ಆದರ್ಶ ಜೀವನ ನಡೆಸಲು ಸಲಹೆ


Team Udayavani, Jan 16, 2019, 10:31 AM IST

16-january-17.jpg

ಲಕ್ಷ್ಮೇಶ್ವರ: ಸಾಮೂಹಿಕ ವಿವಾಹ ಎಂದರೆ ಅದು ಕೇವಲ ಬಡ ಜನರ ಮದುವೆ ಕಾರ್ಯಕ್ರಮ ಎಂದು ಭಾವಿಸುವುದು ತಪ್ಪು. ಪವಿತ್ರವಾದ ಧಾರ್ಮಿಕ ಕ್ಷೇತ್ರ, ಸಹಸ್ರಾರು ಭಕ್ತರ ಮತ್ತು ಮಠಾಧೀಶರ ಆಶೀರ್ವಾದದೊಂದಿಗೆ ಸಾಮೂಹಿಕ ವಿವಾಹ ಬಂಧನಕ್ಕೊಳಗಾಗುವ ಭಾಗ್ಯ ಜೀವನದ ಸಾರ್ಥಕತೆಯ ಕ್ಷಣವಾಗಿದೆ ಎಂದು ಬಾಲೇಹೊಸೂರಿನ ಶ್ರೀ ಕುಮಾರ ದಿಂಗಾಲೇಶ್ವರ ಸ್ವಾಮಿಗಳು ಹೇಳಿದರು.

ಸಮೀಪದ ಹೂವಿನಶಿಗ್ಲಿ ವಿರಕ್ತಮಠದ ಜಾತ್ರಾಮಹೋತ್ಸವ ಹಾಗೂ ಲಿಂ| ನಿರಂಜನ ಸ್ವಾಮಿಗಳ 9ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ವಿವಾಹ ಮಹೋತ್ಸವದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ದುಡಿಯದ ದರಿದ್ರ, ರೋಗಿ, ವೈರಾಗಿ, ಚಟಗಾರ ಈ ನಾಲ್ವರನ್ನು ಸಂಸಾರಿಕ ಜೀವನದಿಂದ ದೂರ ಇಡಬೇಕು. ವಿವಾಹ ಬಂಧನವೆಂದರೆ ಎರಡು ಮನಸ್ಸು, ಜೀವಗಳು ಒಂದಾಗಿ ಪರಸ್ಪರರು ಹಾಲುಜೇನಿನಂತೆ ಅನ್ಯೋನ್ಯತೆಯಿಂದ ಜೀವನ ಸಾಗಿಸುವ ಪವಿತ್ರ ಬಂಧವಾಗಿದೆ. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ದಂಪತಿಗಳು ಪರಸ್ಪರ ಪ್ರೀತಿ, ವಿಶ್ವಾಸದಿಂದ ತಂದೆ-ತಾಯಿ, ಅತ್ತೆ-ಮಾವ, ಗುರು ಹಿರಿಯರಲ್ಲಿ ವಿಧೇಯತೆ, ತಾಳ್ಮೆಯಿಂದ ಆದರ್ಶಮಯ ಜೀವನಕ್ಕೆ ಅಣಿಯಾಗಬೇಕು. ಸಂಸಾರದ ಗುಟ್ಟು ಬಿಟ್ಟು ಕೊಡದೇ ಪ್ರೀತಿ ತುಂಬಿದ ಸಂಸಾರದ ಜೋಡೆತ್ತಿನ ಬಂಡಿ ಸರಾಗವಾಗಿ ಸಾಗಿದಾಗ ಮಾತ್ರ ಆ ಮನೆ ಸ್ವರ್ಗವಾಗುತ್ತದೆ. ಸಂಪ್ರದಾಯ, ಸಂಸ್ಕೃತಿ, ಧರ್ಮ ಮಾರ್ಗ ಮತ್ತು ಮಠಮಾನ್ಯಗಳ ಸತ್ಸಂಗದೊಂದಿಗೆ ಸಾತ್ವಿಕ ಜೀವನಕ್ಕೆ ಒಗ್ಗಿಕೊಳ್ಳಬೇಕು ಎಂದರು.

ನೇತೃತ್ವವಹಿಸಿದ್ದ ಹುಬ್ಬಳ್ಳಿ ರುದ್ರಾಕ್ಷಿಮಠ ಮತ್ತು ನವಲಗುಂದ ಗವಿಮಠದ ಬಸವಲಿಂಗ ಸ್ವಾಮಿಗಳು, ಸದಾಶಿವಪೇಟೆಯ ಗದಿಗೇಶ್ವರ ಸ್ವಾಮಿಗಳು ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಸ್ವಾಮಿಗಳು ಮಾತನಾಡಿ, ಸಾಮೂಹಿಕ ವಿವಾಹಗಳಿಂದ ಬಡವರು ಮತ್ತು ಅಸಹಾಯಕರಿಗೆ ಆರ್ಥಿಕ ಹೊರೆ ತಪ್ಪಿಸಿದಂತಾಗುತ್ತದೆ. ಅನಾವಶ್ಯಕ ದುಂದು ವೆಚ್ಚ, ಆಡಂಬರ, ವರದಕ್ಷಣೆ ತಡೆದು ಸಾಮೂಹಿಕ ವಿವಾಹದ ಮಹತ್ವ ಸಾರುವ ಉದ್ದೇಶ ಶ್ರೀಮಠದ್ದಾಗಿದೆ. ಲಿಂ| ನಿರಂಜನ ಶ್ರೀಗಳು ಹಾಕಿಕೊಟ್ಟ ಧರ್ಮ ಮಾರ್ಗದಲ್ಲಿ ಭಕ್ತರ ಸಹಕಾರದಿಂದ ಸಮಾಜಮುಖೀ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದಾಗಿ ಹೇಳಿದರು.

ಒಂಬತ್ತು ಜೋಡಿಗಳು ವಿವಾಹ ಬಂಧನಕ್ಕೊಳಗಾದರು. ಸದಾನಂದ ಶಾಸ್ತ್ರಿಗಳು ಮತ್ತು ಮಹದೇವಪ್ಪ ಬಿಷ್ಟಣ್ಣವರ, ಪಿ.ಎಚ್. ಪಾಟೀಲ ನಿರ್ವಹಿಸಿದರು. ಸಂಜೆ 4ಕ್ಕೆ ಗುರುಕುಲ ಶಾಲಾ ಮಕ್ಕಳಿಂದ ಮಲ್ಲಕಂಬ ಪ್ರದರ್ಶನ, ಸಂಜೆ 5ಕ್ಕೆ ವಿಜೃಂಭಣೆಯ ಕಡುಬಿನ ಕಾಳಗ, ಬಳಿಕ ಮಹಾತ್ಮರ ಬದುಕು-ಬೆಳಕು ಚಿಂತನಗೋಷ್ಠಿಯ ಧರ್ಮಸಭೆ ಹೊಸರಿತ್ತಿಯ ಗುದ್ಧಲೀಶ್ವರ ಸ್ವಾಮಿಗಳ ಸಾನಿಧ್ಯದಲ್ಲಿ ಜರುಗಿತು. ವಿವಿಧ ಮಠಾಧೀಶರು, ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಹಾಗೂ ಸದ್ಬಕ್ತಮಂಡಳಿಯವರಿದ್ದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.