ಬರಿದಾದ ಶೆಟ್ಟಿಕೆರೆ 


Team Udayavani, Mar 20, 2019, 11:08 AM IST

20-march-16.jpg

ಲಕ್ಷ್ಮೇಶ್ವರ: ಪ್ರಸಕ್ತ ವರ್ಷದ ಮುಂಗಾರು ಮತ್ತು ಹಿಂಗಾರಿನ ಮಳೆಗಳು ಸಂಪೂರ್ಣ ಕೈಕೊಟ್ಟಿದ್ದರಿಂದ ತಾಲೂಕಿನಲ್ಲಿನ ಎಲ್ಲ ಕೆರೆ, ಹಳ್ಳಗಳು ಬರಿದಾಗಿ ಬರಗಾಲದ ಭೀಕರತೆಯನ್ನು ಪ್ರದರ್ಶಿಸುತ್ತಿದೆ.

ತಾಲೂಕಿನಲ್ಲಿ ಜಿಪಂ ಮತ್ತು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ನೂರಾರು ಎಕರೆ ವಿಸ್ತಾರದ ಅನೇಕ ಕೆರೆಗಳಿವೆ. ಆದರೆ ಇವುಗಳ ನಿರ್ಲಕ್ಷದಿಂದ ಹೂಳು ತುಂಬಿ ನೀರಿನ ಸಂಗ್ರಹಣಾ ಸಾಮರ್ಥ್ಯ ಕಳೆದುಕೊಂಡಿವೆ. ಗಿಡಗಂಟಿಗಳು ಬೆಳೆದು ಇಲ್ಲಿ ಕೆರೆ ಇತ್ತೆ? ಎಂದು ಯೋಚಿಸುವ ಸ್ಥಿತಿ ನಿರ್ಮಾಣವಾಗಿವೆ.

234 ಎಕರೆ ವಿಸ್ತೀರ್ಣದ ಶೆಟ್ಟಿಕೆರೆಯು 540 ಎಕರೆ ವಿಸ್ತೀರ್ಣದ ಅಚ್ಚುಕಟ್ಟು ಪ್ರದೇಶ ಮತ್ತು 28 ಎಂಸಿಎಫ್‌ಟಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಇದಷ್ಟೇ ಅಲ್ಲದೇ ಈ ಕೆರೆಗೆ ಹೊಂದಿಕೊಂಡು ಅರಣ್ಯ ಇಲಾಖೆಗೆ ಸಂಬಂಧಿಸಿದ 200 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿ ಕೆರೆಯ ಪ್ರದೇಶ ವ್ಯಾಪಿಸಿಕೊಂಡಿದೆ.

ಇಷ್ಟೊಂದು ವಿಸ್ತೀರ್ಣವುಳ್ಳ ಕೆರೆಯ ನೀರನ್ನು ಮೊದಲು ಸುತ್ತಲಿನ ನೂರಾರು ಎಕರೆ ಜಮೀನುಗಳ ನೀರಾವರಿಗೆ ಬಳಸಲಾಗುತ್ತಿತ್ತು. ಮೀನುಗಾರಿಕೆ ಇಲಾಖೆಯಿಂದ ಪರವಾನಗಿ ಪಡೆದು ಮೀನುಗಾರಿಕೆ ಮಾಡಲಾಗುತ್ತಿದೆ. ಈ ಕೆರೆ ತುಂಬಿಕೊಂಡರೆ ಸುತ್ತಮುತ್ತಲಿನ ಗ್ರಾಮಗಳ ಜಾನುವಾರುಗಳು, ಕುರಿ ಮೇಕೆ, ಪ್ರಾಣಿ, ಪಕ್ಷಿಗಳಿಗೆ ಆಸರೆಯಾಗುತ್ತದೆ. ಅಂತೆಯೇ ಪ್ರತಿವರ್ಷ ಚಳಿಗಾಲದಲ್ಲಿ ವಿದೇಶಿ ಪಕ್ಷಿಗಳಿಗೂ ಆತಿಥ್ಯ ನೀಡುತ್ತದೆ. ಬರಗಾಲದ ಸಂದರ್ಭಲ್ಲಿ ಕೆರೆಯ ಪ್ರದೇಶದಲ್ಲಿ ಗೋಶಾಲೆ ತೆರೆಯಲಾಗುತ್ತದೆ. ಕೆರೆಯಲ್ಲಿ ನೀರಿದ್ದರೆ ಸುತ್ತಲಿನ ಭಾಗದ ಬೋರ್‌ವೆಲ್‌ಗ‌ಳಲ್ಲಿ ಅಂತರ್ಜಲಮಟ್ಟ ಹೆಚ್ಚಿ ಕೆರೆಗೆ ಹೊಂದಿಕೊಂಡಿರುವ ಅರಣ್ಯ ಇಲಾಖೆಯ ಸಸ್ಯಪಾಲನಾ ಕೇಂದ್ರಗಳಿಗೂ ಆಸರೆಯಾಗುತ್ತದೆ. ಒಟ್ಟಿನಲ್ಲಿ ಈ ಕೆರೆ ಈ ಭಾಗದ ಜನರ ನಿತ್ಯದ ಬದುಕಿನ ಜೀವ ಸೆಲೆಯಾಗಿದೆ.

ಆದರೆ ಈ ಕೆರೆಯಲ್ಲಿ ನೂರಾರು ವರ್ಷಗಳಿಂದ ತುಂಬಿಕೊಂಡಿರುವ ಹೂಳನ್ನು ಒಮ್ಮೆಯೂ ತೆಗೆಯದಿರುವುದರಿಂದ ನೂರಾರು ಕೆರೆಯ ಅಚ್ಚುಕಟ್ಟು ಪ್ರದೇಶ ಹೂಳಿನಿಂದಾವೃತವಾಗಿದೆ. ಅಲ್ಲದೇ ಕೆರೆಯ ಸುತ್ತಲಿನ ಪ್ರದೇಶದಲ್ಲಿ ಅಕ್ರಮ ಮರಳು, ಕಲ್ಲು ಮತ್ತು ಮಣ್ಣಿನ ದಂಧೆ ಅವ್ಯಾಹತವಾಗಿ ಸಾಗಿದ್ದರಿಂದ ಕೆರೆಗೆ ನೀರು ಹರಿದು ಬರುವ ಮಾರ್ಗಗಳು ದಿಕ್ಕು ತಪ್ಪಿವೆ. ಈ ಕೆರೆಗೊಜನೂರ, ಬಟ್ಟೂರ, ಮಾಗಡಿ 3 ಗ್ರಾಪಂ ವ್ಯಾಪ್ತಿಗೆ ಒಳಪಡುತ್ತಿದ್ದು ಪ್ರತಿವರ್ಷ ಕೆರೆಗಳ ಅಭಿವೃದ್ಧಿಗಾಗಿ ಆಯಾ ಗ್ರಾಪಂ ಮಟ್ಟದಲ್ಲಿ ಎನ್‌ಆರ್‌ಇಜಿ ಯೋಜನೆ ಮತ್ತು ಕೆರೆಗಳ ಪುನಃಶ್ಚೇತನ ಯೋಜನೆಯಡಿ ಹೂಳೆತ್ತಲು ಹಣ ತೆಗೆದಿರಿಸಲಾಗುತ್ತಿದೆ. 2018-19ನೇ ಸಾಲಿನಲ್ಲಿ ಬಟ್ಟೂರ ಗ್ರಾಪಂನಿಂದ ಕೆರೆ ಹೂಳೆತ್ತಲು 40 ಲಕ್ಷ ರೂ. ಕ್ರಿಯಾಯೋಜನೆ ಅನುಮೋದನೆ ಪಡೆದು ಅರ್ಧಂಭರ್ದ ಕಾಮಗಾರಿ ಮಾಡಿದ್ದಾರೆ. ಆದರೆ ಇದು ಕೇವಲ ಕಾಗದದ ಲೆಕ್ಕಕ್ಕೆ ಮಾತ್ರ ಸೀಮಿತವಾಗಿದ್ದು ಕೆರೆ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ.

ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸಿ
ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ತಾಲೂಕಿನಲ್ಲಿನ ಪ್ರಮುಖ ಕೆರೆಗಳಿಗೆ ನದಿ ನೀರು ತುಂಬಿಸುವ ಯೋಜನೆಗೆ ಸರ್ಕಾರದಿಂದ 140 ಕೋಟಿ ರೂ ಅನುದಾನ ಬಜೆಟ್‌ನಲ್ಲಿ ಮೀಸಲಿರಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ ಇದಕ್ಕೆ ಸಂಬಂಧಪಟ್ಟಂತೆ 2 ವರ್ಷದಿಂದ ಕಾಮಗಾರಿಗಳ ಪ್ರಗತಿ ಮಾತ್ರ ಕುಂಟುತ್ತಾ ಸಾಗಿದೆ. ಒಂದು ವೇಳೆ ಈ ಯೋಜನೆ ಸಾಕಾರಗೊಂಡರೂ ಮೊದಲು ಹೂಳೆತ್ತುವ ಕಾರ್ಯ ಮಾಡುವುದು ಅತಿ ಅವಶ್ಯವಾಗಿದೆ. ಅದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ದೊಡ್ಡಮೊತ್ತದ ಅನುದಾನವೇ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಶಾಸಕರು, ಸಂಸದರು, ಅಧಿಕಾರಿಗಳು ಪûಾತೀತವಾಗಿ ಶ್ರಮಿಸಿದರೆ ಭವಿಷ್ಯದಲ್ಲಿ ಈ ಭಾಗದ ಜನರ, ಜಾನುವಾರುಗಳ ಮತ್ತು ರೈತರ ನೀರಿನ ಬವಣೆಯನ್ನು ಶಾಶ್ವತವಾಗಿ ನೀಗಿಸಬಹುದು ಎಂಬುದು ನಿತ್ಯ ಈ ಕೆರೆಯ ಪ್ರದೇಶದಲ್ಲಿ ದನಕರುಗಳನ್ನು ಮೇಯಿಸಲು ಬರುವ ಕುಂದ್ರಳ್ಳಿ ತಾಂಡಾದ ನಾಥೆಪ್ಪ ನಾಯಕ, ಅಕ್ಕಿಗುಂದ ತಾಂಡಾದ ರೈತ ರಾಮಪ್ಪ ಲಮಾಣಿ, ಮೀನುಗಾರಿಕೆ ಮಾಡುತ್ತಿದ್ದ ಶೆಟ್ಟಿಕೇರಿಯ ಕಿರಣ ಲಮಾಣಿ ಅಭಿಪ್ರಾಯವಾಗಿದೆ.

ಎಲ್ಲ ಕೆರೆಗಳು ಖಾಲಿ ಖಾಲಿ
ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿನ ಕುಂದ್ರಳ್ಳಿ ಕೆರೆ 42 ಎಕರೆ, ಶೆಟ್ಟಿಕೇರೆ 237 ಎಕರೆ, ಬಾಲೆಹೊಸೂರ ಕೆರೆ 80 ಎಕರೆ, ಲಕ್ಷ್ಮೇಶ್ವರ ಕೆರೆ 32 ಎಕರೆಗಳಷ್ಟು ವಿಸ್ತಾರವಾಗಿವೆ. ಇನ್ನು ಜಿಪಂರಾ ಇಲಾಖೆಯ ವ್ಯಾಪ್ತಿಯಲ್ಲಿ ಗೋವನಾಳ, ಯಳವತ್ತಿ, ಗುಲಗಂಜಿಕೊಪ್ಪ, ಶ್ಯಾಬಳಾ, ಉಂಡೇನಹಳ್ಳಿ, ಪು. ಬಡ್ನಿ, ರಾಮಗೇರಿ, ಬಾಲೆಹೊಸೂರ, ಸೂರಣಗಿ, ಬಸಾಪುರ ಇನ್ನಿತರೆ ಗ್ರಾಮಗಳಲ್ಲಿ ಹತ್ತಾರು ಎಕರೆಗಳಷ್ಟು ವಿಸ್ತಾರವುಳ್ಳ ಕೆರೆಗಳಿವೆ. ಇವುಗಳೆಲ್ಲ ಬರಿದಾಗಿವೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.