ಬಾಂದಾರ ಹೂಳು ಗೋಳು ಕೇಳುವವರ್ಯಾರು?


Team Udayavani, Mar 24, 2019, 4:02 PM IST

00012

ಲಕ್ಷ್ಮೇಶ್ವರ: ಅಂತರ್ಜಲಮಟ್ಟ ಹೆಚ್ಚಿಸುವ ಉದ್ದೇಶದಿಂದ ತಾಲೂಕಿನಾದ್ಯಂತ ಹಳ್ಳಗಳಿಗೆ ಅಲ್ಲಲ್ಲಿ ಬಾಂದಾರಗಳನ್ನು ನಿರ್ಮಿಸಲಾಗಿದೆ. ಆದರೆ, ಬಹುತೇಕ ಬಾಂದಾರಗಳು ಹೂಳು ತುಂಬಿದ್ದರಿಂದ ಒಡೆದು ನೀರು ನಿಲ್ಲದಂತಾಗಿವೆ. ಇನ್ನು ಕೆಲವು ಬತ್ತಿ ಬರಡಾಗಿವೆ. ಇದರಿಂದ ಸರ್ಕಾರದ ಉದ್ದೇಶವೂ ಈಡೇರದೆ ಲಕ್ಷಾಂತರ ರೂ. ಹಳ್ಳದ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಹೌದು, ತಾಲೂಕಿನಾದ್ಯಂತ ಕಳೆದ 5 ವರ್ಷಗಳ ಅವಧಿಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ 57, ಕೃಷಿ ಇಲಾಖೆ ವತಿಯಿಂದ 22 ಬಾಂದಾರಗಳನ್ನು ನಿರ್ಮಿಸಲಾಗಿದೆ. ಜಿಪಂ ವತಿಯಿಂದ 190 ಬಾಂದಾರಗಳನ್ನು ಮಂಜೂರು ಮಾಡಲಾಗಿದ್ದು, ಇದರಲ್ಲಿ 20 ಬಾಂದಾರ ಪೂರ್ಣಗೊಂಡಿವೆ. ಉಳಿದ 170 ಬಾಂದಾರಗಳು ಪ್ರಗತಿ ಹಂತದಲ್ಲಿವೆ. ತಾಲೂಕಿನ ಬಟ್ಟೂರ, ಬಡ್ನಿ, ದೊಡ್ಡೂರು, ತಾರಿಕೊಪ್ಪ, ಆದ್ರಳ್ಳಿ, ಶ್ಯಾಬಳ, ಉಂಡೇನಹಳ್ಳಿ, ಆದ್ರಳ್ಳಿ, ಯಳವತ್ತಿ, ಮಾಡಳ್ಳಿ, ಸೂರಣಗಿ ಅನೇಕ ಕಡೆ ಹಳ್ಳಗಳಲ್ಲಿ ಬಾಂದಾರ ನಿರ್ಮಿಸಲಾಗಿದೆ.

ಮುಖ್ಯವಾಗಿ ಸಣ್ಣ ನೀರಾವರಿ ಇಲಾಖೆಯಿಂದಲೇ ಲಕ್ಷ್ಮೇಶ್ವರ ತಾಲೂಕಿನ ಗೊಜನೂರಿನಿಂದ ಸಂಕದಾಳ ವರೆಗಿನ ದೊಡ್ಡ ಹಳ್ಳಕ್ಕೆ 12 ಕೋಟಿ ರೂ. ವೆಚ್ಚದಲ್ಲಿ 18 ಸರಣಿ ಬಾಂದಾರ ನಿರ್ಮಿಸಲಾಗಿದೆ. ಇದರಲ್ಲಿ ಕಳೆದ ವರ್ಷ ಮುಂಗಾರಿನ ರಭಸದ ಮಳೆಗೆ ಕೆಲವು ಕೊಚ್ಚಿಕೊಂಡು ಹೋಗಿದ್ದವು. ಇವುಗಳಲ್ಲಿ ಕೆಲವೊಂದಿಷ್ಟು ಬಾಂದಾರಗಳನ್ನು ದುರಸ್ತಿ ಮಾಡಲಾಗಿದೆ. ಇನ್ನು ಕೆಲವು ಹಾಗೆಯೇ ಉಳಿದಿವೆ. ಮತ್ತೆ ಕೆಲವನ್ನು ಆಯಾ ಗ್ರಾಪಂ ವ್ಯಾಪ್ತಿಯವರು ಎನ್‌ಆರ್‌ಇಜಿಯಲ್ಲಿ ದುರಸ್ತಿ ಮಾಡಿಸುತ್ತಿದ್ದಾರೆ.

ಆದರೆ, ಈಗ ಈ ಎಲ್ಲ ಬಾಂದಾರಗಳಲ್ಲಿ ಹೂಳು ತುಂಬಿದ್ದರಿಂದ ಮಳೆಗಾಲದಲ್ಲಿ ಹೆಚ್ಚು ನೀರು ನಿಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಸಣ್ಣ ನೀರಾವರಿ ಇಲಾಖೆಯವರು ಬಾಂದಾರ ನಿರ್ಮಿಸಲಕ್ಕೆ ಮಾತ್ರ ಸೀಮಿತವಾಗಿದ್ದು, ಅವುಗಳಲ್ಲಿನ ಹೂಳು ಮತ್ತು ದುರಸ್ತಿ ಮಾಡಿಸುವವರು ಯಾರು ಎಂಬ ಪ್ರಶ್ನೆ ಕಾಡುತ್ತಿದೆ. ಕೆಲ ಗ್ರಾಪಂಗಳು ನರೇಗಾದಲ್ಲಿ ಅಲ್ಪಸ್ವಲ್ಪ ಹಣ ಮೀಸಲಿರಿಸಿದ್ದರೂ ಇದು ಕೇವಲ ದಾಖಲೆಗೆ ಮಾತ್ರ ಸೀಮಿತವಾಗಿದೆ.

‘ಬಾಂದಾರ ನಿರ್ಮಾಣ ಸಂದರ್ಭದಲ್ಲಿ ಈ ಯೋಜನೆಯಿಂದ ನಿಮಗೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಹೇಳಿ ಅಲ್ಪಸ್ವಲ್ಪ ಜಮೀನುಗಳನ್ನು ಒತ್ತುವರಿ ಮಾಡಿದ್ದರು. ಆದರೆ ಈಗ ಈ ಬಾಂದಾರದಲ್ಲಿ ಹೂಳು, ಕಸಕಡ್ಡಿ ತುಂಬಿ ಹನಿ ನೀರು ನಿಲ್ಲದಂತಾಗಿದೆ. ಸಂಬಂಧಪಟ್ಟವರಿಗೆ ಅನೇಕ ಬಾರಿ ವಿನಂತಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಯಾವ ಪುರುಷಾರ್ಥಕ್ಕೆ ಈ ಬಾಂದಾರ ನಿರ್ಮಿಸಿದ್ದಾರೂ ಳಿಯದಂತಾಗಿದೆ ಎಂದು ಬಟ್ಟೂರ ಗ್ರಾಮದ ರೈತ ನಿಂಗಪ್ಪ ಹರಿಜನ ಮತ್ತು ಸಂಕದಾಳ ಗ್ರಾಮದ ಹಾಲಪ್ಪ ಸೂರಣಗಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರವೇನೂ ಬಾಂದಾರ ನಿರ್ಮಾಣಕ್ಕೆ ಕೋಟಿ-ಕೋಟಿ ಹಣವನ್ನು ವಿನಿಯೋಗಿಸಿದ್ದರೂ ಸಾರ್ಥಕತೆ ಮಾತ್ರ ಶೂನ್ಯವಾಗಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆಗಳ ಮುಖಾಂತರ ಮಳೆಗಾಲ ಆರಂಭವಾಗುವುದರೊಳಗೆ ಬಾಂದಾರಗಳಲ್ಲಿನ ಹೂಳೆತ್ತಬೇಕು. ಇದರಿಂದ ಬಾಂದಾರಗಳಲ್ಲಿ ಹೆಚ್ಚು ನೀರು ಸಂಗ್ರಹಗೊಂಡು ಅಂತರ್ಜಲಮಟ್ಟ ಹೆಚ್ಚಲು ಸಹಕಾರಿ ಆಗುತ್ತಿದೆ. ಜತೆಗೆ ಈ ಭಾಗದ ಜನ, ಜಾನುವಾರುಗಳಿಗೆ ಅನುಕೂಲವಾಗುತ್ತದೆ.

ಬಾಂದಾರಗಳು ಹೂಳು ತುಂಬಿರುವ ಗ್ರಾಪಂ ವ್ಯಾಪ್ತಿಯಲ್ಲಿನ ಗ್ರಾಪಂ ಪಿಡಿಒಗಳಿಗೆ ಈಗಾಗಲೇ ಎನ್‌ಆರ್‌ಇಜಿ ಯೋಜನೆಯಡಿ ಹೂಳು ತೆಗೆಯುವ ಕಾರ್ಯ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅದರಂತೆ ಬಟ್ಟೂರ ಗ್ರಾಪದಿಂದ ಹೂಳೆತ್ತುವ ಕಾರ್ಯದ ಕ್ರಿಯಾ ಯೋಜನೆ ಅನುಮೋದನೆಗೊಂಡಿದೆ. ಒಟ್ಟಿನಲ್ಲಿ ಬಾಂದಾರ ಮತ್ತು ಕೆರೆ ಹೂಳೆತ್ತುವ ಕಾರ್ಯಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು.
ಆರ್‌.ವೈ. ಗುರಿಕಾರ, ತಾಪಂ ಇಒ

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.