24ರಂದು ಬೆಂಗಳೂರು ಚಲೋ


Team Udayavani, Feb 3, 2019, 11:17 AM IST

3-february-21.jpg

ಲಕ್ಷ್ಮೇಶ್ವರ: ಬೇಡ ಜಂಗಮ ಸಮಾಜವು ಬಹು ಹಿಂದಿನಿಂದಲೂ ಇರುವ ಜಾತಿ ವ್ಯವಸ್ಥೆಯಾಗಿದ್ದರೂ ಸಮಾಜಕ್ಕೆ ಸಾಂವಿಧಾನಿಕವಾಗಿ ದೊರಕಬೇಕಾದ ಸೌಲಭ್ಯ ಸಿಕ್ಕಿಲ್ಲ. ಸಮಾಜದ ಪ್ರತಿಯೊಬ್ಬರೂ ಸಂಘಟಿತರಾಗಿ ಸರಕಾರದ ಎದುರು ನಮ್ಮ ಹಕ್ಕು ಮಂಡಿಸುವ ನಿಟ್ಟಿನಲ್ಲಿ ಫೆ. 24ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಬೇಡ ಜಂಗಮ ಸಮಾಜ ರಾಜ್ಯಾಧ್ಯಕ್ಷ ವೀರೇಂದ್ರ ಪಾಟೀಲ ಹೇಳಿದರು.

ಪಟ್ಟಣದ ಗಡ್ಡದೇವರಮಠದ ಆವರಣದಲ್ಲಿ ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಜಂಗಮ ಸಮಾಜ ಸಭೆಯಲ್ಲಿ ಅವರು ಮಾತನಾಡಿದರು. ಬೇಡ ಜಂಗಮ ಮೊದಲಿನಿಂದಲೂ ಇರುವ ವ್ಯವಸ್ಥೆಯಾಗಿದೆ. ಆದರೆ ಅದರ ಬಗ್ಗೆ ಸಮಾಜದಲ್ಲಿ ತಿಳಿವಳಿಕೆ ಬರುವುದು ಅವಶ್ಯವಾಗಿದೆ. ಬೇಡ ಜಂಗಮ ಸಮಾಜಕ್ಕೆ ಸರಕಾರದಿಂದ ದೊರೆಯಬೇಕಾದ ಅನೇಕ ಸೌಲಭ್ಯಗಳಿಂದ ಜಂಗಮ ಸಮಾಜ ವಂಚಿತವಾಗುತ್ತಿದೆ. ಈ ನಿಟ್ಟಿನಲ್ಲಿ ಸಮಾಜ ಬಾಂಧವರು ಬೇಡ ಜಂಗಮ ಸಮಾಜದ ಮಹತ್ವ ಮತ್ತು ಅದರ ಮೂಲವನ್ನು ತಿಳಿದುಕೊಳ್ಳುವ ಮೂಲಕ ಸಂಘಟಿತರಾಗಿ ಎಂದು ಕರೆ ನೀಡಿದ ಅವರು, ಜಂಗಮ ಸಮಾಜ ಬಾಂಧವರು ಒಗ್ಗಟ್ಟಾಗಿ ಇದೇ ತಿಂಗಳು 24ರಂದು ಬೆಂಗಳೂರು ಚಲೋ ಕಾರ್ಯಕ್ರಮ ಸಂಘಟಿಸಲಾಗಿದ್ದು, ಸಮಾಜದ ಪ್ರತಿಯೊಬ್ಬರೂ ಇಚ್ಛಾಶಕ್ತಿಯಿಂದ ಪಾಲ್ಗೊಂಡು ನಮ್ಮ ಹಕ್ಕುಗಳಿಗಾಗಿ ಬೇಡಿಕೆ ಮಂಡಿಸೋಣ ಎಂದು ಮನವಿ ಮಾಡಿದರು.

ಸಭೆ ಅಧ್ಯಕ್ಷತೆಯನ್ನು ಗಂಗಾಧರಯ್ಯ ಹಾಲೇವಾಡಿಮಠ ವಹಿಸಿದ್ದರು. ರುದ್ರಯ್ಯ ಹಿರೇಮಠ(ಬಟ್ಟೂರ), ಚನ್ನಬಸಯ್ಯ ಗಡ್ಡಿಮಠ (ಸೂರಣಗಿ), ಪ್ರವೀಣ ಕುಲಕರ್ಣಿ, ಎಂ. ಸಿದ್ಧಲಿಂಗಯ್ಯ, ಸಿದ್ಧಯ್ಯ ಬಾಳಿಹಳ್ಳಿಮಠ, ಸಿ.ಆರ್‌. ಲಕ್ಕುಂಡಿಮಠ, ಚರಂತಯ್ಯ ಬಾಳಿಹಳ್ಳಿಮಠ, ಗುರುಶಾಂತಯ್ಯ ಬಾಳಿಹಳ್ಳಿಮಠ, ಶಿವಯೋಗಿ ಗಡ್ಡದೇವರಮಠ, ರವಿ ಪುರಾಣಿಕಮಠ, ರುದ್ರಯ್ಯ ಘಂಟಾಮಠ, ಬಿ.ಟಿ. ಪಾಟೀಲ, ಮಹೇಶ್ವರಯ್ಯ ಹಿರೇಮಠ ಸೇರಿದಂತೆ ಬಟ್ಟೂರು, ಶಿಗ್ಲಿ, ಸೂರಣಗಿ, ಯಳವತ್ತಿ, ಮಾಗಡಿ, ಅಡರಕಟ್ಟಿ ಮತ್ತಿತರ ಗ್ರಾಮಗಳಿಂದ ಸಮಾಜದ ಅನೇಕ ಹಿರಿಯರು, ಯುವಕರು ಇದ್ದರು. ವಿಜಯ ಹೊಳ್ಳಿಯವರಮಠ ನಿರೂಪಿಸಿದರು. ಪಂಚಯ್ಯ ಸಾಲಿಮಠ ವಂದಿಸಿದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.