ಲಕ್ಷ್ಮೇಶ್ವರ ಸಂಪೂರ್ಣ ಸ್ತಬ್ಧ
Team Udayavani, May 25, 2020, 7:31 AM IST
ಲಕ್ಷ್ಮೇಶ್ವರ: ರಾಜ್ಯದಲ್ಲಿ ರವಿವಾರ ಕರ್ಫ್ಯೂ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಪಟ್ಟಣ ಸಂಪೂರ್ಣ ಸ್ತಬ್ಧಗೊಂಡಿತ್ತು. ಸಂಪೂರ್ಣ ಲಾಕ್ಡೌನ್ ಹಿನ್ನೆಲೆಯಲ್ಲಿ ಶನಿವಾರವೇ ಜನತೆ ಅಗತ್ಯ ವಸ್ತುಗಳನ್ನು ಖರೀದಿಸಿದ್ದರು.
ಕರ್ಫ್ಯೂ ಇದ್ದರೂ ಅವಶ್ಯಕ ವಸ್ತುಗಳ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದ್ದರೂ ಪಟ್ಟಣದಲ್ಲಿ ಹೂವು, ಹಣ್ಣು, ತರಕಾರಿ, ದಿನಸಿ ಸೇರಿ ಯಾವುದೇ ವ್ಯಾಪಾರ ನಡೆಯದೇ ಜನರು ಕರ್ಫ್ಯೂ ನಿಯಮಗಳನ್ನು ಪಾಲಿಸಿದ್ದು ಕಂಡುಬಂತು.
ಜನರಿಂದ ತುಂಬಿ ತುಳುಕಿದ್ದ ಮಾರ್ಕೆಟ್ನಲ್ಲಿ ರವಿವಾರ ಯಾರೊಬ್ಬರೂ ಸಂಚರಿಸಲಿಲ್ಲ. ಬೆಳಗ್ಗೆಯಿಂದ ಸಂಜೆವರೆಗೂ ಮಾರ್ಕೆಟ್ ಸಂಪೂರ್ಣವಾಗಿ ಬಂದ್ ಆಗಿದ್ದರಿಂದ ಮಾರ್ಕೆಟ್ ರಸ್ತೆ ಬಿಕೋ ಎನ್ನುತ್ತಿತ್ತು. ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿದ್ದರು. ಬಸ್, ಆಟೋ ಮತ್ತು ಖಾಸಗಿ ವಾಹನಗಳ ಸಂಚಾರ ಇರಲಿಲ್ಲ. ಪೊಲೀಸ್ ಇಲಾಖೆ ಸಿಬ್ಬಂದಿ ವಿನಾಕಾರಣ ಹೊರಗಡೆ ಬಂದವರಿಗೆ ಎಚ್ಚರಿಕೆ ನೀಡಿ, ಕೆಲವರಿಗೆ ಲಾಠಿ ರುಚಿ ತೋರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ