಿದೆ. ಹೀಗಾಗಿ ಹೊಲ-ಜಮೀನುಗಳಿಗೆ ತೆರಳಿದ ಜಾನುವಾರುಗಳ ದಾಹ ಇಂಗಿಸಬೇಕಾದರೆ ಮತ್ತೆ ಗ್ರಾಮಕ್ಕೆ ಮರಳುವ ಪರಿಸ್ಥಿತಿ ಎದುರಾಗಿದೆ ಎಂದು ಸಾರ್ವಜನಿಕರು ದೂರುತ್ತಿದ್ದು, ನೀರಿನ ತೊಟ್ಟಿ ನಿರ್ಮಾಣ ಮಾಡಬೇಕೆನ್ನುವ ಕೂಗು ಸಹ ಕೇಳಿಬರುತ್ತಿದೆ. ಮಹಾತ್ಮ ಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನುರಿತ ಅಭಿಯಂತರರ 42 ಸಾವಿರ ರೂ. ಅನುದಾನದಲ್ಲಿ ನೀರಿನ ತೊಟ್ಟಿ ನಿರ್ಮಾಣ ಮಾಡಲು ಅಂದಾಜು ಪಟ್ಟಿಯೊಂದಿಗೆ ರೂಪುರೇಷೆ ನೀಡಿದ್ದಾರೆ. ಆದರೆ ಅದನ್ನು ಕಾರ್ಯರೂಪಕ್ಕೆ ತರಬೇಕಾದ ಗ್ರಾಮ ಪಂಚಾಯತಿಗಳು ಮಾತ್ರ ಇಲ್ಲಿಯವರೆಗೆ ಯಾವ ಗ್ರಾಮದಲ್ಲಿ ನೀರಿನ ತೊಟ್ಟಿ ನಿರ್ಮಿಸದಿರುವುದು ದುರ್ದೈವ.  ಇದರಿಂದ ಗ್ರಾಮ ಪಂಚಾಯತಿ ಅಧಿಕಾರಿಗಳಿಗೂ, ತಾಪಂ-ಜಿಪಂ ಅಧಿ ಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿ ಧಿಗಳಿಗೆ ಮೂಕ ಪ್ರಾಣಿಗಳ ರೋದನ ಕೇಳಿಸದಂತಾಗಿದೆ.

1.80 ಲಕ್ಷ ಸಾಕು ಪ್ರಾಣಿಗಳು: ತಾಲೂಕಿನಲ್ಲಿ ಬರುವ ಒಟ್ಟು ಗ್ರಾಮಗಳಲ್ಲಿ 33,000 ಎಮ್ಮೆ, 27,000 ಆಕಳು, 70,000 ಕುರಿ, 50,000 ಮೇಕೆ ಸೇರಿದಂತೆ ಒಟ್ಟು 1.80 ಲಕ್ಷ ಸಾಕು ಪ್ರಾಣಿಗಳಿವೆ. ಇವುಗಳು ಮನೆಯಲ್ಲಿದ್ದಾಗ ಮಾಲೀಕರು ತಮಗೆ ಸಂಗ್ರಹಿಸಿಟ್ಟ ನೀರು ಕುಡಿಸುತ್ತಾರೆ. ಆದರೆ ಇವು ಮೇಯಲು ಹೊಲಗಳಿಗೆ ತೆರಳಿದಾಗ ಅಲ್ಲಿ ಯಾವುದೇ ದೊಡ್ಡ ಪ್ರಮಾಣದ ಕೆರೆಗಳಿಲ್ಲದ ಕಾರಣ ನೀರಿನ ದಾಹದಲ್ಲಿಯೇ ಮನೆಗೆ ಹಿಂದಿರುಗುವ ಸ್ಥಿತಿ ಬಂದೊದಗಿದೆ. ಮನುಷ್ಯರು ಬಾಯಾರಿಕೆಯಾದರೆ ನೀರು ಇದ್ದಲ್ಲಿಗೆ ಹೋಗುತ್ತಾರೆ. ಇಲ್ಲವೇ ಅವರಿವರನ್ನು ಬೇಡಿಯಾದರು ನೀರು ಕುಡಿಯುತ್ತಾರೆ. ಆದರೆ ಮೂಕ ಪ್ರಾಣಿ, ಪಕ್ಷಿ, ದನಕರುಗಳು ದಾಹ ಇಂಗಿಸಿಕೊಳ್ಳುವುದು ಹೇಗೆ ಎಂಬ ಚಿಂತೆ ಇದೀಗ ಎಲ್ಲರನ್ನೂ ಕಾಡುತ್ತಿದೆ.

ಸದ್ಯ ಜಿಲ್ಲೆಯಲ್ಲಿ ಬರುವ ಎಲ್ಲ ಹಳ್ಳಿಗಳಿಗೂ ಡಿಬಿಒಟಿ ಯೋಜನೆಯಲ್ಲಿ ನೀರು ಪೂರೈಸಲಾಗುತ್ತಿದೆ. ಇದರ ಜೊತೆಗೆ ಆಯಾ ಗ್ರಾಮಗಳಲ್ಲಿ ನೀರಿನ ಮೂಲ ಯಾವ ಸ್ಥಳದಲ್ಲಿದೆಯೋ ಅಲ್ಲಿಯೇ ಗ್ರಾಪಂ ವತಿಯಿಂದ ಶೀಘ್ರ ನೀರಿನ ತೊಟ್ಟಿ ನಿರ್ಮಿಸಲು ಜಿಲ್ಲೆಯ ಎಲ್ಲ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಆದೇಶ ನೀಡುತ್ತೇನೆ. ಆನಂದ.ಕೆ, ಜಿಪಂ ಸಿಇಒ

‌ಕುರಿ ಮರಿ ಮೇಯಿಸಲು ಹೋದಾಗ ಅಡವಿಯಲ್ಲಿ ನೀರು ಸಿಗುವುದಿಲ್ಲ. ಇಷ್ಟು ದಿನಗಳ ಕಾಲ ರೈತರ ಹೊಲದಲ್ಲಿರುವ ಕೃಷಿ ಹೊಂಡಗಳಲ್ಲಿನ ಕುರಿಗಳಿಗೆ ನೀರು ಕುಡಿಸುತ್ತಿದ್ದೆವು. ಆದರೆ ಈಗ ಹೊಂಡದಲ್ಲಿನ ನೀರು ಬತ್ತಿದೆ. ಹೀಗಾಗಿ ನೀರಿನದ್ದೇ ಚಿಂತೆಯಾಗಿದೆ. ಪಂಚಾಯತಿಯಿಂದ ಬೋರ್‌ವೆಲ್‌ ಇದ್ದಲ್ಲಿ ನೀರಿನ ತೊಟ್ಟಿ ನಿರ್ಮಿಸುತ್ತೇವೆ ಎಂದು ಎರಡು ವರ್ಷದಿಂದ ಹೇಳುತ್ತಿದ್ದರೂ ಅದುಇಲ್ಲಿಯವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. –ಯಲ್ಲಪ್ಪ ಕುಲಮಿಂಚು, ಕುರಿಗಾಯಿ

 

-ಯಚ್ಚರಗೌಡ ಗೋವಿಂದಗೌಡ್ರ

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.