ಲಕ್ಷ್ಮೇಶ್ವರ: 2-3 ದಿನಕ್ಕೊಮ್ಮೆ ನೀರು ಪೂರೈಸದಿದ್ದರೆ ಪ್ರತಿಭಟನೆ


Team Udayavani, May 24, 2023, 6:25 PM IST

ಲಕ್ಷ್ಮೇಶ್ವರ: 2-3 ದಿನಕ್ಕೊಮ್ಮೆ ನೀರು ಪೂರೈಸದಿದ್ದರೆ ಪ್ರತಿಭಟನೆ

ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣಕ್ಕೆ 12-15 ದಿನಗಳಿಗೊಮ್ಮೆ ನೀರು ಬರುತ್ತಿದ್ದು, ರೈತಾಪಿ ವರ್ಗವೇ ಹೆಚ್ಚಿರುವ ವಾರ್ಡ್‌ಗಳಲ್ಲಂತೂ ಜಾನುವಾರುಗಳ ರಕ್ಷಣೆಗಾಗಿ ಅನ್ನದಾತರು ನಿತ್ಯ ಪರದಾಡುವಂತಾಗಿದೆ. 15 ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಿ 2-3 ದಿನಕ್ಕೊಮ್ಮೆ ನೀರು ಕೊಡದಿದ್ದರೆ ಜನ-ಜಾನುವಾರು-ಎತ್ತು-ಚಕ್ಕಡಿ ಮತ್ತು ಖಾಲಿ ಕೊಡಗಳೊಂದಿಗೆ ಪುರಸಭೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಎಚ್ಚರಿಕೆ ನೀಡಿದರು.

ಮಂಗಳವಾರ ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣಕ್ಕೆ ತುಂಗಭದ್ರಾ
ನದಿಯಿಂದ ಸರಬರಾಜಾಗುವ ಪೈಪ್‌ಲೈನ್‌ ಸಂಪೂರ್ಣ ಹಾಳಾಗಿ ವರ್ಷಗಳೇ ಕಳೆದಿವೆ. ಪಟ್ಟಣದಲ್ಲಿನ 120 ಬೋರ್‌ವೆಲ್‌ಗ‌ಳಲ್ಲಿ 75 ಬೋರ್‌ ವೆಲ್‌ ಸುಸ್ಥಿತಿಯಲ್ಲಿವೆ. ಅಲ್ಲದೇ, ಎಲ್‌ಎನ್‌ಟಿ ಯೋಜನೆಯ ನೀರನ್ನು ಬಳಕೆ ಮಾಡಿಕೊಂಡಿಲ್ಲ. ಈ ಎಲ್ಲ ನಿರ್ಲಕ್ಷ್ಯ ದಿಂದ ನೀರಿನ ಸಮಸ್ಯೆ ಉಂಟಾಗಿದೆ ಎಂದರು.

ಪಟ್ಟಣದಲ್ಲಿ ಕಳೆದ 10 ವರ್ಷದಿಂದ ಆಶ್ರಯ ಫಲಾನುಭವಿಗಳ ಆಯ್ಕೆ ಕಗ್ಗಂಟಾಗಿದೆ. ತಮ್ಮ  ಅ ಧಿಕಾರಾವಧಿ ಯಲ್ಲಿ ಲಕ್ಷೆ¾àಶ್ವರದಲ್ಲಿ 64, ಶಿರಹಟ್ಟಿ-10 ಮತ್ತು ಮುಂಡರಗಿಯಲ್ಲಿ 20 ಎಕರೆ ಆಶ್ರಯ ನಿವೇಶನ ಜಾಲಿಕಂಟೆ ಬೆಳೆದು ಹಾಳಾಗುತ್ತಿದೆ. ಬಡವರ ಹೊಸ ಮನೆಯ ಕನಸು ನುಚ್ಚು ನೂರಾಗುತ್ತಿದೆ. ಗದಗ-ಲಕ್ಷ್ಮೇಶ್ವರ ಸೇರಿ ತಾಲೂಕಿನ ರಸ್ತೆಗಳು, ಪಟ್ಟಣದ ನಗರೋತ್ಥಾನ ಯೋಜನೆಯ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ ಎಂದರು.

ಹೊಸ ವಸತಿ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ಪೂರ್ಣ ಪ್ರಮಾಣದ ಸಿಬ್ಬಂದಿ ಸೇರಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವ ಬಗ್ಗೆ ಶಾಸಕರು ಮತ್ತು ಸ್ಥಳೀಯ ಪುರಸಭೆಯವರು ಕಾಳಜಿಪೂರ್ವಕ ಕೆಲಸ ಮಾಡಬೇಕು. ಜನ ಕೊಟ್ಟ ತೀರ್ಪನ್ನು ಸ್ವಾಗತಿಸುತ್ತೇವೆ. ಕ್ಷೇತ್ರದ ಜನರ ನಿರೀಕ್ಷೆಯಂತೆ ಕೆಲಸ ಮಾಡಬೇಕು ಎಂದರು.

140 ಕೋಟಿ ರೂ. ಅನುದಾನದ ಕೆರೆಗೆ ನೀರು ತುಂಬಿಸುವ ಯೋಜನೆ ನನೆಗುದಿಗೆ ಬಿದ್ದಿದೆ. ಜಾಲವಾಡಗಿ, ಇಟಗಿ ಯೋಜನೆಗಳು
ಸಾಕಾಗೊಳ್ಳುವ ಹಂತದಲ್ಲಿದ್ದು, ಪದೇ ಪದೆ ಇದನ್ನೇ ಹೇಳುವುದು ಬಿಟ್ಟು ಕೃಷ್ಣ ಬಿ ಸ್ಕೀಂ ಯೋಜನೆಯಲ್ಲಿ ಕ್ಷೇತ್ರದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಕ್ಷೇತ್ರದ ಜನತೆಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸದಾ ಜನಪರ ಹೋರಾಟ ಮಾಡುತ್ತೇವೆ ಎಂದರು.

ಪುರಸಭೆ ಸದಸ್ಯ ಮಹೇಶ ಹೊಗೆಸೊಪ್ಪಿನ ಮಾತನಾಡಿ, ಪುರಸಭೆಯಿಂದ ಪಟ್ಟಣದಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು, ಆಶ್ರಯ ಫಲಾನುಭವಿಗಳ ಆಯ್ಕೆ, ಕೈಗೊಳ್ಳುವ ತೀರ್ಮಾನಗಳ ಬಗ್ಗೆ ಸದಸ್ಯರಿಗೆ ಮಾಹಿತಿ ಇರುವುದಿಲ್ಲ. ಎಲ್ಲೋ
ಕುಳಿತು ಕಾಣದ ಕೈಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಪುರಸಭೆ ಸದಸ್ಯರು ತಲೆದೂಗುವ ಕೆಟ್ಟ ಸಂಪ್ರದಾಯ ಪಟ್ಟಣದಲ್ಲಿದೆ. ಸಂಸದರು ಕ್ಷೇತ್ರದತ್ತ ಮುಖ ಮಾಡಿಲ್ಲ. ಶಾಸಕರಿಗೆ ಕೆಲಸ ಮಾಡಲು ಬಿಟ್ಟಿಲ್ಲ. ಇನ್ನು ಮುಂದೆ ಇದರ ವಿರುದ್ಧ ಧನಿ ಎತ್ತುವ ಮೂಲಕ ರಾಮಕೃಷ್ಣ ದೊಡ್ಡಮನಿ ಅವರ ಸ್ವಾಭಿಮಾನಿ ಬಣದ ಹೋರಾಟಕ್ಕೆ ಕೈ ಜೋಡಿಸುತ್ತೇವೆ ಎಂದರು.

ಈ ವೇಳೆ ಪುರಸಭೆ ಮಾಜಿ ಅಧ್ಯಕ್ಷ ವಿ.ಜಿ ಪಡಗೇರಿ, ಪಿ.ಬಿ. ಖರಾಟೆ, ಕರವೇ ಜಿಲ್ಲಾಧ್ಯಕ್ಷ ಶರಣು ಗೋಡಿ, ಪಂಚಮಸಾಲಿ ತಾಲೂಕು ಅಧ್ಯಕ್ಷ ಮಂಜುನಾಥ ಮಾಗಡಿ, ಮಹಾದೇವಪ್ಪ ಅಂದಲಗಿ, ನಾಗರಾಜ ಚಿಂಚಲಿ, ಅಬ್ದುಲ್‌ ರಿತ್ತಿ, ಶಿವಾನಂದ ಲಿಂಗಶೆಟ್ಟಿ, ನಿಂಗಪ್ಪ ಗದ್ದಿ, ಸಿರಾಜ ಡಾಲಾಯತ್‌ ಇತರರಿದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.