ಶಾಲಾ ಆವರಣದಲ್ಲಿ ಭೂ ಕುಸಿತ
Team Udayavani, Aug 30, 2020, 3:27 PM IST
ಗದಗ: ನಗರದ ಐತಿಹಾಸಿಕ ಶ್ರೀ ವೀರನಾರಾಯಣ ದೇವಸ್ಥಾನ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂ. 2ರ ಆವರಣದಲ್ಲಿ ಭೂ ಕುಸಿತ ಉಂಟಾಗಿದ್ದು, ಶಾಲೆ ರಜೆಯಿಂದಾಗಿ ಅನಾಹುತ ತಪ್ಪಿದಂತಾಗಿದೆ.
ಶುಕ್ರವಾರ ಸಂಜೆಯಿಂದ ಶನಿವಾರ ಬೆಳಗಿನ ಅವಧಿಯಲ್ಲಿ ಭೂ ಕುಸಿತ ಉಂಟಾಗಿದೆ ಎನ್ನಲಾಗಿದೆ. ಸುಮಾರು 10 ಅಡಿಗಿಂತ ಹೆಚ್ಚು ಆಳಕ್ಕೆ ಕುಸಿತವಾಗಿದೆ. ಭೂ ಕುಸಿತದ ಸ್ಥಳ ಹೊಂಡದಂತೆ ಗೋಚರಿಸುತ್ತಿದ್ದು, ನಾಲ್ಕೈದು ಅಡಿಗೆ ನೀರು ಕಾಣಿಸುತ್ತಿರುವುದು ಶಾಲೆಯ ಶಿಕ್ಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ನಗರಸಭೆ ಅಭಿಯಂತರ ಬಂಡಿವಡ್ಡರ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಭೂ ಕುಸಿತ ಉಂಟಾದ ಸ್ಥಳವನ್ನು ಮುಚ್ಚಿಸುವಂತೆ ಇದೇ ವೇಳೆ ಶಾಲೆಯ ಶಿಕ್ಷಕರು ಮನವಿ ಮಾಡಿದರು. ನವೆಂಬರ್ನಲ್ಲಿ ಇದೇಪ್ರದೇಶದ ಅಕ್ಕಪಕ್ಕದ ಎರಡು ಮನೆಗಳಲ್ಲಿ ಭೂ ಕುಸಿತ ಉಂಟಾಗಿ, ಅಂತರ್ಜಲ ಮೇಲಕ್ಕೆ ಬಂದಿತ್ತು. ಅದೇ ಘಟನೆ ಇದೀಗ ಮರುಕಳಿಸಿರುವುದು ಅವಳಿ ನಗರದ ಜನತೆಯಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ